ವಿದ್ಯಾರ್ಥಿಗಳಿಂದ ಕೋವಿಡ್ ಜಾಗೃತಿ
Team Udayavani, Mar 24, 2021, 8:44 PM IST
ಬೀದರ: ಸನ್ರೈಸ್ ಶಿಕ್ಷಣ ಸಮೂಹ ಸಂಸ್ಥೆ ವಿದ್ಯಾರ್ಥಿಗಳು ನಗರದಲ್ಲಿ ಮಂಗಳವಾರ ಕೋವಿಡ್ ಜಾಗೃತಿ ಜಾಥಾ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ನಯಾ ಕಮಾನ್ವರೆಗೆ ಜಾಥಾ ನಡೆಸಲಾಯಿತು.
ಕೈಯಲ್ಲಿ ಜಾಗೃತಿ ಪೋಸ್ಟರ್ ಹಿಡಿದಿದ್ದ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ದಾರಿಯುದ್ದಕ್ಕೂ ಸಾರ್ವಜನಿಕರಿಗೆ ಸಾವಿರಕ್ಕೂ ಅ ಧಿಕ ಉಚಿತ ಮಾಸ್ಕ್ ಹಾಗೂ ನೀರಿನ ಬಾಟಲಿ ವಿತರಿಸಿದರು. ಸಂಸ್ಥೆ ಕಾರ್ಯದರ್ಶಿ ಮಹಮ್ಮದ್ ಗೌಸ್ ಶೇಕ್ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಶುರುವಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.
ಹೀಗಾಗಿ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿ ತಪ್ಪದೇ ಪಾಲಿಸಬೇಕು ಎಂದರು. ಜನದಟ್ಟಣೆ ಸ್ಥಳಗಳಿಂದ ದೂರವಿರಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು. ಸ್ಯಾನಿಟೈಸರ್ ಬಳಸಬೇಕು. ಕೈಗಳನ್ನು ಆಗಾಗ ಸಾಬೂನಿನಿಂದ ತೊಳೆದುಕೊಳ್ಳಬೇಕು. ನೆಗಡಿ, ಕೆಮ್ಮು, ಜ್ವರ ಕಂಡರೆ ಕೂಡಲೇ ವೈದ್ಯರನ್ನು ಕಾಣಬೇಕು ಎಂದರು.
ಕೋವಿಡ್ನಿಂದ ಒಂದು ವರ್ಷದ ಅವಧಿ ಯಲ್ಲಿ ಜಗತ್ತು ನಲುಗಿದೆ. ಕಾರಣ, ಸಾರ್ವಜನಿಕರು ಕೋವಿಡ್ ನಿರ್ಲಕ್ಷಿಸಬಾರದು. ಪ್ರತಿಯೊಬ್ಬರೂ ಸುರಕ್ಷತಾ ನಿಯಮ ಪಾಲಿಸಿ, ಸರ್ಕಾರಕ್ಕೆ ಸಹಕಾರ ನೀಡಿದ್ದಲ್ಲಿ ಮಾತ್ರ ಭಾರತವನ್ನು ಕೋವಿಡ್ ಮುಕ್ತಗೊಳಿಸಲು ಸಾಧ್ಯವಿದೆ ಎಂದರು. ಈ ವೇಳೆ ಸಂಸ್ಥೆ ಅಧ್ಯಕ್ಷ ಮಹಮ್ಮದ್ ಉಮರ್ ಶೇಕ್, ಮಹಮ್ಮದ್ ಮುದಸ್ಸಿರ್ ಶೇಕ್, ಪ್ರಾಚಾರ್ಯ ಮಹಮ್ಮದ್ ಗಯಾಸ್, ಉಪನ್ಯಾಸಕರಾದ ಆಕಾಶ, ವಿನೀತ್, ಮಹಮ್ಮದ್ ಖಾಲೀದ್, ಮತಿನ್, ಮಹಮ್ಮದ್ ಅಲಿ ಫೈಜನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ