ಲಿಂಗಾಯತ ಸಮಾಜ ಒಡೆದ ಕಾಂಗ್ರೆಸ್ ನಿಂದ ಈಗ ಮೊಸಳೆ ಕಣ್ಣೀರು: ಸಿಎಂ ಬೊಮ್ಮಾಯಿ
Team Udayavani, Apr 20, 2023, 3:20 PM IST
ಬೀದರ್: ರಾಜ್ಯದಲ್ಲಿ ಐವತ್ತು ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡದ ಮತ್ತು ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದ ಕಾಂಗ್ರೆಸ್ ಈಗ ಮೊಸಳೆ ಕಣ್ಣಿರು ಹಾಕುತ್ತಿದೆ. ಬಿಜೆಪಿ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಭಾಲ್ಕಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಲಿಂಗಾಯತರಿಗೆ ಅತಿ ಹೆಚ್ಚು ಸೀಟ್ ಗಳನ್ನು ನೀಡಿದೆ. ಕಾಂಗ್ರೆಸ್ ನಲ್ಲಿ ನಿಜಲಿಂಗಪ್ಪ ಅವರ ನಂತರ 50 ವರ್ಷದಿಂದ ಲಿಂಗಾಯತರು ಸಿಎಂ ಆಗಲಿಲ್ಲ. ವಿರೇಂದ್ರ ಪಾಟೀಲ ಅವರನ್ನು 9 ತಿಂಗಳಲ್ಲೇ ಹೀನಾಯವಾಗಿ ಅಧಿಕಾರದಿಂದ ಕೆಳಗಿಳಿಸಲಾಗಿದ್ದು, ಎಲ್ಲವೂ ಜನರ ಮನಸ್ಸಿನಲ್ಲಿದೆ ಎಂದರು.
ಲಿಂಗಾಯತ ಸಮುದಾಯ ಅಷ್ಟೇ ಅಲ್ಲ, ಎಲ್ಲ ಸಮಾಜಗಳನ್ನು ಒಡೆಯಲು ಕಾಂಗ್ರೆಸ್ ರಿಪೋರ್ಟ್ ತಯ್ಯಾರಿಸಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲವೂ ನಿಲ್ಲಿಸಲಾಯಿತು. ಬಿಜೆಪಿ ಎಂದಿಗೂ ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತದೆ. ಎಲ್ಲ ಸಮಾಜಗಳಿಗೆ ಯಾವಾಗ ಯಾವಾಗ ನಾಯಕತ್ವ ಕೊಟ್ಟಿದೆ ಎಂಬುದು ಸಮಾಜದ ಜನರಿಗೆ ಗೊತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ