ಸಾಮಾಜಿಕ ಅಂತರ ಪಾಲನೆ ನಿಯಮ ರೂಢಿಸಿಕೊಳ್ಳಿ


Team Udayavani, Nov 16, 2020, 6:49 PM IST

ಸಾಮಾಜಿಕ ಅಂತರ ಪಾಲನೆ ನಿಯಮ ರೂಢಿಸಿಕೊಳ್ಳಿ

ಬೀದರ: ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಮೇಲಿಂದ ಮೇಲೆ ತಿಳಿಸುತ್ತಿದ್ದರೂ ಕೆಲವು ಜನರು ಮಾಸ್ಕ್ ಧರಿಸುವುದಾಗಲಿ, ಸಾಮಾಜಿಕ ಅಂತರ ಪಾಲನೆ ನಿಯಮಗಳನ್ನು ರೂಢಿಸಿಕೊಳ್ಳುತ್ತಿಲ್ಲ.

ಹೀಗಾಗಿ ಜನಜಾಗೃತಿ ಮೂಡಿಸುವ ವಾಹನಗಳು ಖುದ್ದು ಆಯಾ ಗ್ರಾಮಗಳಿಗೆ ತೆರಳಿ, ಜನರ ಮನೆಬಾಗಿಲ ಮುಂದೆ ನಿಂತು ಜನಜಾಗೃತಿ ಮೂಡಿಸಲು ವಾತಾ ಇಲಾಖೆಯ ಮೂಲಕ ಜನಜಾಗೃತಿ ಕಾರ್ಯಕ್ರಮ ರೂಪಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದರು.

ವಾರ್ತಾ ಇಲಾಖೆಯು ಹಮ್ಮಿಕೊಂಡಿರುವ ಕೋವಿಡ್‌-19 ಜಾಗೃತಿ ಕುರಿತಂತೆ ಪ್ರಚಾರ ಕಾರ್ಯ ನಡೆಸಲಿರುವ ಬೃಹತ್‌ ಎಲ್‌ಇಡಿ ಪರದೆ ಹೊಂದಿರುವ ವಾಹನಗಳಿಗೆ ಶನಿವಾರ ಔರಾದ ತಾಲೂಕಿನ ಘಮಸುಬಾಯಿ ತಾಂಡಾದಲ್ಲಿ ಹಸಿರು ನಿಶಾನೆ ತೋರಿದರು.

ಬೀದಿ ನಾಟಕಗಳ ಕಲಾ ತಂಡಗಳ ಮೂಲಕ ವಾರ್ತಾ ಇಲಾಖೆಯು ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜನರು ಈಗಾಗಲೇ ನೋಡಿದ್ದಾರೆ. ಆದರೆ, ಈಗ ಕೋವಿಡ್‌-19 ಹಿನ್ನೆಲೆಯಲ್ಲಿ ಕಲಾವಿದರ ಆರೋಗ್ಯದ ಹಿತದೃಷ್ಟಿಯಿಂದ ಎಲ್‌ಇಡಿ ವಾಹನಗಳ ಮೂಲಕ ಕೋವಿಡ್‌-19ರ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಪಿಡಿಒಗಳಿಗೆ ಸೂಚನೆ: ಈ ಎಲ್‌ಇಡಿ ಪರದೆಯ ವಾಹನವು ಆಯಾ ತಾಲೂಕುಗಳಲ್ಲಿ ಸಂಚರಿಸುವಾಗ ಸಂಬಂಧಿಸಿದ ಪಿಡಿಒಗಳು ಈ ಬಗ್ಗೆ ಗಮನ ಹರಿಸಿ, ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಕೋವಿಡ್‌-19 ಮುಂಜಾಗ್ರತಾ ಕ್ರಮದ ಸಂದೇಶ ತಲುಪುವ ಹಾಗೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು.

ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಮಾತನಾಡಿದರು. ಜಿ.ಪಂ ಸದಸ್ಯ ಮಾರುತಿ ಚವ್ಹಾಣ, ಮುಖಂಡರಾದ ಬಸವರಾಜ ಸ್ವಾಮಿ, ಚಂದ್ರಕಾಂತ ಪಾಂಚಾಳ, ಮಾರುತಿ ಗುಳೆ, ಸಂಜೀವ ಪಾಂಚಾಳ ಹಾಗೂ ಇತರರು ಇದ್ದರು. ಶನಿವಾರ ವಾಹನಗಳು ಬೀದರ ತಾಲೂಕಿನ ಅಷ್ಟೂರ್‌, ಮಾಳೇಗಾಂವ್‌, ಚಿಲ್ಲರ್ಗಿ, ಚೀಮಕೋಡ್‌ ಮತ್ತು ಗಾದಗಿ ಗ್ರಾಮಗಳಲ್ಲಿ ಮತ್ತು ಔರಾದ ತಾಲೂಕಿನ ಸಂಗಮ, ಬಳತ್‌ (ಬಿ), ಬಳತ್‌ (ಕೆ), ಚಾಂದೋರಿ ಮತ್ತು ಹಾಲಹಳ್ಳಿ ಗ್ರಾಮಗಳಲ್ಲಿ ಸಂಚಾರ ನಡೆಸಿ, ಜನಜಾಗೃತಿ ಮೂಡಿಸಿದವು.

ರವಿವಾರ ಕಾರ್ಯಕ್ರಮ ಎಲ್ಲೆಲ್ಲೆ?: ಎಲ್‌ಇಡಿ ಪರದೆಯ ವಾಹನಗಳು ನ. 15 ರಂದು ಬೀದರ ತಾಲೂಕಿನ ಚಿಕ್ಕಪೇಟ್‌, ಮರಖಲ್‌, ಜನವಾಡ, ಚಾಂಬೋಳ ಮತ್ತು ಹಳೆಂಬರ್‌ ಗ್ರಾಮಗಳಲ್ಲಿ ಹಾಗೂ ಔರಾದ ತಾಲೂಕಿನಲ್ಲಿ ಠಾಣಾಕುಶನೂರ, ನಿಡೋದಾ, ರಕ್ಷಾಳ (ಬಿ), ರಕ್ಷಾಳ (ಕೆ) ಮತ್ತು ಹೆಡಗಾಪುರ ಗ್ರಾಮಗಳಲ್ಲಿ ಸಂಚಾರ ನಡೆಸಲಿವೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.