ಗೃಹ ಬಂಧನದಲ್ಲಿರದ ಕೋವಿಡ್-19 ಶಂಕಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
Team Udayavani, Mar 23, 2020, 9:25 PM IST
ಸಾಂದರ್ಭಿಕ ಚಿತ್ರ
ಬೀದರ: ದುಬೈನಿಂದ ಆಗಮಿಸಿದ್ದ ಕೋವಿಡ್-19 ಶಂಕಿತ ವ್ಯಕ್ತಿಗೆ ಗೃಹ ಬಂಧನದಲ್ಲಿರುವಂತೆ ವೈದ್ಯಾಧಿಕಾರಿಗಳು ಸೂಚಿಸಿದ್ದರೂ ಗ್ರಾಮದಲ್ಲಿ ಬೇಕಾಬಿಟ್ಟಿ ಓಡಾಡುತ್ತಿದ್ದ ಜಿಲ್ಲೆಯ ನಿರ್ಣಾ ಗ್ರಾಮದ ವ್ಯಕ್ತಿ ವಿರುದ್ಧ ಮನ್ನಾಎಖೇಳ್ಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವ್ಯಕ್ತಿ ಮಾ. 12ರಂದು ದುಬೈನಿಂದ ಸ್ವಗ್ರಾಮ ನೀರ್ಣಾಕ್ಕೆ ಆಗಮಿಸಿದ್ದ. ನೀರ್ಣಾ ವೈದ್ಯಾಧಿಕಾರಿ ಮನ್ನಾಎಖೇಳ್ಳಿ ಠಾಣೆಯ ಪಿಎಸ್ಐ ಗ್ರಾಮಕ್ಕೆ ಭೇಟಿ ನೀಡಿ ವ್ಯಕ್ತಿಯನ್ನು ಹೊರಗಡೆ ಓಡಾಡದೆ ಗೃಹ ಬಂಧನದಲ್ಲಿ ಇರುವಂತೆ ಮತ್ತು ಕೋವಿಡ್-19 ಸೋಂಕು ಮುಂಜಾಗೃತೆ ವಹಿಸುವಂತೆ ಸೂಚಿಸಿದ್ದರು. ಆದರೆ, ವ್ಯಕ್ತಿ ಮಾ. 22ರಂದು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಸುತ್ತಾಡಿದ್ದು, ಇದರಿಂದ ಗ್ರಾಮಸ್ಥರು ಭಯ ಭೀತರಾಗಿದ್ದರು. ಮಾಹಿತಿ ತಿಳಿದ ವೈದ್ಯಾಧಿಕಾರಿ ಗ್ರಾಮಕ್ಕೆ ಆಗಮಿಸಿ ಬ್ರಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಗೃಹ ಬಂಧನದಲ್ಲಿರದೆ ಬೇಕಾಬಿಟ್ಟಿಯಾಗಿ ಓಡಾಡಿದ ವ್ಯಕ್ತಿ ವಿರುದ್ಧ ಕಲಂ 269, 270 ಐಪಿಸಿ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ