ಬಸ್- ಬೈಕ್ ನಡುವೆ ರಸ್ತೆ ಅಪಘಾತ: ಆರ್ ಎಸ್ಎಸ್ ಮುಖಂಡ ಸಾವು
Team Udayavani, Jan 24, 2021, 3:56 PM IST
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ರವಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರ್ಎಸ್ಎಸ್ ಹಿರಿಯ ಮುಖಂಡ ಸುಧಾಕರ ದೇಶಪಾಂಡೆ ಸಾವನ್ನಪ್ಪಿದ್ದಾರೆ.
ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆರ್ಎಸ್ಎಸ್ನ ವಿಭಾಗೀಯ ಪ್ರಮುಖ ಸುಧಾಕರ ದೇಶಪಾಂಡೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರ ಜತೆಯಲ್ಲೇ ಇದ್ದ ಮತ್ತೊಬ್ಬ ವ್ಯಕ್ತಿಗೆ ಗಾಯವಾಗಿದೆ. ಈ ಕುರಿತು ಭಾಲ್ಕಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹುಣಸೋಡು ಬ್ಲಾಸ್ಟ್ ಪ್ರಕರಣದ ತನಿಖೆ ಸಿಬಿಐಗೆ ವಹಿಸಲ್ಲ: ಆರ್.ಅಶೋಕ್
ದಶಕಗಳ ಕಾಲ ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಲವು ಕಾರ್ಯಗಳಲ್ಲಿ ಸುಧಾಕರ ದೇಶಪಾಂಡೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಇದನ್ನೂ ಓದಿ: ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ: ರಾಮದಾಸ್