ಬಸವಕಲ್ಯಾಣ: ಟಿಕೆಟ್ ಆಕಾಂಕ್ಷಿಗಳಿಂದ ಡಿಕೆ ಶಿವಕುಮಾರ್ ಗೆ ಭರ್ಜರಿ ಸ್ವಾಗತ
Team Udayavani, Nov 24, 2020, 1:56 PM IST
ಬೀದರ್: ಉಪ ಚುನಾವಣೆ ಹಿನ್ನಲೆಯಲ್ಲಿ ಬಸವಕಲ್ಯಾಣಕ್ಕೆ ಮಂಗಳವಾರ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಅದ್ದೂರಿಯಾಗಿ ಸ್ವಾಗತಿಸಿ ತಮ್ಮ ಶಕ್ತಿ ಪ್ರದರ್ಶನ ತೋರಿದರು.
ಕಲಬುರ್ಗಿಯಿಂದ ಬಸವಕಲ್ಯಾಣಕ್ಕೆ ಆಗಮಿಸುವ ಮಾರ್ಗ ಮಧ್ಯೆ ಗಡಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಇತ್ತೀಚೆಗೆ ನಿಧನರಾದ ಶಾಸಕ ದಿ. ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು. ಬಳಿಕ ಟಿಕೆಟ್ ಆಕಾಂಕ್ಷಿಗಳಿಂದ ಪ್ರತ್ಯೇಕ ಸ್ವಾಗತ ಗಮನ ಸೆಳೆಯಿತು. ಬೃಹತ್ ವೇದಿಕೆ, ಕಾರ್ಯಕರ್ತರ ಪಡೆಯೊಂದಿಗೆ ಬರಮಾಡಿಕೊಂಡರು.
ವಿಶೇಷವಾಗಿ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿರುವ ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್ ಜೆಸಿಬಿಗಳ ಮೂಲಕ ಪುಷ್ಪ ಮಾಲೆ ಅರ್ಪಿಸಿದರು. ತೆರೆದ ವಾಹನದಲ್ಲಿ ಬಂದ ಡಿ.ಕೆ ಶಿವಕುಮಾರ್ ಅವರ ಮೆರವಣಿಗೆ ನಡೆಸಿ, ಜೆಸಿಬಿಗಳಿಂದ ಪುಷ್ಪಾರ್ಚನೆ ಮಾಡಿದ್ದು ವಿಶೇಷವಾಗಿತ್ತು.
ಇದನ್ನೂ ಓದಿ:ಚುನಾವಣೆ ದಿನಾಂಕ ನಿಗದಿಯಾಗದೆ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದ ಪ್ರತಾಪ್ ಗೌಡ ಪಾಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Vande Bharat: 1.5 ವರ್ಷದಲ್ಲಿ ವಂದೇ ಭಾರತ್ಗೆ 50 ಬಾರಿ ಕಲ್ಲೆಸೆತ
Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್ಗೆ ದೂರು