ಕೃಷಿ ಲಾಭದಾಯಕವಾಗಿಸಲು ಸಿಪಿಐ ಆಗ್ರಹ
Team Udayavani, Jul 26, 2017, 10:18 AM IST
ಬೀದರ: ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದಿಂದ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ನಗರದ ಅಂಬೇಡ್ಕರ ವೃತ್ತದಲ್ಲಿ ಸೇರಿದ ಪಕ್ಷದ ಕಾರ್ಯಕರ್ತರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ಮೂಲಕ ಆಗಮಿಸಿ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಕೃಷಿಯನ್ನು ಮರ್ಯಾದೆ ಕಾಯಕವೆಂದು ಭಾವಿಸಲಾಗಿತ್ತು. ಸರ್ಕಾರಿ ನೌಕರಿ ಮಾಡುವುದು ಕನಿಷ್ಠ ಎಂದು ಪರಿಗಣಿಸಲಾಗಿತ್ತು. ಆದರೆ, 70 ವರ್ಷಗಳ ಸ್ವತಂತ್ರ ಭಾರತದಲ್ಲಿ ಸದ್ಯ ಕೃಷಿ ಕಾಯಕವನ್ನು ರೈತರು ಕೈಬಿಡಲು ಮುಂದಾಗಿದ್ದು, ಇದಕ್ಕೆ ಕೃಷಿ ಯು ಒಂದು ಲಾಭದಾಯಕ ಉದ್ಯೋಗ ಆಗದಿರುವುದು
ಕಾರಣ ಎಂದು ಮನವಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ದಲ್ಲಾಳಿಗಳು, ಬೀಜ ಮತ್ತು ಗೊಬ್ಬರ ಕಾರ್ಖಾನೆ ಮಾಲೀಕರು ಕೋಟ್ಯಧಿಪತಿ ಆಗುತ್ತಿದ್ದಾರೆ. ರೈತರಿಗೆ ನ್ಯಾಯ ಸಮ್ಮತ ಬೆಲೆ ಸಿಗುತ್ತಿಲ್ಲ. ಇದನ್ನು ಪ್ರಶ್ನಿಸಿದ ರೈತರ ಮೇಲೆಯೇ ಗೋಲಿ ಬಾರ್ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಕೃತ ಮತ್ತು ಪ್ರಾದೇಶಿಕ ಬ್ಯಾಂಕ್ಗಳಿಂದ ರೈತರ ಎಲ್ಲ ತರಹದ ಸಾಲಗಳನ್ನು ಮನ್ನಾ ಮಾಡಬೇಕು. ಸ್ವಾಮಿನಾಥನ್ ಆಯೋಗದ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು. ಬೆಳೆಗೆ ಕನಿಷ್ಠ ಬೆಂಬಲ
ಬೆಲೆ ನಿಗದಿಪಡಿಸಬೇಕು. ಇದಕ್ಕಾಗಿ ಒಂದು ಲಕ್ಷ ಕೋಟಿ ಬೆಲೆ ನಿಯಂತ್ರಣ ನಿಧಿ ಬಿಡುಗಡೆ ಮಾಡಬೇಕು. ಬೀಜ, ಗೊಬ್ಬರ,
ಔಷಧ, ಪಂಪ್ಸೆಟ್, ಜನರೇಟರ್ ಗಳ ಮಾರಾಟಗಳನ್ನು ಜಿಎಸ್ಟಿಯಿಂದ ಹೊರಗಿರಿಸಬೇಕು. ಕೃಷಿಕರು ಮತ್ತು ಕೃಷಿ
ಕಾರ್ಮಿಕರಿಗೆ ಪ್ರತಿ ತಿಂಗಳು 5 ಸಾವಿರ ಗೌರವ ಧನ ನೀಡಬೇಕು ಹಾಗೂ ಬಗರ ಹುಕುಂ ಕೃಷಿ ಕ್ರಮಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಸಿಪಿಐ ಕಾರ್ಯದರ್ಶಿ ಬಾಬುರಾವ್ ಹೊನ್ನಾ, ಪ್ರಮುಖರಾದ ಪ್ರಭುರಾವ್ ಕರನಾಯಕ, ಪ್ರಭು ಹೊಚಕನಳ್ಳಿ, ಮುನಿರೊದ್ದೀನ್, ರಾಮಯ್ಯ ಮಠಪತಿ, ಪಾಂಡುರಂಗ ಪ್ಯಾಗೆ, ಗುರುನಾಥ ಬಿರಾದಾರ, ಬಾಬುರಾವ್ ವಾಡೇಕರ್, ವೀರಶೆಟ್ಟಿ ಕುಂಬಾರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!