ಸಿಎಎ ಬೆಂಬಲಿಸಿ ಜನಜಾಗೃತಿ


Team Udayavani, Jan 4, 2020, 12:08 PM IST

bidar-tdy-1

ಬಸವಕಲ್ಯಾಣ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ತಾಲೂಕು ಬಿಜೆಪಿ ಘಟಕದ ವತಿಯಿಂದ ಶುಕ್ರವಾರ ನಗರದ ವಿವಿಧ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ನಗರದ ತ್ರಿಪುರಾಂತ ಪ್ರವಾಸಿ ಮಂದಿರ ಹತ್ತಿರದ ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಅಶೋಕ ವಕಾರೆ ಹಾಗೂ ನಗರಾಧ್ಯಕ್ಷ ಕೃಷ್ಣಾ ಗೋಣೆ ಜನಜಾಗೃತಿಗೆ ಚಾಲನೆ ನೀಡಿದರು.

ಈ ವೇಳೆ ಅಶೋಕ ವಕಾರೆ ಮಾತನಾಡಿ, ಪ್ರಧಾನಿ ಮೋದಿ ಅವರು ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಕೆಲ ಸಮಾಜಘಾತುಕ ಶಕ್ತಿಗಳು ದೇಶದಲ್ಲಿ ಅಪಪ್ರಚಾರ ಮಾಡಿ ಶಾಂತಿ ಕದಡುವ ಕೆಲಸ ಮಾಡುತ್ತಿವೆ. ಸಿಎಎಯಿಂದ ರಾಷ್ಟ್ರದಲ್ಲಿನ ಮುಸ್ಲಿಂ ಬಾಂಧವರಿಗೆ ಯಾವುದೇ ತೊಂದರೆ ಇಲ್ಲ. ಆದ್ದರಿಂದ, ಈ ಕಾಯ್ದೆ ಕುರಿತು ಜನರಿಗೆ ಮತ್ತಷ್ಟು ತಿಳಿ ಹೇಳುವ ಉದ್ದೇಶದಿಂದ ನಾವು ಮನೆಮನೆಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.

ಕೃಷ್ಣಾ ಗೋಣೆ ಮಾತನಾಡಿ, ನೆರೆ ದೇಶಗಳಾದ ಪಾಕಿಸ್ತಾನ್‌, ಅಫಘಾನಿಸ್ತಾನ್‌ ಮತ್ತು ಬಾಂಗ್ಲಾ ದೇಶಗಳಿಂದ ಭಾರತಕ್ಕೆವಲಸೆ ಬಂದ ಧಾರ್ಮಿಕ ಅಲ್ಪಸಂಖ್ಯಾತರನ್ನು ಕಾಪಾಡುವ ನಿಟ್ಟಿನಲ್ಲಿ ರಚನೆಯಾದ ಕಾಯ್ದೆ ಇದಾಗಿದ್ದು, ಇದರ ಪ್ರಕಾರ ನೆರೆ ರಾಷ್ಟರಗಳಿಂದ ವಲಸೆ ಬಂದ ಹಿಂದೂ, ಸಿಖ್‌, ಪಾರ್ಸಿ, ಕ್ರೈಸ್ತ, ಬೌದ್ಧ, ಜೈನ ಮತ್ತು ಯಹೂದಿಗಳು ನಿಗದಿತ ದಾಖಲೆಗಳನ್ನು ಇಟ್ಟುಕೊಂಡು ಭಾರತದಲ್ಲಿ 11 ವರ್ಷಗಳು ನೆಲೆಸಿದರೆ ಅವರಿಗೆ ಭಾರತೀಯ ಪೌರತ್ವ ಕೊಡಲಾಗುತ್ತಿತ್ತು. ಈಗ ಎನ್‌ಡಿಎ ಸರ್ಕಾರ ಇದೇ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಆದ್ದರಿಂದ, ಮುಸ್ಲಿಂ ಬಾಂಧವರು ಸೇರಿದಂತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಸಿಎಎ ಕಾಯ್ದೆಯನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು. ಇದು ದೇಶದ ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಎಂದರು.

ಬಿಜೆಪಿ ಮುಖಂಡ ಶರಣು ಸಲಗರ ಮಾತನಾಡಿ, ಭವ್ಯ ಭಾರತಕ್ಕೆ ಸಿಎಎ ಬಲು ಸಹಾಯಕಾರಿಯಾಗಿದ್ದು, ಈ ಕುರಿತು ವಿವಿಧ ಸಂಘಟನೆಗಳು ಹಾಗೂ ಸಂಘ-ಸಂಸ್ಥೆಗಳು ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ತಿಳಿಸಿವೆ. ದೆಹಲಿಯ ಜಾಮಾ ಮಸೀದಿಯ ಮುಖ್ಯಸ್ಥರಾದ ಶಾಹಿ ಇಮಾಮ್‌ ಸೈಯದ್‌ ಅಹ್ಮದ್‌ ಬುಖಾರಿ ಅವರೂ ಕೂಡ ಸಿಎಎಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ಎಂದು ಅಭಯ ನೀಡಿದ್ದಾರೆ. ಹಾಗಾಗಿ, ಮುಸ್ಲಿಂ ಬಾಂಧವರು ಹೆದರಬೇಕಿಲ್ಲ.

ಸಿಎಎ ಕುರಿತಾಗಿರುವ ವದಂತಿಗಳನ್ನು ನಿರ್ಲಕ್ಷಿಸಿ. ತಮ್ಮ  ವೋಟ್‌ ಬ್ಯಾಂಕ್‌ ಕಾಪಾಡಿಕೊಳ್ಳುವ ಉದ್ದೇಶದಿಂದ ಕೆಲ ವಿರೋಧಿ ನಾಯಕರು ಸಿಎಎಯನ್ನು ಋಣಾತ್ಮಕವಾಗಿ ಬಳಸಿಕೊಳುತ್ತಿದ್ದಾರೆ ಎಂದು ಆರೋಪಿಸಿದರು. ನಂತರ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆ ಮೂಲಕ ಮನೆ-ಮನೆಗೆ ತೆರಳಿ ಕರಪತ್ರ ವಿತರಣೆ ಮಾಡುವ ಮೂಲಕ ಜಾಗೃತಿ ಮೂಡಿಸಿದರು.

ಸೂರ್ಯಕಾಂತ ಚಿಲ್ಲಾಬಟ್ಟೆ, ಶೋಭಾ ತೆಲಂಗ್‌, ಮಹಾದೇವ ಹಲ್ಸೆ, ಸಂಜೀವ್‌ ಜಾಧವ್‌, ನಗರ ಪ್ರಧಾನ ಕಾರ್ಯದರ್ಶಿ ರವಿ ಸ್ವಾಮಿ ನಾರಾಯಣಪೂರ, ಮನೋಜ ತಂಬೂರ್ಚಿ, ನಗರಸಭೆ ಸದಸ್ಯರಾದ ಲಲಿತಾಬಾಯಿ ಡಾಂಗೆ, ಮಾರುತಿ ಲಾಡೆ, ಬಿಜೆಪಿ ಯುವ ಮುಖಂಡ ಶರಣು ಸಲಗರ, ಮರೇಪ್ಪಾ ಪಾಟೀಲ, ಸಂಜು ಬಿರಾದಾರ, ಸಂಗಮೇಶ ಮುಚಳಂಬ, ದಿಪಕ್‌ ಪುರಂತ್‌, ಮಂಜುಳಾ ಪಾಂಚಾಳ, ಅಮುಲ್‌ ಸದಾನಂದೆ, ಮಂಜುನಾಥ್‌ ರೆಡ್ಡಿ, ವೆಂಕಟೇಶ್‌ ಔರಾದಕರ, ಸುಭಾಷ್‌ ಬಿರಾದಾರ, ರಾಜಕುಮಾರ ಜಾಧವ್‌, ಧನರಾಜ ಮುಡಬಿ ಇದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.