ಕಾಂಗ್ರೆಸ್ ನಾಯಕರಿಗೆ ಭಾರತಕ್ಕಿಂತ ಪಾಕಿಸ್ತಾನದ ಮೇಲೆ ಹೆಚ್ಚು ಪ್ರೀತಿ: ಶ್ರೀರಾಮಲು
Team Udayavani, Feb 18, 2020, 4:16 PM IST
ಬೀದರ್: ಕಾಂಗ್ರೆಸ್ ನಾಯಕರಿಗೆ ಭಾರತಕ್ಕಿಂತ ಪಾಕಿಸ್ತಾನದ ಮೇಲೆ ಹೆಚ್ಚು ಪ್ರೀತಿ ಇದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮಲು ಕೈ ನಾಯಕರ ವಿರುದ್ಧ ಗುಡುಗಿದ್ದಾರೆ.
ಬೀದರ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದವರ ಮೇಲೆ ಪ್ರಕರಣ ದಾಖಲಿಸಿದ್ದು ಹಾಗೂ ಬೀದರ್ ನ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಧಾನಿ ವಿರುದ್ದ ಅವಹೇಳನ ನಾಟಕ ಪ್ರದರ್ಶನದ ಕೇಸ್ ದಾಖಲಿಸಿದಕ್ಕೆ ಕೈ ನಾಯಕರು ಅವರ ಬೆನ್ನಿಗೆ ನಿಂತಿದ್ದಾರೆ. ಇದನ್ನು ನೋಡಿದರೆ ಕಾಂಗ್ರೆಸ್ ನಾಯಕರಿಗೆ ಪಾಕಿಸ್ಥಾನದ ಮೇಲೆ ಹೆಚ್ಚು ಪ್ರೀತಿ ಇದ್ದಹಾಗಿದೆ ಎಂದು ಕಿಡಿ ಕಾರಿದರು.
ಪ್ರತಿಯೊಬ್ಬ ಭಾರತೀಯ ನಾಗರಿಕ ಭಾರತ ಮಾತೆಗೆ ಜೈ ಎನ್ನಬೇಕೆ ಹೊರತು ಪಾಕಿಸ್ತಾಕ್ಕೆ ಜೈ ಅನ್ನಬಾರದು, ಹಾಗೆ ಮಾಡಿದರೆ ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲಾ. ಹಾಗೆ ಕೇಳಿಸಿಕೊಂಡು ಕೈಕಟ್ಟಿ ಕುಳಿತುಕೊಳ್ಲುವವರಲ್ಲ ಎಂದರು.
ವಿಪಕ್ಷಗಳು ಯಾವುದೇ ವಿಚಾರ ಅಧಿವೇಶನದಲ್ಲಿ ಚರ್ಚೆಗೆ ಬರಲಿ. ಅದಕ್ಕೆ ನಾವು ಚರ್ಚೆ ಮಾಡಲು ಸಿದ್ದರಿದ್ದೆವೆ. ಹೀಗೆ ಅಧೀವೇಶನ ಬಹಿಷ್ಕರಿಸುವುದು ಅವರಿಗೆ ಶೋಭೆ ತರುವಂತದಲ್ಲ. ಬಹಳಷ್ಟು ಜ್ವಲಂತ ಸಮಸ್ಯೆಗಳಿವೆ, ಅವುಗಳ ಬಗ್ಗೆ ಚರ್ಚೆ ಮಾಡಲಿ ಎಂದು ಶ್ರೀರಾಮುಲು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ, ತಂಪಾದ ಇಳೆ
LS Election; ಮೂರು ದಶಕಗಳ ಕಾಂಗ್ರೆಸ್ ಕೋಟೆ ಈಗ ಬಿಜೆಪಿ ನೆಲೆ
Admission ಪ್ರಚಾರಕ್ಕೆ ವಿದ್ಯಾರ್ಥಿನಿಯರಿಂದ ಡ್ಯಾನ್ಸ್!: ಕಾಲೇಜಿಗೆ ನೋಟಿಸ್
Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
BJP; ತಪ್ಪು ತಿಳುವಳಿಕೆ ಇದ್ದಲ್ಲಿ ಶಾಸಕರಲ್ಲಿ ಕ್ಷಮೆಯಾಚಿಸುತ್ತೇನೆ!: ಸಚಿವ ಖೂಬಾ
MUST WATCH
ಹೊಸ ಸೇರ್ಪಡೆ
Nandini Brand: 50 ಐಸ್ ಕ್ರೀಂ ಮಾರುಕಟ್ಟೆಗೆ
Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು
Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು