![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಹೃದಯ ಸಂಬಂಧಿ ಕಾಯಿಲೆ ನಿರ್ಲಕ್ಷ್ಯ ಸಲ್ಲ: ಡಾ| ಕೌಜಲಗಿ
Team Udayavani, Apr 16, 2018, 3:37 PM IST
![bid-1.jpg](https://www.udayavani.com/wp-content/uploads/2018/04/16/bid-1.jpg)
ಬಸವಕಲ್ಯಾಣ: ಹೃದಯ ಸಂಬಂಧಿ ಕಾಯಿಲೆಗಳು ಕಂಡು ಬಂದಲ್ಲಿ ನಿರ್ಲಕ್ಷ್ಯ ವಹಿಸದೇ ತಕ್ಷಣ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಲಬುರಗಿಯ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಕೇಂದ್ರದ ಹೃದಯ ತಜ್ಞ ಡಾ| ಕೌಜಲಗಿ ಹೇಳಿದರು.
ನಗರದ ಬಸವೇಶ್ವರ ಸಿಬಿಎಸ್ಇ ಶಾಲೆಯಲ್ಲಿ ಬಸವ ಜಯಂತಿ ಹಾಗೂ ಮಹಾತ್ಮ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಬಸವೇಶ್ವರ ದೇವಸ್ಥಾನ ಪಂಚಕಮಿಟಿ ಹಾಗೂ ವಿಶ್ವಸ್ಥ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಹೃದಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಹೃದಯ ಕಾಯಿಲೆ ಇದೆಯೋ ಇಲ್ಲವೋ ಎಂಬ ಅನುಮಾನ ಇರುತ್ತದೆ. ಎದೆ ನೋವು ಕಾಣಿಸಿಕೊಂಡರೆ ಯಾರೊಬ್ಬರುಅದನ್ನು ನಿರ್ಲಕ್ಷಿಸಬಾರದು ಎಂದರು.
ಮಧ್ಯ ವಯೋಮಾನದವರು, ವಯೋವೃದ್ಧರಲ್ಲಿ ಹೃದಯ ಕಾಯಿಲೆ ಸಹಜವಾಗಿ ಇರುತ್ತವೆ. ಧೂಮ್ರಪಾನ, ಮದ್ಯಪಾನ, ಮಧುಮೇಹ ಇರುವವರು ಎದೆ ನೋವು ನಿರ್ಲಕ್ಷಿಸದೆ ತಜ್ಞ ವೈದ್ಯರನ್ನು ಕಾಣಬೇಕು. ಎಲ್ಲ ಅಂಗಗಳಿಗೆ ರಕ್ತ ಹರಿಯಲು ಹೃದಯ ಬಡಿತ ಅವಶ್ಯ. ನಿತ್ಯದ ಚಟುವಟಿಕೆಗಳಲ್ಲಿ ಹೃದಯ ಮೌನವಾಗಿ ಕೆಲಸ ಮಾಡುತ್ತಿರುತ್ತದೆ. ಹೃದಯ ನಿಂತರೆ ಜೀವ ಮತ್ತು ಜೀವನ ನಿಲ್ಲುತ್ತವೆ ಎಂದರು.
ಮಕ್ಕಳಿಗೆ ವಿದ್ಯಾಭ್ಯಾಸದ ಜತೆಗೆ ದೈಹಿಕ ಚಟುವಟಿಕೆಗಳು ಅಗತ್ಯ. ಅಂಗಾಂಗಗಳ ಓಡಾಟ ಮತ್ತು ಚಟುವಟಿಕೆಗಳು ಚೆನ್ನಾಗಿದ್ದರೆ ಹೃದಯ ಕ್ರಿಯಾಶೀಲವಾಗಿರುತ್ತದೆ. ಆಹಾರ ಪದ್ಧತಿಯಲ್ಲಿ ಹಣ್ಣು ತರಕಾರಿ ನಾರಿನಂಶ ಬಳಕೆಯಿಂದ ದೇಹದಲ್ಲಿ ಕೊಬ್ಬಿನ ಪ್ರಮಾಣ ಕಡಿಮೆಯಾಗುತ್ತದೆ ಎಂದರು.
ಬಿಡಿಪಿಸಿ ಅಧ್ಯಕ್ಷ ವೀರಣ್ಣಾ ಹಲಶೆಟ್ಟೆ ಅಧ್ಯಕ್ಷತೆ ವಹಿಸಿದ್ದರು. ಡಾ| ವಿಜಯಕುಮಾರ ಅಂತಪ್ಪನವರು, ಡಾ| ಜಿ.ಎಸ್.ಭುರಾಳೆ ಮಾತನಾಡಿದರು. ಡಾ| ಪೃಥ್ವಿರಾಜ ಬಿರಾದಾರ, ಡಾ| ಸದಾನಂದ ಪಾಟೀಲ, ಡಾ| ಸುರ್ಯಕಾಂತ ಬಾಳೂರಕರ್, ಬಿಡಿವಿಸಿ ಅಧ್ಯಕ್ಷ ಮಲ್ಲಯ್ನಾ ಹಿರೇಮಠ, ಬಿಡಿಪಿಸಿ ಉಪಾಧ್ಯಕ್ಷ ಜಗನ್ನಾಥ ಖೂಬಾ, ಕಾರ್ಯದರ್ಶಿ ರೇವಣಪ್ಪ ರಾಯವಾಡೆ, ಸಹಕಾರ್ಯದರ್ಶಿ ಬಸವರಾಜ ಬಾಲಕಿಲೆ, ವಿಶ್ವಸ್ಥರಾದ ಸೋಮಶೇಖರಯ್ನಾ ವಸ್ತ್ರದ, ಬಿಡಿಪಿಸಿ ನಿರ್ದೇಶಕರಾದ ಸುಭಾಷ ಹೊಳಕುಂದೆ,
ಮಲ್ಲಿಕಾರ್ಜುನ್ ಕುರಕೋಟೆ, ಕಾಶಪ್ಪಾ ಸಕ್ಕರಭಾವಿ, ಮಲ್ಲಿಕಾರ್ಜುನ್ ಚಿರಡೆ, ಅನೀಲಕುಮಾರ ರಗಟೆ, ಶಿವರಾಜ ಶಾಶಟ್ಟೆ ಉಪಸ್ಥಿತರಿದ್ದರು. ಕೋಶಾಧ್ಯಕ್ಷ ಅಶೋಕ ನಾಗರಾಳೆ ಸ್ವಾಗತಿಸಿದರು. ಜ್ಯೋತಿ ತೂಗಾವೆ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.