ಅಕ್ಷರ ಸಂಸ್ಕೃತಿ ಬೆಳೆಸುವುದು ಅಗತ್ಯ


Team Udayavani, Nov 6, 2017, 12:24 PM IST

bid-1.jpg

ಬೀದರ: ಓದುವುದು, ಕಾವ್ಯ ರಚಿಸುವುದು, ಪುಸ್ತಕ ಪ್ರಕಟಿಸಿ ಅಕ್ಷರ ಸಂಸ್ಕೃತಿ ಬೆಳೆಸುವುದು ಈ ಹೊತ್ತಿನ ಬಹು ದೊಡ್ಡ
ಅಗತ್ಯವಾಗಿದೆ ಎಂದು ಕಲಬುರಗಿಯ ನಿವೃತ್ತ ಪ್ರಾಧ್ಯಾಪಕ ಡಾ| ಕಾಶಿನಾಥ ಅಂಬಲಗೆ ಹೇಳಿದರು.

ಟೋಕರೆ ಪರಿವಾರದ ಕಲ್ಯಾಣ ಮಹೋತ್ಸವ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕಾವ್ಯ ಕುಂಚ ಗಾಯನ, ಸಾಂಸ್ಕೃತಿಕ ಸಂಜೆ ಹಾಗೂ “ಅಕ್ಷರ ಕಾರಂಜಿ’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಟೋಕರೆ ಪರಿವಾರ ಈ ಅಗತ್ಯ ಪೂರೈಸಿದ್ದು, ಇದೊಂದು ಅಪರೂಪದ ಕಾರ್ಯಕ್ರಮ ಎಂದು ಬಣ್ಣಿಸಿದರು. ಜನಪರ ಜೀವಪರ ಕಾಳಜಿಯುಳ್ಳವರಿಂದ ಮಾತ್ರ ಇಂಥ ಕಾರ್ಯಸಾಧ್ಯ. ಬಸವಾದಿ ಶರಣರ ವೈಚಾರಿಕ ನಿಲುವುಗಳೇ ಇಂಥ ಕಾರ್ಯಗಳಿಗೆ ಸತ್ಪ್ರೇರಣೆ ಎಂದರು.

ಸಾಹಿತ್ಯ ಮತ್ತು ಸಂಸ್ಕೃತಿಯು ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡುತ್ತವೆ. ಆದ್ದರಿಂದ ಯುದ್ಧ- ಹಿಂಸೆಗಳನ್ನು
ಸಾಹಿತ್ಯದಿಂದ ಎದುರಿಸೋಣ ಎಂದು ಹೇಳಿದರು.

ಕಸಾಪ ಕಾರ್ಯದರ್ಶಿ ಡಾ| ಬಸವರಾಜ ಬಲ್ಲೂರ ಮಾತನಾಡಿ, ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಚಟುವಟಿಕೆಗಳ
ಜೊತೆಗೆ ಸಮಾಜೋ ಸಾಂಸ್ಕೃತಿಕ ಚಟುವಟಿಕೆಗಳ ಕಡೆ ಮುಖ ಮಾಡಿದೆ. ಅಕ್ಷರ ಪ್ರೀತಿಯಿಂದ 15 ಜಿಲ್ಲಾ ಕನ್ನಡ
ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣ ಸೇರಿದಂತೆ ಹಲವಾರು ಮೌಲಿಕ ಕೃತಿಗಳನ್ನು ಹೊರತಂದ ಪರಿಷತ್ತು, ಜಿಲ್ಲಾ ಪ್ರಾತಿನಿಧಿಕ ಸಂಕಲನ ಕಿರಿಯರು, ಹಿರಿಯರು ಸೇರಿದಂತೆ 112 ಜನ ಕವಿಗಳ ಕವಿತೆಗಳನ್ನು ಒಳಗೊಂಡ ಮಹತ್ವಕಾಂಕ್ಷೆಯ ಕೃತಿಯಾಗಿದೆ ಎಂದರು.

ಮದುವೆ ಆಮಂತ್ರಣ ಪತ್ರದಲ್ಲಿ ಸಿದ್ದ ಪಂಚಾಂಗದ ನಿರ್ದಿಷ್ಟ ಸಮಯ ಸೇರಿಸದೆ ಬಸವ ತತ್ವವನ್ನು ನಿಜಾಚರಣೆಗೆ ತಂದಿದ್ದು ಕುವೆಂಪು ಅವರ ಪತ್ರ ಪೂರ್ಣಚಂದ್ರ ತೇಜಸ್ವಿಯವರ ಮದುವೆಯ ಆಮಂತ್ರಣ ನೆನಪಿಸುತ್ತದೆ ಎಂದು ಸ್ಮರಿಸಿದರು.

ಶಾಸಕ ರಹೀಮ್‌ ಖಾನ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶುದ್ಧ ವೈಚಾರಿಕತೆಯ ಪ್ರತಿಪಾದನೆ, ಬಸವ
ತತ್ವದ ನಿಜಾಚರಣೆಯೆಂದು ಬಣ್ಣಿಸಿದರು. ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿವಿ ಡೀನ್‌ ಡಾ| ಸುರೇಶ ಪಾಟೀಲ, ಬೀಜ ವಿಜ್ಞಾನ ಮತ್ತು ತಾಂತ್ರಿಕತೆ ಮುಖ್ಯಸ್ಥ ಡಾ| ಎಸ್‌.ಎನ್‌. ವಾಸುದೇವನ್‌, ಉದ್ಯೋಗ ಮತ್ತು ತರಬೇತಿ ಇಲಾಖೆ ಜಂಟಿ ನಿರ್ದೇಶಕ ವೈಜಗೊಂಡ, ಹಿರಿಯ ಸಾಹಿತಿ ಪಂಚಾಕ್ಷರಿ ಪುಣ್ಯಶೆಟ್ಟಿ, ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಲಕ್ಷ್ಮೀಬಾಯಿ ಚಲುವಾ, ಶರಣಬಸಪ್ಪ ಚಲುವಾ, ಬಸವಕುಮಾರ, ಮಂಗಳಗೌರಿ, ದೇಶಾಂಶ ಹುಡಗಿ. ಎಂ.ಜಿ. ದೇಶಪಾಂಡೆ, ಹಂಸಕವಿ, ಗೋಪಾಲಕೃಷ್ಣ ವಂಡಸೆ, ವಿಜಯಕುಮಾರ ಗೌರೆ, ಸಂಜೀವಕುಮಾರ ಅತಿವಾಳೆ, ಸುನೀತಾ ದಾಡಗೆ, ಶ್ರೀದೇವಿ ಹೂಗಾರ ಮೊದಲಾದವರು ಕಾವ್ಯ ವಾಚನ ಮಾಡಿದರು. ಅದಕ್ಕೆ ಶಿವಕುಮಾರ ಪಾಂಚಾಳ ಧ್ವನಿ ನೀಡಿದರು. ಯೋಗೀಶ ಮಠದ ಅವರು ಕಾವ್ಯಕ್ಕೆ ಚಿತ್ರ ರೂಪ ನೀಡಿದರು. ಹೀಗೆ ಕಾವ್ಯ- ಕುಂಚ- ಗಾಯನ ನೆರವೇರಿತು. ಶಿವಶಂಕರ ಟೋಕರೆ ಸ್ವಾಗತಿಸಿದರು. ಚನ್ನಬಸವ ಹೇಡೆ ನಿರೂಪಿಸಿದರು. ಟಿ.ಎಂ. ಮಚ್ಚೆ ವಂದಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.