ಚಿಕನ್‌ ವ್ಯಾಪಾರಕ್ಕೆ ಹೊಡೆತ!


Team Udayavani, Mar 17, 2020, 2:17 PM IST

ಚಿಕನ್‌ ವ್ಯಾಪಾರಕ್ಕೆ ಹೊಡೆತ!

ಔರಾದ: ದೇಶಾದ್ಯಂತ ಕೊರೊನಾ ವೈರಸ್‌ ಭೀತಿ ಹುಟ್ಟಿಸಿದ ಹಿನ್ನೆಲೆಯಲ್ಲಿ ವ್ಯಾಪಾರ ವ್ಯವಹಾರಗಳ ಮೇಲೆ ಅಡ್ಡ ಪರಿಣಾಮ ಬೀರಿದೆ. ಆದರೆ ಔರಾದ ಹಾಗೂ ಕಮಲನಗರ ತಾಲೂಗಳಲ್ಲಿ ಮಾತ್ರ ಯಾವುದೇ ರೀತಿಯ ಸಮಸ್ಯೆಯಿಲ್ಲದೆ ಜನರು ಎಂದಿನಂತೆ ಜೀವನ ಸಾಗಿಸುತ್ತಿದ್ದು, ಕೋಳಿ ಮಾಂಸದ ಮಾರುಕಟ್ಟೆ ಮೇಲೆ ಮಾತ್ರ ಬಿಸಿ ತಟ್ಟಿದೆ.

ಕೊರೊನಾ ವೈರಸ್‌ ಒಂದು ವಾರದಿಂದ ದೇಶ, ರಾಜ್ಯದಲ್ಲಿ ಜನರ ನೆಮ್ಮದಿ ಹಾಳು ಮಾಡಿದ್ದು, ಗಡಿ ತಾಲೂಕಿನಲ್ಲಿ ಮಾತ್ರ ಅಂತಹ ತೀವ್ರ ಸಮಸ್ಯೆಯೇನೂ ಆಗಿಲ್ಲ. ಪಟ್ಟಣದಲ್ಲಿ ವ್ಯಾಪಾರ- ವಹಿವಾಟು ಎಂದಿನಂತೆ ಇದ್ದು, ವ್ಯಾಪಾರಿಗಳು ಅಂಗಡಿ ಬಾಗಿಲು ತೆಗೆದು ನಿರ್ಭಯವಾಗಿ ವ್ಯಾಪಾರ ಮಾಡುತ್ತಿದ್ದಾರೆ. ಕೊರೊನಾ ಮುಂಜಾಗ್ರತೆಯ ಬಗ್ಗೆ ತಿಳಿದುಕೊಂಡು ಸ್ವಚ್ಛತೆ ಹಾಗೂ ವೈಯಕ್ತಿಕ ಸಂರಕ್ಷಣೆಗೂ ಮುಂದಾಗಿದ್ದಾರೆ.

ಪಟ್ಟಣದ ಹೋಟೆಲ್‌, ತರಕಾರಿ ಮಾರುಕಟ್ಟೆ, ಮೀನು ಮಾರಾಟ, ಹಾಲು ಮಾರಾಟ, ಬಟ್ಟೆ ಅಂಗಡಿಗಳು ಹಾಗೂ ಇನ್ನಿತ ಮಳಿಗೆಯಲ್ಲಿ ವ್ಯಾಪಾರಿಗಳು ಎಂದು ನಂತೆ ವ್ಯಾಪಾರ ನಡೆಸಿದ್ದಾರೆ. ಆದರೆ ಕೋಳಿ ಮಾಂಸ ಸೇವಿಸುವುದರಿಂದ ಕೊರೊನಾ ಸೋಂಕು ತಗಲುತ್ತದೆ ಎಂದು ಆತಂಕದಿಂದ ಮಾಂಸ ಸೇವನೆ ಬಿಟ್ಟಿರುವುದರಿಂದ ಮಾಂಸದ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ.

ಕೋಳಿಗಳಿಗೂ ಕೊರೊನಾ ವೈರಸ್‌ ತಗುಲಿದೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಕೂಡ ಕೋಳಿ ಮಾಂಸ ಸೇವಿಸುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿಯೇ ಶೇ.98ರಷ್ಟು ವ್ಯಾಪಾರ ಕುಸಿದಿದ್ದು, ಕೋಳಿ ಮೊಟ್ಟೆಗಳಿಗೂ ಕೂಡ ಎಂದಿನಂತೆ ಬೇಡಿಕೆ ಇಲ್ಲವಾಗಿದೆ. ಚಿಕನ್‌ ಅಂಗಡಿಗಳು ಗ್ರಾಹಕರಿಲ್ಲದೇ ಬಣಗುಡುತ್ತಿವೆ. ಅಲ್ಲದೇ ಬೆಲೆ ಕೂಡ ಕುಸಿದಿದೆ.

ಈ ಸಂದರ್ಭದಲ್ಲಿ ಮೀನಿನ ಬೇಡಿಕೆ ಹೆಚ್ಚಾಗಿದ್ದು, ಮೀನು ಪ್ರಿಯರಿಗೆ ದರ ಏರಿಕೆಯ ಬಿಸಿ ತಾಗಿದೆ. ಕೊರೊನಾ ಭಯದಿಂದ ಕೋಳಿ ಮಾಂಸ ಪ್ರಿಯರು ಕೂಡ ಮೀನು ಮಾಂಸದತ್ತ ಮುಖ ಮಾಡಿದ್ದಾರೆ.

ಸತತ ಬರಗಾಲದಿಂದ ತಾಲೂಕಿನ ಬಹುತೇಕ ಕೆರೆಗಳಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ ಮೀನುಗಾರರಿಗೆ ಮೀನು ಸಾಕಾಣೆಗೂ ಅವಕಾಶ ಇಲ್ಲದಂತಾಗಿದೆ. ಅದಾಗ್ಯೂ ತಾಲೂಕಿನ ಕೆಲ ಕರೆಗೆಳಲ್ಲಿ ಅತ್ಯಲ್ಪ ಪ್ರಮಾಣದಲ್ಲಿ ದೊರೆಯುವ ಮೀನುಗಳಿಗೆ ಬೇಡಿಕೆ ಹೆಚ್ಚಾಗಿ ಹೆಚ್ಚು ದರದಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ.

ತಾಲೂಕು ಕೇಂದ್ರದಲ್ಲಿ ಒಟ್ಟು 38 ಕೋಳಿ ಮಾಂಸದ ಅಂಗಡಿಗಳಿವೆ. ಈ ಮುನ್ನ ಪ್ರತಿನಿತ್ಯ ಒಂದೊಂದು ಅಂಗಡಿಯಲ್ಲಿ ಐದರಿಂದ ಆರು ಸಾವಿರ ರೂ. ವ್ಯಾಪಾರ ನಡೆಯುತ್ತಿತ್ತು. ಕೊರೊನಾ ವೈರಸ್‌ ಹರಡಿದ ಹಿನ್ನೆಲೆಯಲ್ಲಿ ಒಂದು ವಾರದಿಂದ ವ್ಯಾಪಾರ ಪೂರ್ಣ ನಿಂತಿದೆ. –ಮೈಬುಬ್‌, ಚಿಕನ್‌ ವ್ಯಪಾರಿ, ಔರಾದ

 

-ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.