ಶೆಡ್‌ ತೆರವು; ವ್ಯಾಪಾರಿಗಳಿಗೆ ಸಂಕಷ್ಟ


Team Udayavani, Jan 9, 2019, 10:51 AM IST

bid-2.jpg

ಹುಮನಾಬಾದ: ಪಟ್ಟಣದ ಪುರಸಭೆ ರಸ್ತೆಯ ಬದಿಯ ಶೆಡ್‌ಗಳ ತೆರವಿಗೆ ಮುಂದಾಗಿರುವುದರಿಂದ ಕಲ್ಲೂರ ಮಾರ್ಗದ ರಸ್ತೆ ಬದಿಯ ಚಿಕ್ಕಪುಟ್ಟ ಶಡ್‌ಗಳಲ್ಲಿ ಸಣ್ಣಪುಟ್ಟ ಉದ್ಯೋಗ ಮಾಡಿಕೊಂಡು ಜೀವನ ನಿರ್ವಹಣೆ ಮಾಡುವವರ ಬದುಕು ಪರ್ಯಾಯ ಸ್ಥಳದ ವ್ಯವಸ್ಥೆ ಇಲ್ಲದೇ ತೊಂದರೆಗೊಳಲಾಗಿದ್ದು, ಅಳಿವು-ಉಳಿವಿನ ಸ್ಥಿತಿಯಲ್ಲಿದೆ.

ಎರಡೂವರೆ ದಶಕಗಳಿಂದ ಪಟ್ಟಣದ ಮುಖ್ಯರಸ್ತೆಗೆ ಹೊಂದಿಕೊಂಡಿದ್ದ ವೀರಭದ್ರೇಶ್ವರ ಅಗ್ನಿ ಕುಂಡದ ಆಸುಪಾಸಲ್ಲೇ ಟೇಲರಿಂಗ್‌, ಚಿಕ್ಕ ಹೋಟೆಲ್‌, ಬುಕ್‌ಸ್ಟಾಲ್‌, ಮೋಟರ್‌ ರಿವೈಂಡಿಂಗ್‌, ಹೂವಿನ ಅಂಗಡಿ, ಸಿದ್ಧು ಉಡುಪು, ಸೈಕಲ್‌ ಅಂಗಡಿ, ಆಯುರ್ವೇದ ಔಷಧ ಅಂಗಡಿ, ಖಾನಾವಳಿ, ಹೇರ್‌ ಸಲೂನ್‌ ಮೊದಲಾದ ಅಂಗಡಿ ನಡೆಸಿಕೊಂಡು ಹೇಗೋ ಜೀವನ ನಿರ್ವಹಣೆ ಮಾಡುತ್ತಿದ್ದರು. ಆದರೇ ಹೈ.ಕ. ಭಾಗದ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಜಾತ್ರೆಗೆ ಬರುವ ಭಕ್ತರ ಸಂಖ್ಯೆ ಪ್ರತಿ ವರ್ಷ ಹೆಚ್ಚುತ್ತಿರುವ ಕಾರಣ ಭಕ್ತರ ಆಶಯದ ಮೇರೆಗೆ ಅಗ್ನಿಕುಂಡ ವಿಸ್ತರಣೆ ಜೊತೆಗೆ ಅಭಿವೃದ್ಧಿ ಕೈಗೊಳ್ಳುವ ಉದ್ದೇಶದಿಂದ ಎರಡು ತಿಂಗಳ ಹಿಂದೆಯಷ್ಟೆ ಎಲ್ಲ ತಾತ್ಕಾಲಿಕ ಶಡ್‌ಗಳನ್ನು ತೆರವುಗೊಳಿಸಲಾಗಿದೆ. ಅವರಿವರ ಕೈ ಕಾಲು ಹಿಡಿದು, ಈಚೆಗಷ್ಟೇ ವಿಸ್ತಣೆಗೊಂಡ ಕಲ್ಲೂರ ಮಾರ್ಗದ ರಸ್ತೆ ಬದಿ ಶೆಡ್‌ ಅಳವಡಿಸಿಕೊಂಡು ಹೆಚ್ಚು ವ್ಯವಹಾರ ಇಲ್ಲದಿದ್ದರೂ ಒಂದು ಹೊತ್ತಿನ ಊಟಕ್ಕಾದರೂ ಅನುಕೂಲ ಆಗುತ್ತದೆಂಬ ಆಸೆಯಿಂದ ನಿಟ್ಟುಸಿರು ಬಿಟ್ಟಿದ್ದರು.

ತೆರವಿಗೆ ಮುಂದಾದ ಪುರಸಭೆ: ಆದರೆ ಸಾರ್ವಜನಿಕರು ದೂರು ನೀಡಿದ್ದಾರೆಂಬ ಆಧಾರದ ಮೇಲೆ ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಎರಡು ದಿನಗಳಿಂದ ಶೆಡ್‌ಗಳ ತೆರವಿಗೆ ಮುಂದಾಗಿದ್ದಾರೆ. ಇದರಿಂದ ಅದನ್ನೇ ನಂಬಿ ಬೆಳಗ್ಗೆಯಿಂದ ರಾತ್ರಿ ವರೆಗೆ ಶ್ರಮಪಟ್ಟು ಹೊಟ್ಟೆ ತುಂಬಿಸಿಕೊಳ್ಳುವ ವ್ಯಾಪಾರಿಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಸುಮಾರು 30ಕ್ಕೂ ಅಧಿಕ ಜನ ವ್ಯಾಪಾರಿಗಳಿದ್ದೇವೆ. ಗೌಡರ ಪರಿವಾರದ ಆಶೀರ್ವಾದದಿಂದ ನಮಗೆ ಎರಡು ಹೊತ್ತಿನ ಊಟ ಸಿಗುತ್ತಿತ್ತು. ಆದರೆ ಪುರಸಭೆ ಆಡಳಿತ ಯಾರದೋ ಮಾತು ಕೇಳಿ ನಮ್ಮ ಶೆಡ್‌ಗಳನ್ನು ತೆರವುಗೊಳಿಸಲು ಮುಂದಾಗಿರುವುದು ಅಘಾತ ತಂದಿದೆ. ಒಂದು ವೇಳೆ ಜೆಸಿಬಿ ಮೂಲಕ ಶೆಡ್‌ ತೆರವುಗೊಳಿಸುವುದಾದರೇ ನಾವು ಅದರ ಕೆಳಗೆ ಮಲಗುತ್ತೇವೆ. ಹಿಂಸೆಯ ನಡುವೆ ಬದುಕುವುದಕಿಂತ ಜೆಸಿಬಿ ಕೆಳಗೆ ಬಿದ್ದು ಸಾಯುವುದೇ ಲೇಸು. ಪುರಸಭೆ ಏನು ಮಾಡುತ್ತದೋ ಗೊತ್ತಿಲ್ಲ. ನಮ್ಮೂರ ಗೌಡ್ರು ನಮ್ಮನ್ನೇ ನಂಬಿರುವ ಹೆಂಡತಿ ಮಕ್ಕಳ ಭವಿಷ್ಯಕ್ಕಾಗಿ ಅನುಕಂಪ ತೋರಿಸಿ, ಅದೇ ಸ್ಥಳವೆಂದು ಹೇಳುತ್ತಿಲ್ಲ ಪರ್ಯಾಯ ಸ್ಥಳದ ವ್ಯವಸ್ಥೆ ಮಾಡಿ ಜೀವದಾನ ನೀಡಬೇಕು ಎಂದು ವ್ಯಾಪಾರಿಗಳಾದ ಸೈಯದ್‌ ಶಫಿ, ನರೇಶ ದಾಮಾ, ತಯಾಬ್‌, ಅಪ್ಪುರಾಜ್‌, ಶ್ರೀಕಾಂತ, ಶಾಂತು, ಹೀರಾಲಾಲ್‌ ಶ್ರಾವಣ, ಸುಧಿಧೀರಕುಮಾರ, ಅಕ್ಬರ್‌, ರೆಡ್ಡಿ ಚಹಾ ಅಂಗಡಿ, ನಟರಾಜ, ಅಂಬಾಜಿರಾವ, ರಾಮ್‌, ಸಂದೀಪ, ಬಾಬು ಲೋಹಾರ, ದತ್ತು, ಸೈಯದ್‌ ಅಹ್ಮದ್‌ ಮೊದಲಾದವರು ಮಂಗಳವಾರ ಉದಯವಾಣಿಗೆ ಅಳಲು ತೋಡಿಕೊಂಡರು.

ನಾವು ಎರಡೂವರೆ ದಶಕದಿಂದ ಗೌಡರ ಆಶೀರ್ವಾದದಿಂದ ಜೀವನ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದೇವೆ. ಅಗ್ನಿಕುಂಡ ಅಭಿವೃದ್ಧಿಗಾಗಿ ಶಡ್‌ ತೆರವುಗೊಳಿಸಿದ್ದನ್ನು ಸ್ವಾಗತಿಸುತ್ತೇವೆ. ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳುವ ತನಕ ಕಲ್ಲೂರ ಮಾರ್ಗದ ರಸ್ತೆಬದಿ ಶೆಡ್‌ಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಿ ಜೀವನ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದೇವೆ. ಆದರೆ ಪುರಸಭೆ ಆಡಳಿತ ಜೆಸಿಬಿ ಮೂಲಕ ತೆರವಿಗೆ ಮುಂದಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ನಮ್ಮನ್ನು ಗೌಡರೆ ರಕ್ಷಿಸಬೇಕು. •ಹೀರಾಲ್‌ ಶ್ರಾವಣ, ಬೀದಿಬದಿ ಶೆಡ್‌ ವ್ಯಾಪಾರಿಗಳ ಸಂಘದ ಅಧ್ಯಕ್ಷ

ನಗರದ ಅಂಬೇಡ್ಕರ್‌ ವೃತ್ತದಿಂದ ಪ್ರವಾಸಿ ಮಂದಿರದ ವರೆಗೆ ಸಾಕಷ್ಟು ಮುಖ್ಯ ರಸ್ತೆಗಳಲ್ಲಿ ಅದೆಷ್ಟೋ ಜನ ಶೆಡ್‌ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಪುರಸಭೆಗೆ ಅದು ಕಾಣುತ್ತಿಲ್ಲವೇ? ತೆರವುಗೊಳಿಸುವುದಿದ್ದರೆ ಪ್ರತಿಯೊಂದು ಮಾರ್ಗದ ಶೆಡ್‌ ತೆರವುಗೊಳಿಸಲಿ. ಪರ್ಯಾಯ ವ್ಯವಸ್ಥೆ ಆಗುವವರೆಗೆ ತೆರವು ಕಾರ್ಯಾಚರಣೆ ನಿಲ್ಲಿಸಬೇಕು. ತೆರವು ಕೇವಲ ಕಲ್ಲೂರ ಮಾರ್ಗಕ್ಕೆ ಸೀಮಿತಗೊಳಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ದಿನದ 24ಗಂಟೆ ವ್ಯಾಪಾರಿಗಳ ಜೊತೆ ಬೆನ್ನೆಲುಬಾಗಿರುವೆ. ಶರಣಪ್ಪಗೌಡ ಎನ್‌.ಪಾಟೀಲ ಪಿಕೆಪಿಎಸ್‌ ಅಧ್ಯಕ್ಷ

ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.