ಕುರಿಗಾಹಿಗಳ ಕೈ ಹಿಡಿದ ಸಿಎಂ
Team Udayavani, May 17, 2020, 5:47 AM IST
ಬೀದರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ರೈತರು, ಕುರಿಗಾಹಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ್ದು ಬೋನಸ್ ನೀಡಿದಂತಾಗಿದೆ ಎಂದು ಸಚಿವ ಪ್ರಭು ಚವ್ಹಾಣ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಬಜೆಟ್ನಲ್ಲಿ ಕುರಿ-ಮೇಕೆಗಳು ಆಕಸ್ಮಿಕ ಅಪಘಾತ ಹಾಗೂ ರೋಗದಿಂದ ಮೃತಪಟ್ಟರೆ ಪರಿಹಾರ ನೀಡಬೇಕೆಂದು ಸಿಎಂ ಅವರಿಗೆ ಕೋರಲಾಗಿತ್ತು. ಅಲ್ಲದೆ ಇತ್ತೀಚೆಗೆ ಕೆಲವು ಜಿಲ್ಲೆಗಳಲ್ಲಿ ಕುರಿ ಸಾಕಾಣಿಕೆದಾರರಿಂದ ಇದೇ ಕೋರಿಕೆ ಕೇಳಿ ಬಂದಿತ್ತು. ಆಗಲೂ ವೈಯಕ್ತಿಕವಾಗಿ ಸಿಎಂ ಬಿಎಸ್ವೈ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ಮನವರಿಕೆ ಮಾಡಲಾಗಿತ್ತು. ಇಂದು 500 ಕೋಟಿ ರೂ. ಪ್ಯಾಕೇಜ್ನಲ್ಲಿ ಕುರಿಗಾಹಿಗಳಿಗೆ ನೈಸರ್ಗಿಕ ವಿಕೋಪದಲ್ಲಿ ಕುರಿ-ಮೇಕೆಗಳು ಸತ್ತರೆ 5000 ರೂ. ಪರಿಹಾರ ಧನ ಘೋಷಿಸಿದ್ದಕ್ಕೆ ಸಿಎಂಗೆ ಅಭಿನಂದಿಸುವುದಾಗಿ ಹೇಳಿದ್ದಾರೆ.
ಪಶುಗಳಿಗೆ ಆಹಾರದಲ್ಲಿ ಮೆಕ್ಕೆ ಜೋಳ ಪ್ರಮುಖವಾಗಿದ್ದು, ಮೆಕ್ಕೆ ಜೋಳ ಬೆಳೆಗಾರರಿಗೂ ಈ ಸಮಯದಲ್ಲಿ 5000 ರೂ. ಘೋಷಿಸಿದ್ದು ಪರೋಕ್ಷವಾಗಿ ಪಶು ಪಾಲಕರು-ಪಶುಗಳಿಗೆ ಸಹಾಯ ಮಾಡಿದಂತಾಗಿದ್ದು, ಕಷ್ಟದ ಸಮಯದಲ್ಲಿ ಸಮಯೋಚಿತವಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ