90 ಕೋಟಿ ವೆಚ್ಚದ ಸಿಪೆಟ್ ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಶಿಲಾನ್ಯಾಸ
Team Udayavani, Oct 18, 2022, 5:19 PM IST
ಬೀದರ್: ಜಿಲ್ಲೆಯ ಜನರ ಬಹು ನಿರೀಕ್ಷಿತ ಕೇಂದ್ರೀಯ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣ ಕೇಂದ್ರ (ಸಿಪೆಟ್) ಸ್ಥಾಪನೆಗೆ ಮಂಗಳವಾರ ಔರಾದ ತಾಲೂಕಿನ ಬಲ್ಲೂರ್ (ಜೆ) ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಲಾನ್ಯಾಸ ನೇರವೇರಿಸಿದರು.
ಜನ ಸಂಕಲ್ಪ ಯಾತ್ರೆ ಹಿನ್ನೆಲೆ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಿಎಂ ಬೊಮ್ಮಾಯಿ ಅವರು ಬೀದರ ವಿಮಾನ ನಿಲ್ದಾಣದಿಂದ ನೇರವಾಗಿ ಬಲ್ಲೂರ್ ಗೆ ಆಗಮಿಸಿ ಮಹತ್ವಕಾಂಕ್ಷಿ ಯೋಜನೆಗೆ ಗುದ್ದಲಿ ಪೂಜೆ ನಡರವೇರಿಸಿ ಚಾಲನೆ ನೀಡಿದರು. ಹಿರಿಯ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಮುನೇನಕೊಪ್ಪ, ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಸಾಥ್ ನೀಡಿದರು.
ಪ್ಲಾಸ್ಟಿಕ್-ಪಾಲಿಮರ್ ಉದ್ಯಮಕ್ಕೆ ಅವಶ್ಯವಾದ ವೃತ್ತಿ ಕೌಶಲ ತರಬೇತಿ ಒದಗಿಸುವುದು ಸಿಪೆಟ್ ಸಂಸ್ಥೆಯ ಉದ್ದೇಶವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಶೇ.50 (90 ಕೋಟಿ ರೂ.) ಅಂದಾಜು ವೆಚ್ಚದಲ್ಲಿ ಸ್ಥಾಪನೆಯಾಗುವ ಸಿಪೆಟ್ ಕೇಂದ್ರಕ್ಕೆ ಒಟ್ಟು 10 ಎಕರೆ ಜಮೀನು ಒದಗಿಸಲಾಗಿದೆ.
ರಾಜ್ಯದ 2ನೇ ಸಿಪೆಟ್ ಕೇಂದ್ರ: ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಸಿಪೆಟ್ ಮೂಲಕ ಪ್ಲಾಸ್ಟಿಕ್ ಆಧಾರಿತ ಕೋರ್ಸ್ಗಳನ್ನು ನೀಡಿ ಯುವಕರಲ್ಲಿ ವೃತ್ತಿ ಕೌಶಲ ಹೆಚ್ಚಿಸುವುದರ ಜತೆಗೆ ಸ್ವಾವಲಂಬಿಗಳನ್ನಾಗಿ ಮಾಡಲಾಗುತ್ತದೆ. ಪರಿಸರ ಸ್ನೇಹಿ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಿಸುವ ಮತ್ತು ಮರು ಬಳಸುವ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಉದ್ಯಮ ಸ್ಥಾಪಿಸಿ, ಹೇಗೆ ಉದ್ಯೋಗ ಸೃಷ್ಟಿ ಮಾಡಬೇಕೆಂಬುದನ್ನು ಕಲಿಸಿ ಕೊಡಲಿದೆ. ಈ ಕೇಂದ್ರದಿಂದ ಪ್ರತಿವರ್ಷ ಸುಮಾರು 2000 ಯುವಕರಿಗೆ ಉದ್ಯೋಗ ಆಧಾರಿತ ತರಬೇತಿ ನೀಡಲಾಗುತ್ತದೆ. ರಾಜ್ಯದ ಮೈಸೂರು ಸೇರಿ ದೇಶದಲ್ಲಿ 40 ಸಂಸ್ಥೆಗಳಿದ್ದು, ಬೀದರ ರಾಜ್ಯದ ಎರಡನೇ ಸಂಸ್ಥೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?