ಬೀದರ್‌ನಲ್ಲಿ ಬಿಎಸ್ಪಿ ಅಭ್ಯರ್ಥಿ ಅಖಾಡಕ್ಕೆ


Team Udayavani, Apr 1, 2019, 3:34 PM IST

bid-1
ಬೀದರ: ಕಾಂಗ್ರೆಸ್‌ ನಂಬಿರುವ ಸಾಂಪ್ರದಾಯಿಕ ಮತಗಳ ಮೇಲೆ ಕಣ್ಣಿಟ್ಟಿರುವ ಬಿಎಸ್‌ಪಿ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಅಖೈರುಗೊಳ್ಳಿಸಿದ್ದು, ಏ.4ರಂದು ನಾಮಪತ್ರ ಸಲ್ಲಿಕೆಗೆ ಸಜ್ಜಾಗಿದೆ.
ಮುಸ್ಲಿಂ ಯುನೈಟೆಡ್‌ ಫ್ರಂಟ್‌ ಸಂಘಟನೆಯ ಅಧ್ಯಕ್ಷ ಸೈಯದ್‌ ಶಾನ್‌ ಉಲ್‌ ಹಕ್‌ ಬುಕಾರಿ ಬಿಎಸ್‌ಪಿಯ ಅಧಿಕೃತ ಅಭ್ಯರ್ಥಿಯಾಗಿ ರವಿವಾರ ಬೆಂಗಳೂರಿನಲ್ಲಿ ಪಕ್ಷದ ಮುಖಂಡರಿಂದ ಬಿ.ಫಾರ್ಮ್ ಪಡೆದುಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದಿಂದ ರಾಜಕೀಯಕ್ಕೆ ಬಂದ ಬುಕಾರಿ, ಚಿಟಗುಪ್ಪ ಪುರಸಭೆ ಅಧ್ಯಕ್ಷ, ಅರಣ್ಯ ಅಭಿವೃದ್ಧಿ ನಿಗಮ ಮಂಡಳಿ ಸದಸ್ಯರಾಗಿ ಸೇರಿದಂತೆ ಕಾಂಗ್ರೆಸ್‌ ಪಕ್ಷದ ವಿವಿಧ ಸ್ಥಾನಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತರನ್ನು ಮತ ಪಡೆಯಲು ಮಾತ್ರ ಬಳಸುತ್ತಿವೆ ಹೊರತೂ ಟಿಕೆಟ್‌ ನೀಡಿ ಚುನಾವಣೆಯಲ್ಲಿ ಗೆಲ್ಲಿಸಲು ಯಾವ ಪಕ್ಷದವರು ಮುಂದಾಗುತ್ತಿಲ್ಲ. ಟಿಕೆಟ್‌ಗಾಗಿ ಸಮಾಜದ ಅನೇಕ ಮುಖಂಡರು ಬೇಡಿಕೆ ಸಲ್ಲಿಸಿದರೂ ಪಕ್ಷಗಳು ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದ ಬುಕಾರಿ
ಅವರು, ಇದೀಗ ಬಿಎಸ್‌ಪಿ ಪಕ್ಷಕ್ಕೆ ಸೆರ್ಪಡೆಗೊಂಡು ಚುನಾವಣೆ ಕಣಕ್ಕೆ ಧಮುಕಿದ್ದಾರೆ.
ಸಾಥ್‌ ನೀಡುವರೆ ಅಲ್ಪಸಂಖ್ಯಾತರು?: ಸದ್ಯ ಜಿಲ್ಲೆಯಲ್ಲಿ ಅಲ್ಪಂಖ್ಯಾತ ಮತಗಳ ಕುರಿತು ಚರ್ಚೆ ನಡೆದಿದ್ದು,
ಅಲ್ಪಸಂಖ್ಯಾತರು ಯಾರಿಗೆ ಮಣೆ ಹಾಕುತ್ತಾರೆ ಎಂಬುದು ಎಲ್ಲಾ ಪಕ್ಷಗಳಿಗೆ ತಲೆ ನೋವಾಗಿದೆ. ಕೆಲವರು ಕಾಂಗ್ರೆಸ್‌ ಪಕ್ಷದ ನಡೆ ವಿರುದ್ಧ ಇದ್ದರೆ, ಇನ್ನು ಕೆಲವರು ಯಾವುದೇ ಕಾರಣಕ್ಕೂ ಬಿಜೆಪಿಗೆ ಅಧಿಕಾರ ನೀಡುವುದು ಬೇಡ ಎನ್ನುತ್ತಿದ್ದಾರೆ. ಇನ್ನು ಕೆಲವರು ಕಾಂಗ್ರೆಸ್‌ ಪಕ್ಷಕ್ಕೆ ಹಾನಿ ಉಂಟುಮಾಡುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರನ್ನು ಮುಂದು ಮಾಡಲಾಗುತ್ತಿದೆ
ಎಂಬ ಆರೋಪ ಕೂಡ ಮಾಡುತ್ತಿದ್ದಾರೆ. ಸದ್ಯ ಬಿಎಸ್‌ಪಿಯಿಂದ ಸ್ಪರ್ಧೆ ನಡೆಸಲಿರುವ ಅಲ್ಪಸಂಖ್ಯಾತ ಅಭ್ಯರ್ಥಿಗೆ ಅಲ್ಪಸಂಖ್ಯಾತರು ಸಾಥ್‌ ನೀಡುತ್ತಾರೆಯೇ ಕಾದು ನೋಡಬೇಕಾಗಿದೆ.
ಬಿಎಸ್‌ಪಿ ಮೊದಲ ಗೆಲುವು: 1994ರ ವಿಧಾನಸಭೆ ಚುನಾವಣೆಯಲ್ಲಿ ಬೀದರ ಕ್ಷೇತ್ರದಿಂದ ಮೊದಲ ಬಾರಿಗೆ ಬಿಎಸ್‌ಪಿ ಜಯಗಳಿಸಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಇಲ್ಲಿಂದಲ್ಲೇ ಅಸಂಬ್ಲಿ ಪ್ರವೇಶ ಮಾಡಿತ್ತು. ಸೈಯದ್‌ ಜುಲ್ಫೆàಕರ್‌ ಹಶ್ಮಿ ಬಿಎಸ್‌ ಪಿಯಿಂದ ಶಾಸಕರಾಗಿ ಆಯ್ಕೆ ಆಗಿದ್ದರು. 2009ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜಗನ್ನಾಥ
ಜಮಾದರ 22,568 (ಶೇ.2.90ರಷ್ಟು ) ಮತ ಪಡೆದಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಶಂಕರ ಭಯ್ಯ ಸ್ಪರ್ಧೆ ನಡೆಸಿ 15,079 (ಶೇ.1.58ರಷ್ಟು) ಮತ ಗಳಿಸಿದ್ದರು.
ಅಲ್ಪಸಂಖ್ಯಾತ ಅಭ್ಯರ್ಥಿ ಕಣದಲ್ಲಿರುವ ಕಾರಣ ಎಂಐಎಂ ಸೇರಿದಂತೆ ಹತ್ತಾರು ಮುಸ್ಲಿಂ ಸಂಘಟನೆಗಳು ಹಾಗೂ ಹಿಂದುಳಿದ ವರ್ಗಗಳ ಜನರು ಬೆಂಬಲ ನೀಡುವ ವಿಶ್ವಾಸವಿದೆ. ಅಲ್ಲದೆ, ಯಾರಿಂದ ಅನ್ಯಾಯ ಆಗಿದೆಯೋ ಅವರ ವಿರುದ್ಧ
ಮತ ಚಲಾಯಿಸುವ ಮೂಲಕ ಜನರು ಬಿಸಿ ಮುಟ್ಟಿಸುತ್ತಾರೆ ಎಂಬ ವಿಶ್ವಾಸವಿದೆ. ಬಿಎಸ್‌ಪಿ ಈ ಚುನಾವಣೆಯಲ್ಲಿ ಹೊಸ ಇತಿಹಾಸ ಸೃಷ್ಠಿ ಮಾಡುತ್ತದೆ. ಕಾಂಗ್ರೆಸ್‌-ಬಿಜೆಪಿ ಎರಡು ಪಕ್ಷಗಳಿಗೆ ಸೂಕ್ತ ಪೈಪೋಟಿ ನೀಡುತ್ತೇವೆ.
 ಅಂಕುಶ ಗೋಖಲೆ, ಬಿಎಸ್‌ಪಿ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.