ಭಾಲ್ಕಿ ರೈತರಿಗೆ ಶಂಖು ಹುಳುವಿನ ಕಾಟ


Team Udayavani, Jul 7, 2022, 5:40 PM IST

20farmers

ಭಾಲ್ಕಿ: ತಾಲೂಕಿನಾದ್ಯಂತ ದಿಢೀರನೆ ಶಂಖು ಹುಳುಗಳ ಕಾಟದಿಂದ ರೈತರು ಬೆಳೆದ ಬೆಳೆಗಳು ಮೊಳಕೆಯೊಡೆಯುವ ಮುನ್ನವೆ ಕಮರಿ ಹೋಗುತ್ತಿರುವ ದೃಶ್ಯ ಸರ್ವೆಸಾಮಾನ್ಯವಾಗಿದೆ. ಇದರಿಂದ ತಾಲೂಕಿನ ರೈತಾಪಿ ವರ್ಗ ಚಿಂತೆಯಲ್ಲಿ ಮುಳುಗಿದೆ.

ಈ ಮೊದಲೇ ಮಳೆ ಬಾರದ ಕಾರಣ ಬಿತ್ತನೆ ಮಾಡಲು ತುಂಬಾ ತಡವಾಗಿತ್ತು. ಮಳೆ ಬಂದಿದೆ ಎಂದು ಸಾಲ ಸೂಲ ಮಾಡಿ ತಂದ ಬಿತ್ತನೆ ಬೀಜ ಮತ್ತು ಗೊಬ್ಬರ ಹಾಕಿ ಬೆಳೆದ ಬೆಳೆಯು ಶಂಕು ಹುಳಗಳ ಕಾಟದಿಂದ ಸಂಪೂರ್ಣವಾಗಿ ನಾಶವಾಗುತ್ತಿವೆ.

ಶಂಖು ಹುಳುಗಳು ಚಿಕ್ಕದಾದ ಬೆಳೆಯ ಸಾಲುಗಳಲ್ಲಿಯೇ ಜನಿಸಿ, ಮೊಳಕೆಯೊಡೆಯುವ ಮುನ್ನವೇ ಬೆಳೆ ತಿನ್ನುತ್ತಾ ಮುಂದೆ ಸಾಗುತ್ತವೆ. ಹಾಗೆಯೇ ಎಲ್ಲ ಬೆಳೆಗಳ ಮೊಳಕೆ ತಿಂದು ಮುಂದೆ ಸಾಗಿ ಮುಂದಿನ ಹೊಲಗಳಲ್ಲಿಯ ಬೆಳೆಗಳ ಮೊಳಕೆ ತಿನ್ನಲು ಪ್ರಾರಂಭಿಸುತ್ತಿವೆ. ಹೀಗಾಗಿ ರೈತರು ಬೆಳೆದ ಸೋಯಾ ಅವರೆ ಬೆಳೆಗಳು ಸಂಪೂರ್ಣ ನಾಶವಾಗಿ ಹೊಲವು ಬೆಳೆಗಳಿಲ್ಲದೇ ಕರಿ ಹೊಲವಾಗಿ ಪರಿವರ್ತನೆ ಹೊಂದುತ್ತಲಿದೆ.

ರೈತರು ಈ ಹುಳುಗಳನ್ನು ಒಂದೊಂದಾಗಿ ಆರಿಸಿ ಚೀಲದಲ್ಲಿ ತುಂಬಿ ನೀರಲ್ಲಿ ಬೀಸಾಡಿ ಬರುತ್ತಲಿದ್ದಾರೆ. ಆದರೂ ಬೆಳೆ ರಕ್ಷಿಸಲು ಆಗುತ್ತಿಲ್ಲ. ಈ ಕುರಿತು ಕೃಷಿ ಅಧಿಕಾರಿಗಳಿಗೆ ವಿಚಾರಿಸಿದರೆ ಸಮರ್ಪಕವಾದ ಉತ್ತರ ನೀಡುತ್ತಿಲ್ಲ. ಈ ಹುಳುಗಳು ಬೆಳೆ ತಿನ್ನುವ ಬಗ್ಗೆ ಯಾವುದೇ ರೀತಿಯ ಪರಿಹಾರ ಸೂಚಿಸುತ್ತಿಲ್ಲ. ಇದರಿಂದ ಇಲ್ಲಿಯ ರೈತರು ತುಂಬಾ ಆತಂಕಕ್ಕೆ ಒಳಗಾಗಿದ್ದಾರೆ.

ತಾಲೂಕಿನ ಭಾತಂಬ್ರಾ, ನಾವದಗಿ, ಡೊಣಗಾಪುರ, ಧನ್ನೂರ(ಎಸ್‌), ಹಲಬರ್ಗಾ, ಖಟಕಚಿಂಚೋಳಿ, ಕುರುಬ ಖೇಳಗಿ, ಕಪಲಾಪುರ, ಏಣಕೂರ, ಕುಂಟೆ ಸಿರಸಿ, ಕಲವಾಡಿ, ಮೆಹಕರ, ಸಾಯಿಗಾಂವ, ನಿಟ್ಟೂರ(ಬಿ) ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಈ ಬಾಧೆ ಕಂಡುಬಂದಿದ್ದು, ಕೃಷಿ ಅಧಿಕಾರಿಗಳು ತಕ್ಷಣವೇ ತನಿಖೆ ನಡೆಸಿ, ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎನ್ನುವುದು ತಾಲೂಕಿನ ರೈತರ ಆಗ್ರಹವಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.