20 ಕ್ವಿಂಟಲ್ ತೊಗರಿ ಖರೀದಿಗೆ ಆಗ್ರಹ
Team Udayavani, Feb 19, 2020, 4:28 PM IST
ಚಿಂಚೋಳಿ: ಮುಖ್ಯಮಂತ್ರಿಗಳು ಬೀದರ್ದಲ್ಲಿ ನಡೆದ ರಾಜ್ಯಮಟ್ಟದ ಪಶು ಸಮ್ಮೇಳನದಲ್ಲಿ ಘೋಷಿಸಿರುವಂತೆ ಪ್ರತಿಯೊಬ್ಬ ರೈತನಿಂದ 20 ಕ್ವಿಂಟಲ್ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ತಾಲೂಕು ಜೆಡಿಎಸ್ ಮುಖಂಡರು ಒತ್ತಾಯಿಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ತಹಶೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದ ಜೆಡಿಎಸ್ ಮತ್ತು ಸಿಪಿಐ (ಎಂ) ಕಾರ್ಯಕರ್ತರು ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ರೈತರು ಸಾಕಷ್ಟು ಪ್ರಮಾಣದಲ್ಲಿ ತೊಗರಿ ಬೆಳೆದಿದ್ದಾರೆ. ಈಗಾಗಲೇ ಕೆಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತೊಗರಿ ಖರೀದಿ ಕೇಂದ್ರಗಳಲ್ಲಿ ತೊಗರಿ ಖರೀದಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಆದರೆ ಸದ್ಯ ಪ್ರತಿಯೊಬ್ಬ ರೈತನಿಂದ ಕೇವಲ 10 ಕ್ವಿಂಟಲ್ ಮಾತ್ರ ಖರೀದಿಸಲಾಗುತ್ತಿದೆ.
ಮುಖ್ಯಮಂತ್ರಿಗಳು ಘೋಷಣೆ ಮಾಡಿದ ಹಾಗೆ ಪ್ರತಿಯೊಬ್ಬ ರೈತನಿಂದ ಸದ್ಯ 20 ಕ್ವಿಂಟಲ್ ಖರೀದಿಸುತ್ತಿಲ್ಲವೆಂದು ಸರಕಾರದ ಆಕ್ರೋಶ ವ್ಯಕ್ತಡಪಡಿಸಿದರು. ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಮುಖ್ಯಕಾಲುವೆ ಆಧುನಿಕರಣ ಕಾಮಗಾರಿ ಮತ್ತು ಯೋಜನೆ ಪುರ್ನವಸತಿ ಕೇಂದ್ರಗಳಲ್ಲಿ ಕೈಗೊಂಡಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಸಂಪೂರ್ಣ ಕಳಪೆಮಟ್ಟದ್ದಾಗಿವೆ. ಇವುಗಳ ತನಿಖೆ ನಡೆಸಬೇಕೆಂದು ಅಗ್ರಹಿಸಿದರು.
ನಂತರ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ತಾ.ಪಂ ಯೋಜನಾಧಿಕಾರಿ ಶಂಕರ ರಾಠೊಡಗೆ ಸಲ್ಲಿಸಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ, ಶರಣಬಸಪ್ಪ ಮಮಶೆಟ್ಟಿ, ಜಿಲ್ಲಾಧ್ಯಕ್ಷ ಮೌಲಾ ಮುಲ್ಲಾ, ಭೀಮಶೆಟ್ಟಿ ಎಂಪಳ್ಳಿ, ಜಾಫರಖಾನ್, ಪುರಸಭೆ ಸದಸ್ಯ ನಾಗೀಂದ್ರಪ್ಪ ಗುರಂಪಳ್ಳಿ, ವಾಮನರಾವ್ ಕೊರವಿ, ಎಸ್.ಕೆ.
ಮುಕ್ತಾರ ಇನ್ನಿತರರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ