ಬಕ್ರೀದ್‌-ಸ್ವಾತಂತ್ರ್ಯೋತ್ಸವದಲ್ಲಿ ಶಾಂತಿ ಪಾಲಿಸಿ

•ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯದೇ ವಿಲೇವಾರಿ ಮಾಡಿ•ಹಬ್ಬದ ವೇಳೆ ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಕ್ರಮ

Team Udayavani, Aug 6, 2019, 3:05 PM IST

bidar-tdy-1

ಬೀದರ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಕ್ರೀದ್‌ ಮತ್ತು ಸ್ವಾತಂತ್ರ್ಯ ದಿನಾಚರಣೆ ಶಾಂತಿ ಸಭೆಯಲ್ಲಿ ವಿವಿಧ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಬೀದರ: ಜಿಲ್ಲೆಯಲ್ಲಿ ಬಕ್ರೀದ್‌ ಮತ್ತು ಸ್ವಾತಂತ್ರ್ಯ ದಿನಾಚರಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಜನರು ಕಾನೂನು ಪಾಲನೆ ಮಾಡಬೇಕು. ಯಾರಿಗೂ ತೊಂದರೆಯಾಗದಂತೆ ಹಬ್ಬ ಆಚರಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್‌ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬಕ್ರೀದ್‌ ಮತ್ತು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಸ್ವಚ್ಛನಗರ ಎಂದೇ ಹೆಸರಾದ ಮೈಸೂರಿನಲ್ಲಿ ಬೀದರನಲ್ಲಿರುವಂತಹ ರಸ್ತೆಗಳು ಇಲ್ಲ. ಇಲ್ಲಿಗೆ ಬರುವ ಸಾಕಷ್ಟು ಜನರು ಬೀದರ ಸಿಟಿ ಚೆನ್ನಾಗಿದೆ ಎಂದು ಹೇಳುತ್ತಾರೆ. ಬೀದರ ಐತಿಹಾಸಿಕ ಪಟ್ಟಣವಾಗಿದ್ದು, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕಿದಲ್ಲಿ ಪಟ್ಟಣದಲ್ಲಿ ಗಲೀಜು ಉಂಟಾಗಲಿದೆ. ಇದಕ್ಕೆ ಯಾರೂ ಕೂಡ ಅವಕಾಶ ಮಾಡಿಕೊಡಬಾರದು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ನಗರಸಭೆ ಹೇಳುವ ಪ್ರಕಾರ ಅದರ ವಿಲೇವಾರಿಗೆ ಸಹಕಾರ ನೀಡೋಣ ಎಂದು ಹೇಳಿದರು.

ಹಬ್ಬದ ಸಂದರ್ಭದಲ್ಲಿ ನಗರದ ಕೆಲವು ಕಡೆಗಳಲ್ಲಿ ಸಹಜವಾಗಿ ಟ್ರಾಫಿಕ್‌ ಕಿರಿಕಿರಿಯಾಗುತ್ತದೆ. ಓಲ್ಡ್ ಸಿಟಿ, ನಯಾ ಕಮಾನ್‌ ಮತ್ತು ಬಸ್‌ ನಿಲ್ದಾಣದಲ್ಲಿ ಟ್ರಾಫಿಕ್‌ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡುತ್ತೇವೆ. ಈ ಹಿನ್ನೆಲೆಯಲ್ಲಿ ಇಬ್ಬರು ಸಿಪಿಐ, 12 ಜನರು ಪಿಎಸ್‌ಐ, 22 ಜನರು ಎಎಸ್‌ಐ ಮತ್ತು 96 ಇನ್ನಿತರ ಸಿಬ್ಬಂದಿ ಸೇರಿ ಒಟ್ಟು 110 ಜನರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ವಿವರಿಸಿದರು.

ನಗರಸಭೆ ಪೌರಾಯುಕ್ತ ಬಸಪ್ಪ ಮಾತನಾಡಿ, ನಗರದ 1ರಿಂದ 14 ವಾರ್ಡ್‌ಗಳಿಗೆ ಎರಡು ವಾಹನಗಳನ್ನು ಕಳಿಸುತ್ತೇವೆ. ಉಳಿದ ವಾರ್ಡ್‌ಗಳಿಗೆ ಒಂದು ವಾಹನ ಕಳಿಸುತ್ತೇವೆ. ಕಡ್ಡಾಯ ಈ ವಾಹನಗಳಲ್ಲಿಯೇ ತ್ಯಾಜ್ಯ ಹಾಕಿ ಸ್ವಚ್ಛತೆಗೆ ಸಹಕರಿಸಬೇಕು. ಈ ವಾಹನಗಳಲ್ಲಿ ಸೂಪರವೈಸರ್‌, ಪರಿಸರ ಅಭಿಯಂತರರು ಕೂಡ ಇರುತ್ತಾರೆ. ತಾವು ಕರೆ ಮಾಡಿದ ಕೂಡಲೇ ತಮ್ಮಲ್ಲಿಗೆ ವಾಹನ ಕಳುಹಿಸುತ್ತೇವೆ. ಈ ವಾಹಗಳನ್ನು ತಮ್ಮಲ್ಲಿ ಕಳುಹಿಸುವುದರ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ, ಆಟೋ ಮೂಲಕ ಪ್ರಚಾರ ಮಾಡಿ ತಮಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ಇದಕ್ಕೂ ಮೊದಲು ಸಭೆಯಲ್ಲಿದ್ದ ನಾಗರಿಕರು ಸಭೆಗೆ ಹಲವಾರು ಸಲಹೆ ನೀಡಿದರು. ಬೀದರ ಶಾಂತಿಗೆ ಹೆಸರಾದ ಜಿಲ್ಲೆಯಾಗಿದೆ. ಹಲವಾರು ಧರ್ಮಿಯರು ಇರುವ ಈ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ರೀತಿಯ ಗಲಭೆಗಳು ನಡೆದಿಲ್ಲ. ಎಲ್ಲರೂ ಸೇರಿ ಶಾಂತಿಯಿಂದ ಹಬ್ಬ ಆಚರಣೆ ಮಾಡುವುದಾಗಿ ಸಭೆಯಲ್ಲಿದ್ದ ನಾಗರಿಕರು ತಿಳಿಸಿದರು. ಹಬ್ಬದ ದಿನದಂದು ನಯಾಕಮಾನ್‌ ಹಾಗೂ ಇನ್ನಿತರ ಕಡೆಗಳಲ್ಲಿ ಸಾಕಷ್ಟು ಟ್ರಾಫಿಕ್‌ ಜಾಮ್‌ ಉಂಟಾಗಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತದೆ. ಆದ್ದರಿಂದ ಇದಕ್ಕೆ ಅಗತ್ಯ ವ್ಯವಸ್ಥೆ ಮಾಡುವಂತೆ ಕೆಲವರು ಪೊಲೀಸ್‌ ಇಲಾಖೆಗೆ ಮನವಿ ಮಾಡಿದರು. ಸಾಜೀದ್‌ ಪಾಟೀಲ, ದೇವೇಂದ್ರ ಸೋನಿ, ಸೈಯ್ಯದ್‌ ಖಾದ್ರಿ, ನಬಿ ಖುರೇಷಿ, ಟೌನ್‌ ಸಿಪಿಐ ರಾಜಣ್ಣ, ಡಿಎಸ್‌ಪಿ ಬಸವೇಶ್ವರ ಹೀರಾ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.