ಮತ ಕ್ರೋಢೀಕರಣಕ್ಕೆ ಬಿಜೆಪಿ ತಾಲೀಮು ಶುರು

ಪ್ರಬಲ ಸಮುದಾಯಗಳ ಓಲೈಕೆಗೆ ವಿಜಯೇಂದ್ರ ಅಸ್ತ್ರ ,ಕಾಂಗ್ರೆಸ್‌-ಜೆಡಿಎಸ್‌ನಲ್ಲಿ ತಳಮಳ

Team Udayavani, Nov 14, 2020, 5:24 PM IST

ಮತ ಕ್ರೋಢೀಕರಣಕ್ಕೆ  ಬಿಜೆಪಿ ತಾಲೀಮು ಶುರು

ಬೀದರ: ಜನತಾ ಪರಿವಾರ ಮತ್ತು ಕಾಂಗ್ರೆಸ್‌ ಪಾರುಪತ್ಯ ಮೆರೆದಿರುವ ಬಸವಕಲ್ಯಾಣ ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಜೆಪಿ ಪಡೆ ಸಜ್ಜಾಗಿದೆ. ಚುನಾವಣಾ ಅಖಾಡಕ್ಕಿಳಿದಿರುವ ಸಿಎಂ ಪುತ್ರ, ಬಿಜೆಪಿಯ ಟ್ರಬಲ್‌ ಶೂಟರ್‌ ಬಿ.ವೈ. ವಿಜಯೇಂದ್ರ ಮೊದಲ ತಾಲೀಮಿನಲ್ಲೇ ಪ್ರಬಲ ಸಮುದಾಯಗಳ ಓಲೈಕೆಗೆ ಅಸ್ತ್ರ ಪ್ರಯೋಗಿಸಿದ್ದಾರೆ. ಇದು ಕೈ, ದಳ ಪಡೆಯಲ್ಲಿ ತಳಮಳ ಮೂಡಿಸಿದೆ.

ಶಿರಾ ಮತ್ತು ಆರ್‌.ಆರ್‌. ನಗರ ಉಪ ಚುನಾವಣೆಗೆಲುವಿನ ಹುಮ್ಮಸ್ಸಿನಲ್ಲಿರುವ ಬಿಜೆಪಿ ಚಿತ್ತ ಈಗ ಬಸವಣ್ಣನ ಕರ್ಮಭೂಮಿಯತ್ತ ನೆಟ್ಟಿದೆ. ಕಾಂಗ್ರೆಸ್‌ನ ಶಾಸಕ ಬಿ. ನಾರಾಯಣರಾವ್‌ ನಿಧನ ಬಳಿಕ ತೆರವಾದ ಕ್ಷೇತ್ರಕ್ಕೆ ಶೀಘ್ರ ಉಪ ಚುನಾವಣೆ ನಡೆಯಲಿದ್ದು,ಕೆಆರ್‌ ಪೇಟೆ ಹಾಗೂ ಶಿರಾ ಕ್ಷೇತ್ರದಲ್ಲಿ ಉಸ್ತುವಾರಿ ಹೊತ್ತು ಗೆಲುವಿನ ದಡ ಮುಟ್ಟಿಸಿರುವ ವಿಜಯೇಂದ್ರ ಬಸವಕಲ್ಯಾಣ ಕ್ಷೇತ್ರವನ್ನು ಶತಾಯಗತಾಯ ಬಿಜೆಪಿ ಮಡಿಲಿಗೆ ಹಾಕಿ ಹ್ಯಾಟ್ರಿಕ್‌ ಗೆಲುವಿನ ದಾಖಲೆ ನಿರ್ಮಿಸಲು ತಂತ್ರಗಾರಿಕೆ ಹೆಣೆದಿದ್ದಾರೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಲಿಂಗಾಯತ, ಮರಾಠಾ ಜತೆಗೆ ಮುಸ್ಲಿಂ ಪ್ರಬಲ ಸಮುದಾಯಗಳಾಗಿವೆ. ಸಾಮಾನ್ಯವಾಗಿ ಬಿಜೆಪಿ ಲಿಂಗಾಯತ, ಮರಾಠಾ ಸೇರಿ ಮೇಲ್ವರ್ಗದ ಮತ ನೆಚ್ಚಿಕೊಂಡಿದೆ. ಬೀದರ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತವರು ಜಿಲ್ಲೆ, ಜತೆಗೆ ಜನ ನಾಯಕರು ಎನಿಸಿಕೊಂಡಿದ್ದ ದಿ. ನಾರಾಯಣರಾವರ ವರ್ಚಸ್ಸಿನಿಂದ ಮತ ವಿಭಜನೆ ಸಾಧ್ಯತೆ ಹೆಚ್ಚು.ಹಾಗಾಗಿ ವಿಜಯೇಂದ್ರ ಮೊದಲ ಹಂತದಲ್ಲೇ ಬಿಜೆಪಿ ಪರ ಮತಗಳ ಕ್ರೂಢೀಕರಣಕ್ಕೆ ಜಾತಿ ಓಲೈಕೆ ಆರಂಭಿಸಿದ್ದಾರೆ.

ಮುಖ್ಯವಾಗಿ ಮರಾಠಾ ಸಮುದಾಯದತ್ತ ಚಿತ್ತ ಹರಿಸಿರುವ ವಿಜಯೇಂದ್ರ ಕಲ್ಯಾಣದಲ್ಲಿ ಜರುಗಿದ ಮರಾಠಾ ಬೃಹತ್‌ ಸಭೆಯಲ್ಲಿ ಭಾಗವಹಿಸಿ ಸಮಾಜ ಬಾಂಧವರೊಂದಿಗೆ ಸಮಾಲೋಚನೆ ನಡೆಸಿದ್ದಾರಲ್ಲದೇ ಮರಾಠಾ ಅಭಿವೃದ್ಧಿ ಮಂಡಳಿ ಸ್ಥಾಪನೆ ಈಡೇರುವ ಆಶ್ವಾಸನೆ ನೀಡಿದ್ದಾರೆ. ಅಷ್ಟೇ ಅಲ್ಲ ಸಮಾಜವನ್ನು3ಬಿ ಯಿಂದ 2ಎಗೆ ಸೇರಿಸುವ ಕುರಿತು ಸಿಎಂ ಜತೆ ಚರ್ಚಿಸುವುದಾಗಿ ವಿಶ್ವಾಸ ಮೂಡಿಸಿದ್ದಾರೆ.

ಇನ್ನೂ ಉಪ ಚುನಾವಣೆ ಘೋಷಣೆಗೂ ಮುನ್ನ 500 ಕೋಟಿ ರೂ. ವೆಚ್ಚದ ನೂತನ ಅನುಭವ ಮಂಟಪಕ್ಕೆ ಅಡಿಗಲ್ಲು ನೆರವೇರಿಸಿ ಬಸವ ಭಕ್ತರ ಬಹು ದಿನಗಳ ಕನಸು ನನಸಾಗಿಸುವ ಚಿಂತನೆಬಿಜೆಪಿಯದ್ದು. ಹಾಗಾಗಿ ವಿಜಯೇಂದ್ರ ತಮ್ಮಪ್ರವಾಸದ ವೇಳೆ ಮೊದಲಿಗೆ ಅನುಭವ ಮಂಟಪಕ್ಕೆ ಭೇಟಿ ನೀಡಿ ಮಠಾಧೀಶರೊಂದಿಗೆ ಚರ್ಚೆ ಮಾಡಿ, ಮಹತ್ವದ ಯೋಜನೆಗೆ ಶೀಘ್ರ ಚಾಲನೆ ದೊರೆಯಲಿದೆಎಂದಿದ್ದಾರೆ. ಆ ಮೂಲಕ ಲಿಂಗಾಯತರ ಒಲವು ಪಕ್ಷದ ಪರ ಮತ್ತಷ್ಟು ಗಟ್ಟಿಯಾಗಿಸಲು ಲೆಕ್ಕಾಚಾರ ಹೊಂದಿದ್ದಾರೆ. ಕಾಂಗ್ರೆಸ್‌ ಸಹ ಮತ್ತೂಮ್ಮೆ ಕ್ಷೇತ್ರವನ್ನು “ಕೈ’ ವಶದಲ್ಲಿ ಇಟ್ಟಿಕೊಳ್ಳಲು ಸಜ್ಜಾಗುತ್ತಿದ್ದರೆ, ಜೆಡಿಎಸ್‌ ಸಹ ಪ್ರಬಲ ಪೈಪೋಟಿ ಕೊಡಲು ಚಿಂತನೆ ನಡೆಸಿದೆ.

ಆದರೆ, ಚುನಾವಣೆಗೆ ಮುಹೂರ್ತ ನಿಗದಿಗೂ ಮುನ್ನವೇ ರಾಜಕೀಯ ತಂತ್ರಗಾರಿಕೆ ಮೆರೆಯುತ್ತಿರುವ ವಿಜಯೇಂದ್ರ ಅಖಾಡಕ್ಕೆ ಧುಮುಕಿರುವುದು ಎರಡು ಪಕ್ಷಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

 

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.