![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೋವಿಡ್ 19 ಮುಂಜಾಗ್ರತಾ ಕ್ರಮಕ್ಕೆ ಸೂಚನೆ
Team Udayavani, Mar 29, 2020, 2:21 PM IST
![BIDAR-TDY-1](https://www.udayavani.com/wp-content/uploads/2020/03/BIDAR-TDY-1-620x355.jpg)
ಬೀದರ: ಕೋವಿಡ್ 19 ವೈರಸ್ ಜಿಲ್ಲೆಯಲ್ಲಿ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೀವ್ರ ರೀತಿಯಲ್ಲಿ ಕೈಗೊಳ್ಳಬೇಕು ಎಂದು ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಜಿಲ್ಲಾಡಳಿತಕ್ಕೆ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಗರದಲ್ಲಿ ಕಡ್ಡಾಯ ಫಾಗಿಂಗ್ ಮೂಲಕ ಮತ್ತು ಬ್ಲಿಚಿಂಗ್ ಪೌಡರ್ ಹಾಕುವ ಮೂಲಕ ನಗರದ ಸ್ವತ್ಛತೆಗೆ ಮತ್ತು ಕುಡಿಯುವ ನೀರಿನ ಶುಚಿತ್ವಕ್ಕೆ ಒತ್ತು ಕೊಡಬೇಕು ಎಂದು ಪೌರಾಯುಕ್ತರಿಗೆ ನಿರ್ದೇಶನ ನೀಡಿದರು. ಚೆಕ್ಪೋಸ್ಟ್ ಬಳಿ ಇರುವ ಎಲ್ಲಾ ಸಿಬ್ಬಂದಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ವ್ಯವಸ್ಥೆ ಮಾಡಬೇಕು ಎಂದರು.
ಜಿಲ್ಲೆಗೆ ವಿದೇಶದಿಂದ 570 ಜನರು ಬಂದಿದ್ದು, ಈ ಪೈಕಿ 317 ಜನರು 14 ದಿನಗಳ ಹೋಮ್ಕ್ವಾರಂಟೈನ್ ಅವಧಿ ಮುಗಿಸಿದ್ದು, ಉಳಿದವರು ಕ್ವಾರಂಟೈನದಲ್ಲಿದ್ದಾರೆ. ಕ್ವಾರಂಟೈನ್ಗೆ ಸಹಕರಿಸದ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರತಿ ಗ್ರಾಪಂಗಳಲ್ಲಿ ಟಾಸ್ಕ್ಫೋರ್ಸ್ ರಚನೆ ಮಾಡಿದ್ದು, ಗ್ರಾಮ ಸಹಾಯಕರು, ಆಶಾ ಕಾರ್ಯಕರ್ತೆಯರು ಗ್ರಾಮಗಳಿಗೆ ಆಗಮಿಸುವ ಎಲ್ಲರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲಲ್ಲಿ ಹೋಮ್ ಕ್ವಾರಂಟೈನದಲ್ಲಿರುವ ವ್ಯಕ್ತಿಗಳಿಗೆ ದಿನಕ್ಕೆ ಮೂರು ಸಾರಿ ತಪಾಸಣೆ ಮಾಡಿ ಮಾಹಿತಿ ಪಡೆಯಲಾಗುತ್ತಿದೆ ಎಂದು ಡಿಸಿ ತಿಳಿಸಿದರು.
ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ ಮಾತನಾಡಿ, ಕೋವಿಡ್ 19 ಶಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ಹಿನ್ನೆಲೆಯಲ್ಲಿ ಅಗತ್ಯ ಸಂಖ್ಯೆಯಲ್ಲಿ ಬೆಡ್ಗಳು ಇರುವ ಐಸೋಲೇಶನ್ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. 8 ಅಂಬುಲೆನ್ಸ್ ಪಡೆದುಕೊಳ್ಳಲಾಗಿದೆ. ಹಳೆಯ ಆಸ್ಪತ್ರೆಯಲ್ಲಿ 40 ಐಸಿಯು ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಎಂಎಲ್ಸಿ ರಘುನಾಥ್ರಾವ್ ಮಲ್ಕಾಪೂರೆ, ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಎಸ್ಪಿ ಡಿ.ಎಲ್ ನಾಗೇಶ್, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಡಾ.ರತಿಕಾಂತ ಸ್ವಾಮಿ ಇನ್ನಿತರ ಅಧಿಕಾರಿಗಳು ಇದ್ದರು.
ಸಭೆ ಬಳಿಕ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ನಗರದ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಚಿಕಿತ್ಸೆಗೆ ಬ್ರಿಮ್ಸ್ಆಸ್ಪತ್ರೆಯಲ್ಲಿ ಮಾಡಲಾದ ಕ್ರಮಗಳ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.