Admission ಪ್ರಚಾರಕ್ಕೆ ವಿದ್ಯಾರ್ಥಿನಿಯರಿಂದ ಡ್ಯಾನ್ಸ್!: ಕಾಲೇಜಿಗೆ ನೋಟಿಸ್
ಭಕ್ತರ ಗಮನ ಸೆಳೆಯಲು ವಿದ್ಯಾರ್ಥಿನಿಯರಿಂದ ಸಾರ್ವಜನಿಕವಾಗಿ ರಸ್ತೆ ಮೇಲೆ ನೃತ್ಯ!
Team Udayavani, Mar 15, 2024, 9:19 PM IST
ಬೀದರ್ : ಕಾಲೇಜು ಅಡ್ಮಿಷನ್ ಪ್ರಚಾರದ (ಬ್ರ್ಯಾಂಡಿಂಗ್) ಸಂಬಂಧ ವಿದ್ಯಾರ್ಥಿನಿಯರನ್ನು ಸಾರ್ವಜನಿಕವಾಗಿ ರಸ್ತೆ ಮೇಲೆ ನೃತ್ಯ ಮಾಡಲು ಬಳಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ-12 ಟ್ಯಾಪ್ ರೂಟ್ ಶಿಕ್ಷಣ ಸಮೂಹ ಸಂಸ್ಥೆ ನಡೆಸುತ್ತಿರುವ ನಗರದ ಮಾತೆ ಮಾಣಿಕೇಶ್ವರಿ ಪಿಯು ಕಾಲೇಜಿಗೆ ಡಿಡಿಪಿಯು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಮಹಾ ಶಿವರಾತ್ರಿಯಂದು ನಗರದ ಪಾಪನಾಶ ಮಂದಿರದ ಪರಿಸರದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಟೀ- ಶರ್ಟ್ ಹಾಗೂ ಜೀನ್ಸ್ ಸಮವಸ್ತ್ರ ತೊಟ್ಟು ಸಮೂಹ ನೃತ್ಯ ಮಾಡಿತ್ತು. ಕಾಲೇಜಿನಲ್ಲಿ ಪ್ರವೇಶ ಪಡೆಯುವ ಸಂಬಂಧವಾಗಿ, ದೇವಸ್ಥಾನಕ್ಕೆ ಬರುವ ಭಕ್ತರ ಗಮನ ಸೆಳೆಯಲು ವಿದ್ಯಾರ್ಥಿನಿಯರಿಗೆ ನೃತ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಇದರ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಲೇಜಿನ ಪ್ರವೇಶ ಪ್ರಚಾರಕ್ಕಾಗಿ ವಿದ್ಯಾರ್ಥಿನಿಯರಿಗೆ ಈ ರೀತಿ ಬಳಸಿಕೊಂಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿತ್ತು.
ಹಾಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಡಿಡಿಪಿಯು ಶೋಕಾಸ್ ನೋಟಿಸ್ ಜಾರಿ ಮಾಡಿ, ಲಿಖಿತ ಉತ್ತರ ಕೇಳಿದ್ದಾರೆ. ಮಾ.11ರಂದು ಸಾಮಾಜಿಕ ತಾಣಗಳಲ್ಲಿ ಗಮನಿಸಿದ ವಿಡಿಯೋದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಪಾಪನಾಶ ಮಂದಿರದಲ್ಲಿ ಖಾಸಗಿಯಾಗಿ ಡ್ಯಾನ್ಸ್ ಮಾಡಿರುವುದು ಕಂಡುಬಂದಿದೆ.
ಈ ಕಾರ್ಯಕ್ರಮ ನಡೆಸಲು ಇಲಾಖೆ ಅಥವಾ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ. ಸಾರ್ವಜನಿಕವಾಗಿ ವಿಶೇಷವಾಗಿ ವಿದ್ಯಾರ್ಥಿನಿಯರನ್ನು ಇಂತಹ ಕಾರ್ಯಕ್ರಮಕ್ಕೆ ಬಳಸಿರುವುದು ನಿಯಮಬಾಹಿರವಾಗಿದೆ. ಈ ಸಂಬಂಧ ಜಾರಿಗೊಳಿಸಿದ ಶೋಕಾಸ್ ನೋಟಿಸ್ಗೆ ಮಾ. 16 ರೊಳಗೆ ಉತ್ತರ ನೀಡಬೇಕು. ಇಲ್ಲದಿದ್ದರೆ ಕಾಲೇಜಿನ ವಿರುದ್ಧ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Anubhava Mantapa ಡಿಸೆಂಬರ್ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ
CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.