ಕೋವಿಡ್-19 ಸೋಂಕಿಗೆ ಬೀದರ್ ನಲ್ಲಿ ಮೊದಲ ಬಲಿ: ರಾಜ್ಯದಲ್ಲಿ 25ನೇ ಬಲಿ ಪಡೆದ ಸೋಂಕು
Team Udayavani, May 2, 2020, 1:17 PM IST
ಬೀದರ್: ಮಹಾಮಾರಿ ಕೊವಿಡ್-19 ಸೋಂಕಿಗೆ ಗಡಿ ಜಿಲ್ಲೆ ಬೀದರ್ ನಲ್ಲಿ ಮೊದಲ ಬಲಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ 10 ದಿನಗಳಿಂದ ಜಿಲ್ಕೆಯಲ್ಲಿ ಯಾವುದೇ ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣ ವರದಿಯಾಗದ ಹಿನ್ನಲೆಯಲ್ಲಿ ಕೊಂಚ ನಿರಾಳರಾಗಿದ್ದ ಬೀದರ್ ಜನರಲ್ಲಿ ಈ ಸಾವು ಪ್ರಕರಣದಿಂದ ಆತಂಕ ಹೆಚ್ಚಿಸಿದೆ.
ಬೀದರ್ ನ ನಿವಾಸಿಯಾಗಿರುವ 82 ವರ್ಷದ 590ನೇ ಸಂಖ್ಯೆಯ ರೋಗಿ ಕೋವಿಡ್-19 ವೈರಸ್ ನಿಂದ ಮೃತಪಟ್ಟಿರುವ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ದೃಢಪಡಿಸಿದೆ.
ಏ. 27ರಂದು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ ಏ. 28 ರಂದು ಸಾವನಪ್ಪಿದ್ದಾನೆ. ವ್ಯಕ್ತಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಒಳಪಡಿಸಲಾಗಿದ್ದು, ಶನಿವಾರ ವರದಿ ಬಂದಿದೆ. ವೃದ್ಧ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿರುವುದು ಖಚಿತವಾಗಿದೆ.
ಈ ಹೊಸ ಪ್ರಕರಣದೊಂದಿಗೆ ಬೀದರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16 ಆದಂತಾಗಿದೆ. ಅದರಲ್ಲಿ 11 ಜನರು ಗುಣಮುಖರಾಗಿರುವುದರಿಂದ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ 4 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ