ಖಾಸಗಿ ವೈದ್ಯರಿಂದ ಕೋವಿಡ್ ಆರೋಗ್ಯ ಕೇಂದ್ರ ಆರಂಭ
Team Udayavani, Jul 29, 2020, 2:27 PM IST
ಬೀದರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ನಿಯಂತ್ರಣ ಹಾಗೂ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ನಗರದ ಸಪ್ನಾ ಹೊಟೇಲ್ ನಲ್ಲಿ ವಿಶೇಷ ಕೋವಿಡ್ ಕಾಳಜಿ ಮತ್ತು ಆರೋಗ್ಯ ಕೇಂದ್ರವನ್ನು ಸೋಮವಾರದಿಂದ ಆರಂಭಿಸಲಾಗಿದೆ ಎಂದು ಕೇಂದ್ರದ ನಿರ್ದೇಶಕ, ಐಎಂಎ ಜಿಲ್ಲಾಧ್ಯಕ್ಷ ಡಾ| ವಿ.ವಿ. ನಾಗರಾಜ ತಿಳಿಸಿದ್ದಾರೆ.
ಕೇಂದ್ರದಲ್ಲಿ ಲಕ್ಷಣ ರಹಿತ ಸೋಂಕಿತರಿಗೆ ಹಾಗೂ ಸಾಮಾನ್ಯದಿಂದ ಮಧ್ಯಮ ಗತಿಯಲ್ಲಿರುವ ಕೆಮ್ಮು, ನೆಗಡಿ ಲಕ್ಷಣ ಕಾಣಿಸಿಕೊಂಡ ವಕ್ತಿಗಳಿಗೆ ಚಿಕಿತ್ಸೆ ನೀಡಲಾಗುವುದು. ಉಸಿರಾಟ ತೊಂದರೆ ಮತ್ತು ಶ್ವಾಸ ಕೋಶ ಪ್ರಮಾಣದಲ್ಲಿ ಶೇ. 90ಕ್ಕಿಂತ ಮೇಲ್ಪಟ ಸೊಂಕಿತರನ್ನುಇಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇಂತಹ ಲಕ್ಷಣ ಹೊಂದಿರುವ ರೋಗಿಗಳಿಗಾಗಿಯೇ ಕೋವಿಡ್ ಕೇಂದ್ರದ 33 ಕೋಣೆಗಳ ಪೈಕಿ 11 ಕೋಣೆಗಳಲ್ಲಿ ಆಕ್ಸಿಜನ್, 8 ಹಾಸಿಗೆಗಳಿಗೆ ಐಸಿಯು ಘಟಕ ವ್ಯವಸ್ಥೆ ಮಾಡಲಾಗಿದೆ. ಜತೆಯಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಚಿಕಿತ್ಸೆಗೆ ದಾಖಲಾದ ರೋಗಿಗಳನ್ನು ದಿನದ 24 ಗಂಟೆ ನಿಯೋಜಿಸಲಾಗಿರುವ ವೈದ್ಯರು ಹಾಗೂ ಶ್ವಾಸಕೊಶ ಚಿಕಿತ್ಸೆಗೆ ವಿಶೇಷ ತಜ್ಞ ವೈದ್ಯರಿಂದ ತಪಾಸಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ದಿನದ 24 ಗಂಟೆ ಕರ್ತವ್ಯ ನಿರತ ವೈದ್ಯರು ಸೇವೆ ಲಭ್ಯ ಇರಲಿದ್ದು, ಫಿಜಿಶಿಯನ್ ವೈದ್ಯರು ಸಹ ಮೇಲಿಂದ ಮೇಲೆ ಸುತ್ತು ಹಾಕುತ್ತಾರೆ. ಒಟ್ಟು ನಾಲ್ವರು ಫಿಜಿಶಿಯನ್ಸ್ರನ್ನು ಪಾಳೆ ಪ್ರಕಾರ ಎರಡು ದಿನಕ್ಕೊಮ್ಮೆ ಬದಲಾವಣೆ ಮಾಡಲಾಗುತ್ತದೆ ಎಂದಿದ್ದಾರೆ.
ಆಯುಷ್ಮಾನ್ ಭಾರತ ಮತ್ತು ಕರ್ನಾಟಕ ಆರೋಗ್ಯ ಸುರಕ್ಷಾ ಯೊಜನೆ ವ್ಯಾಪ್ತಿಗೆ ಒಳಪಡುವ ರೋಗಿಗಳಿಗೆ ಸರ್ಕಾರ ನಿಗದಿ ಮಾಡಿರುವ ದರದಲ್ಲಿ ಚಿಕಿತ್ಸೆ ನೀಡಲಾಗುವುದು. ಜತೆಗೆ ಈ ಯೋಜನೆಗಳ ವ್ಯಾಪ್ತಿಯಲ್ಲಿ ಇರದ ಜನರಿಗೂ ಸಹ ಇದೇ ದರ ಪಡೆಯಲಾಗುವುದು. ಜಿಲ್ಲಾಧಿಕಾರಿಗಳ ಪ್ರೋತ್ಸಾಹ ಮತ್ತು ಸಹಕಾರದಿಂದ 6 ಜನ ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿಕೊಂಡು ಆರಂಭಿಸಿರುವ ವಿಶೇಷ ಕೋವಿಡ್ ಕೇಂದ್ರದ ಮೂಲಕ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಿ ರೋಗಿಗಳು ಬೇಗ ಗುಣಮುಖರಾಗಿ ಮನೆಗೆ ಹೋಗುವಂತ ವಾತಾವರಣ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯ ಜನತೆ ಕೇಂದ್ರದ ಸದುಪಯೊಗ ಪಡೆದುಕೊಳ್ಳಬಹುದು ಎಂದು ಡಾ| ನಾಗರಾಜ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ