ಬೇಡಿಕೆ ಈಡೇರಿಕೆಗೆ ಒಕ್ಕೂಟದ ಮನವಿ
Team Udayavani, Nov 13, 2021, 3:30 PM IST
ಸಿಂಧನೂರು: ಸಮರ್ಪಕ ಅನುದಾನ ಬಿಡುಗಡೆ, ಕಡ್ಡಾಯ ಸಾಮಾನ್ಯ ಸಭೆ, ಬಾಕಿ ಗೌರವ ಧನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಗ್ರಾಪಂ ಸದಸ್ಯರ ಒಕ್ಕೂಟದಿಂದ ಶುಕ್ರವಾರ ತಾಪಂ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಒಕ್ಕೂಟದ ಅಧ್ಯಕ್ಷ ಮಹಾಂತೇಶ ಹಿರೇಗೌಡ್ರು ಮಾತನಾಡಿ, ಜನರ ಆಶೋತ್ತರ ಈಡೇರಿಸಲು ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಅಗತ್ಯ ಮಾಹಿತಿ ಒದಗಿಸಬೇಕು. ಎಲ್ಲ ಗ್ರಾಪಂ ಅಧ್ಯಕ್ಷರು, ಪಿಡಿಒ, ಉಪಾಧ್ಯಕ್ಷರನ್ನು ಒಳಗೊಂಡಂತೆ ಸಮಗ್ರವಾಗಿ ಚರ್ಚಿಸಡಲು ಸಭೆ ಕರೆಯಬೇಕು. 15ನೇ ಹಣಕಾಸು ಕ್ರಿಯಾಯೋಜನೆಗೆ ಶೀಘ್ರ ಅನುಮೋದನೆ ನೀಡಬೇಕು. ನರೇಗಾದಡಿ ನಿರ್ವಹಿಸಿದ ಕೆಲಸಗಳಿಗೆ ಸಂಬಂಧಿಸಿ ಬಾಕಿ ಇರುವ ಬಿಒಸಿ ಬೇಗ ಬಿಡುಗಡೆ ಮಾಡಬೇಕು. ಗ್ರಾಪಂಗಳಿಗೆ ಬಿಡುಗಡೆಯಾಗಬೇಕಿದ್ದ 14 ಮತ್ತು 15ನೇ ಹಣಕಾಸು ಯೋಜನೆ ಮೊತ್ತ ಬಾಕಿಯಿದೆ. ಇದರಿಂದ ಅಗತ್ಯ ಕೆಲಸಗಳಿಗೆ ತೊಂದರೆಯಾಗಿದೆ. ಪಿಡಿಒಗಳು ಸಮರ್ಪಕ ಕೆಲಸ ನಿರ್ವಹಿಸದ್ದರಿಂದ ಹಲವೆಡೆ ಸಮಸ್ಯೆ ಉಂಟಾಗಿದೆ. ಇದನ್ನು ಪರಿಹರಿಸಬೇಕು. ಪಂಚಾಯತಿಗಳಲ್ಲಿ ಕಡ್ಡಾಯವಾಗಿ ತಿಂಗಳಿಗೊಮ್ಮೆ ಗ್ರಾಮಸಭೆ ನಡೆಸಬೇಕು. ಪಂಚಾಯತ್ ರಾಜ್ ಕಾಯ್ದೆ ಅನುಸರಿಸಿ ಗ್ರಾಪಂಗಳಲ್ಲಿ ಕೆಲಸ ನಿರ್ವಹಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ರವಿಗೌಡ ಮಲ್ಲದಗುಡ್ಡ, ಮುಖಂಡರಾದ ಅಶೋಕ ನಲ್ಲಾ, ಈಶಪ್ಪಗೌಡ, ರವಿ ರಮಾತ್ನಾಳ, ಶ್ರೀಧರಗೌಡ, ಪಿ. ಶ್ರೀನಿವಾಸಲು, ನಿರುಪಾದಿ ಸಾಸಲಮರಿ, ದಶರಥರೆಡ್ಡಿ ಚನ್ನಳ್ಳಿ, ವಿರುಪಣ್ಣ ಮಾಡಸಿರವಾರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ