
ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ: ಒಂದೇ ದಿನದಲ್ಲಿ ಆರೋಪಿ ಪತ್ತೆಗೆ ಎಂ.ಎಲ್.ಸಿ.ಗಳ ಒತ್ತಾಯ
Team Udayavani, Nov 27, 2022, 11:35 AM IST

ಹುಮನಾಬಾದ: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಒಂದೇ ದಿನದಲ್ಲಿ ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ವಿಧಾನ ಪರಿಷತ್ ಸದಸ್ಯರಾದ ಡಾ। ಚಂದ್ರಶೇಖರ ಪಾಟೀಲ ಹಾಗೂ ಭೀಮರಾವ ಪಾಟೀಲ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕಿನ ಘಾಟಬೋರಳ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅವರು, ಇಂತಹ ಘಟನೆಗಳು ಗ್ರಾಮಕ್ಕೆ ಅವಮಾನ ಉಂಟು ಮಾಡುತ್ತವೆ. ಇಂತಹ ಘಟನೆಗಳು ಮುಂದೆ ನಡೆಯದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಕೆಲ ಮಾಹಿತಿಗಳು ಲಭ್ಯವಾಗಿದ್ದು, ಕೂಡಲೇ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಲಿದ್ದಾರೆ. ಪೊಲೀಸ್ ಕಾರ್ಯಕ್ಕೆ ಗ್ರಾಮದ ಎಲ್ಲಾ ಜನರು ಸಹಕಾರ ನೀಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮಹಿಳೆಯರು, ಒಂದೇ ರಸ್ತೆಯಲ್ಲಿ ವಿವಿಧ ವೃತ್ತಗಳಿವೆ. ಮಹಾನುಭಾವರ ಭಾವಚಿತ್ರಕ್ಕೆ ಯಾವತ್ತು ಅವಮಾನ ಉಂಟಾಗುತ್ತಿಲ್ಲ. ಆದರೆ ಅಂಬೇಡ್ಕರ್ ಭಾವಚಿತ್ರಕ್ಕೆ ಯಾಕೆ ಪದೆ ಪದೆ ಅವಮಾನ ಆಗುತ್ತಿದೆ ಎಂದು ಪ್ರಶ್ನಿಸಿದರು. ಕೂಡಲೇ ಗ್ರಾಮ ಪಂಚಾಯತ್ ವತಿಯಿಂದ ಸಿಸಿಟಿವಿ ಅಳವಡಿಸುವ ಕೆಲಸ ಆಗಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಭೀಮರಾವ ಪಾಟೀಲ, ಪಂಚಾಯತ್ ವತಿಯಿಂದ ಕೂಡಲೇ ಸಿಸಿ ಕ್ಯಾಮೆರಾ ಅಳವಡಿಸುತ್ತಾರೆ. ಅಲ್ಲದೆ, ಶಾಸಕರು ಈಗಾಗಲೇ 5 ಲಕ್ಷ ಅನುದಾನ ನೀಡಿದ್ದು, ಕೂಡಲೆ ಕಾಮಗಾರಿ ಮುಗಿಸಿ ವೃತ್ತ ಉದ್ಘಾಟನೆ ಮಾಡೊಣ ಎಂದರು.
ವೃತ್ತದಲ್ಲಿ ನೂರಾರು ಮಹಿಳೆಯರು, ಗ್ರಾಮದ ಮುಖಂಡರು ಇದ್ದರು. ಸಿಪಿಐ ಶರಣಸಪ್ಪ ಕೋಡ್ಲಾ, ಪಿಎಸ್ಐ ಮಂಜನಗೌಡ್ ಪಾಟೀಲ, ತಹಶೀಲ್ದಾರ ಪ್ರದೀಪಕುಮಾರ ಸೇರಿದಂತೆ ಇತರರು ಸ್ಥಳದಲ್ಲಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿದ್ರಿ ಕಲೆಯಲ್ಲಿ ದೇಶ ವಿದೇಶದಲ್ಲಿ ಖ್ಯಾತಿ ಪಡೆದ ರಶೀದ್ ಅಹ್ಮದ್ ಖಾದ್ರಿಯವರಿಗೆ ಪದ್ಮಶ್ರೀ

ರೈತರ ಜೊತೆಗಿನ ಚೆಲ್ಲಾಟ ಒಳ್ಳೆಯದಲ್ಲ: ಬಿಜೆಪಿ ಸರಕಾರಕ್ಕೆ ಹೆಚ್ ಡಿಕೆ ಎಚ್ಚರಿಕೆ

ಭಾಲ್ಕಿ: ಸಾಲಬಾಧೆ ತಾಳಲಾರದೇ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ

ಮಾಣಿಕನಗರ ಪಂಚಾಯತ್ಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ

ಜ.5 ರಿಂದ ಬೀದರ್ ನಲ್ಲಿ 4 ದಿನಗಳ ಕಾಲ ‘ಪಂಚರತ್ನ ರಥಯಾತ್ರೆ’ : ಬಂಡೆಪ್ಪ ಕಾಶೆಂಪುರ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

‘ಹೊಂದಿಸಿ ಬರೆಯಿರಿʼ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಅಮೃತ್ ಕಾಲದ ಮೊದಲ ಬಜೆಟ್ ಸಮಾಜದ ಕನಸುಗಳನ್ನು ಈಡೇರಿಸಲಿದೆ: ಪ್ರಧಾನಿ ಮೋದಿ

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಸಲ್ಮಾನ್ ಖಾನ್ ಗೆ ಸಿನಿಮಾ ಆಫರ್ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್ ಮಾಡ್ತಾರ ಮಿ.ಪರ್ಫೆಕ್ಟ್?