ಬೀದರ್ ಗೆ ಆಗಮಿಸಿದ ಬ್ರಿಟನ್ ಯಾತ್ರಾರ್ಥಿ ಮೇಲೆ ನಿಗಾ : ಜಿಲ್ಲಾಧಿಕಾರಿ ರಾಮಚಂದ್ರನ್ ಆರ್
Team Udayavani, Dec 23, 2020, 5:48 PM IST
ಬೀದರ್ : ಬ್ರಿಟನ್ ದಿಂದ ಬೀದರ್ ನಗರಕ್ಕೆ ಆಗಮಿಸಿರುವ ಯಾತ್ರಿಯ ಸಂಪರ್ಕಕ್ಕೆ ಬಂದ ಯಾತ್ರಾರ್ಥಿಯ ಒಂದು ವರ್ಷದ ಪುತ್ರಿ ಸೇರಿದಂತೆ ಎಲ್ಲ ವ್ಯಕ್ತಿಗಳ ಆರೋಗ್ಯ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ತಿಳಿಸಿದ್ದಾರೆ.
ಯಾತ್ರಾರ್ಥಿಯ ಪ್ರಥಮ 8 ಜನ ಸಂಪರ್ಕಿತರನ್ನು ಮತ್ತು ದ್ವಿತೀಯ 10 ಜನ ಸಂಪರ್ಕಿತರೆಲ್ಲರೂ ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇರುವುದರಿಂದ ಎಲ್ಲರಿಗೂ ಮನೆಯಲ್ಲಿ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಯಾತ್ರಾರ್ಥಿಯ ಸಂಪರ್ಕಕ್ಕೆ ಬಂದ ಎಲ್ಲರೂ ಕಡ್ಡಾಯ ಕ್ವಾರಂಟೈನ್ನಲ್ಲಿ ಇದ್ದು ನಿಯಮಗಳ ಪಾಲನೆ ಮಾಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಈ ಎಲ್ಲ ಸಂಪರ್ಕಿತರನ್ನು ಪದೆಪದೇ ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ಮೇಲ್ವಿಚಾರಣೆ ಮಾಡಲು ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಿ ಡಿಎಚ್ಒ ಕ್ರಮ ವಹಿಸಿದ್ದಾರೆ.
ಬ್ರಿಟನ್ದಿಂದ ಭಾರತಕ್ಕೆ ಡಿ. 11 ರಂದು ಮರಳಿದ ಯಾತ್ರಾರ್ಥಿಯು ಕಲಬುರಗಿಯಲ್ಲಿ ಉಳಿದುಕೊಂಡಿದ್ದಾರೆ. ಬಳಿಕ ಕಲಬುರಗಿಯಿಂದ ಡಿ. 21 ರಂದು ಬೀದರ್ ನ ಶಿವನಗರಕ್ಕೆ ಬಂದಿರುತ್ತಾರೆ ಎಂದು ಕಲಬುರಗಿಯ ಡಿಎಚ್ಒ ಅವರು ಬೀದರ್ ಡಿಎಚ್ಒ ಅವರಿಗೆ ಕಲ್ಬುರ್ಗಿಯ ಡಿಎಚ್ಒಗೆ ಡಿ. 22ರ ರಾತ್ರಿ 8 ಗಂಟೆಗೆ ಮಾಹಿತಿ ನೀಡಿದ್ದಾರೆ.
ಈ ಮಾಹಿತಿ ತಿಳಿಯುತ್ತಿದ್ದಂತೆ ಯಾತ್ರಾರ್ಥಿಯ ಪ್ರಥಮ 8ಜನ ಸಂಪರ್ಕಿತರನ್ನು ಮತ್ತು ದ್ವಿತೀಯ 10 ಜನ ಸಂಪರ್ಕಿತರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಡಿ. 23ರಂದು ಬೆಳಗ್ಗೆ ಪತ್ತೆ ಹಚ್ಚಿದ್ದು, ಬೆಳಗ್ಗೆ 10 ಕ್ಕೆ ಎಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಂಟೂ ಜನರ ವರದಿ ನೆಗಟಿವ್: ಯಾತ್ರಾರ್ಥಿಯ ಪ್ರಥಮ 8 ಜನ ಸಂಪರ್ಕಿತರ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದ್ದು, ಎಲ್ಲ ವರದಿಗಳು ನೆಗಟೀವ್ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿ.ಜಿ.ರೆಡ್ಡಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ