ವೈದ್ಯರ ಮೇಲಿನ ಹಲ್ಲೆಗೆ ಖಂಡನೆ
Team Udayavani, May 22, 2020, 6:03 AM IST
ನಿಡಗುಂದಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ| ವಿವೇಕಾನಂದ ಹೂವಿನಹಳ್ಳಿ ಅವರ ಮೇಲೆ ರೋಗಿಯೊಬ್ಬರ ಸಂಬಂಧಿನಡೆಸಿರುವ ಹಲ್ಲೆ ಘಟನೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಖಂಡಿಸಿದೆ. ಘಟನೆ ಖಂಡಿಸಿ ಸಂಘದ ಪದಾಧಿಕಾರಿಗಳು ಬಸವನಬಾಗೇವಾಡಿ ಡಿವೈಎಸ್ಪಿ, ನಿಡಗುಂದಿ ತಹಶೀಲ್ದಾರ್, ಪಿಎಸ್ಐ, ವೈದ್ಯಾಧಿ ಕಾರಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.
ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ. ಗೌಡರ, ನೌಕರರ ಸಂಘದ ನಿಡಗುಂದಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ. ರಕರೆಡ್ಡಿ ಮಾತನಾಡಿ, “ಕೋವಿಡ್ ದಂತಹ ಸಂದಿಗ್ಧ ಸಮಯದಲ್ಲಿಯೂ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಇದರಿಂದ ನೌಕರರಿಗೆ ಕೆಲಸ ಮಾಡುವ ಮನೋಸ್ಥೈರ್ಯ ಕುಸಿಯುತ್ತದೆ, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು, ನಿರ್ಭಯವಾಗಿ ಕೆಲಸ ನಿರ್ವಹಿಸಲು ಸೂಕ್ತ ರಕ್ಷಣೆ ನೀಡಬೇಕು’ ಎಂದು ಮನವಿ ಮಾಡಿದರು.
ಬಸವನಬಾಗೇವಾಡಿ ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ, ಡಿವೈಎಸ್ಪಿ ಈ. ಶಾಂತವೀರ, ಪಿಎಸ್ಐ ಸಿ.ಬಿ. ಚಿಕ್ಕೋಡಿ, ಆರೋಗ್ಯಾಧಿಕಾರಿ ಡಾ| ಪ್ರಕಾಶ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು. ಕುಮಾರ ಬಾಗೇವಾಡಿ, ಸಲೀಂ ದಡೆದ, ಆರ್.ಎಸ್. ಕಮತ, ಎಂ.ಎಂ. ಮುಲ್ಲಾ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ