ಬೀದರನಲ್ಲಿ ಹೆಚ್ಚುತ್ತಿದೆ ಕೋವಿಡ್-19

ಕೇವಲ 6 ದಿನಗಳಲ್ಲಿ 250 ಸೋಂಕಿತರು ಪತ್ತೆಯಾಗಿರುವುದು ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ

Team Udayavani, Mar 19, 2021, 8:34 PM IST

ಬೀದರ ; ಗಡಿ ನಾಡು ಬೀದರನಲ್ಲಿ ಎರಡನೇ ಅಲೆ ರೂಪದಲ್ಲಿ ಅಪ್ಪಳಿಸಿರುವ ಹೆಮ್ಮಾರಿ ಕೊರೊನಾ ತನ್ನ ಆರ್ಭಟವನ್ನು ಮತ್ತೆ ಮುಂದುವರೆಸಿದೆ. ಹೊಸದಾಗಿ ಶುಕ್ರವಾರ ಮತ್ತೆ 40 ಹೊಸ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದರೆ, ಓರ್ವ ವೃದ್ಧೆ ಸಾವು ಸಂಭವಿಸಿದೆ. ಕೇವಲ 6 ದಿನಗಳಲ್ಲಿ 250 ಸೋಂಕಿತರು ಪತ್ತೆಯಾಗಿರುವುದು ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ.

ನೆರೆಯ ಮಹಾರಾಷ್ಟ್ರದಲ್ಲಿ ಕೊವೀಡ್ ಸೋಂಕು ತನ್ನ ಕೆನ್ನಾಲಿಗೆಯನ್ನು ಚಾಚುತ್ತಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೀದರ ಜಿಲ್ಲೆಗೂ ನಿಧಾನವಾಗಿ ಹಬ್ಬುತ್ತಿದೆ ಎಂಬ ಆತಂಕ ಬಿಸಿಲೂರಿನ ಜನರನ್ನು ಕಾಡಲಾರಂಭಿಸಿದೆ. ಸೋಂಕಿತರ ಕೇಸ್‌ಗಳು ಕುಸಿಯುತ್ತ ಬಂದಿದ್ದರಿಂದ ಜಿಲ್ಲೆಯ ಜನರು ನಿಟ್ಟಿಸಿರುವ ಬಿಟ್ಟಿದ್ದರು. ಇದರಿಂದ ಸಾಮಾನ್ಯ ಜನಜೀವನ ಸಹ ಮೊದಲಿನಂತೆ ಯಥಾಸ್ಥಿತಿಗೆ ತಲುಪುತ್ತಿತ್ತು. ಆದರೆ, ಈಗ ಮತ್ತೊಮ್ಮೆ ಕೋವಿಡ್ ಕಂಟಕವಾಗಿ ಪರಿಣಮಿಸುತ್ತಿದ್ದು, ಎರಡು ದಿನದಲ್ಲಿ ಇಬ್ಬರನ್ನು ಬಲಿ ಪಡೆದಿದೆ.

ಸೋಂಕಿಗೆ ಗುರುವಾರ 47 ವರ್ಷದ ನ್ಯಾಯವಾದಿ ಮೃತಪಟ್ಟಿದ್ದರೆ, ಶುಕ್ರವಾರ 75 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಸಾರಿ ಹಿನ್ನಲೆ ಹೊಂದಿದ್ದ ಈಕೆ ಮಾ. 16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಾ. 14ರಿಂದ 6 ದಿನಗಳಲ್ಲಿ 250 ಪಾಸಿಟಿವ್ ಕೇಸ್ ವರದಿಯಾಗಿವೆ. ಮಾ. 14ರಂದು 36, 15ಕ್ಕೆ 27,  16ಕ್ಕೆ  52, 17ಕ್ಕೆ 77 ಮತ್ತು 18ಕ್ಕೆ 41 ಸೋಂಕಿತರು ಪತ್ತೆಯಾಗಿದ್ದಾರೆ.

ನ್ಯಾಯಾಧೀಶರು ಸೇರಿ ಸಿಬ್ಬಂದಿಗಳಿಗೆ ಸೋಂಕು ತಗುಲಿರುವುದು ಮತ್ತು ನ್ಯಾಯವಾದಿ ಸಾವು ಹಿನ್ನಲೆಯಲ್ಲಿ ಜಿಲ್ಲಾ ನ್ಯಾಯಾಲಯ ಪರಿಸರವನ್ನು ಕಂಟೇನೈಂಟ್ ಝೋನ್ ಎಂದು ಘೋಷಿಸಲಾಗಿದೆ. ಮಾ. 22ರವರೆಗೆ ಕೋರ್ಟ್ ಎಲ್ಲ ಶ್ರೇಣಿ ನ್ಯಾಯಾಲಯಗಳಲ್ಲಿ ಕಲಾಪಗಳನ್ನು ಬಂದ್ ಮಾಡಲಾಗಿದೆ.

ಅಷ್ಟೇ ಅಲ್ಲ ನಗರಸಭೆ ಸಿಬ್ಬಂದಿಗೆ ಪಾಸಿಟಿವ್ ಬಂದಿರುವುದರಿಂದ ಇಡೀ ಕಚೇರಿಯನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಜ್ ಮಾಡಲಾಗಿದೆ. ಕಚೇರಿ ಮುಖ್ಯ ದ್ವಾರದದಲ್ಲಿ ಸೀಲ್‌ಡೌನ್‌ನ ಫಲಕ ಹಾಕಲಾಗಿದೆ. ಸೋಂಕಿತರ ಸಂಪರ್ಕ ಹಿನ್ನಲೆಯಲ್ಲಿ ನಗರಸಭೆ ಅಧಿಕಾರಿ, ಸಿಬ್ಬಂದಿಗಳು ಹಾಗೂ ಪೌರ ಕಾರ್ಮಿಕರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಶನಿವಾರದವರೆಗೆ ಕಚೇರಿ ಸೀಲ್ ಡೌನ್ ಇರಲಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.