ಸಾರಿಗೆ ನೌಕರರಿಗಿಲ್ಲ ದಸರಾ ಸಂಭ್ರಮ


Team Udayavani, Oct 14, 2021, 11:32 AM IST

7

ಬೀದರ: ಕೊರೊನಾದಿಂದ ಆದಾಯ ಕುಸಿತವಾಗಿ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಚೇತರಿಕೆ ಕಾಣುತ್ತಿದ್ದರೂ ಸಾರಿಗೆ ನೌಕರರ “ವೇತನ ಸಮಸ್ಯೆ’ಗೆ ಮಾತ್ರ ಪರಿಹಾರ ಸಿಕ್ಕಿಲ್ಲ. ಕಳೆದೆರಡು ತಿಂಗಳ ಅರ್ಧದಷ್ಟು ಮಾತ್ರ ಸಂಬಳ ಪಾವತಿಯಾಗಿದ್ದು, ಈ ಬಾರಿ ವಿಜಯದಶಮಿ ಹಬ್ಬವನ್ನೂ ನೌಕರರು ಬರಿಗೈನಲ್ಲೇ ಆಚರಿಸಬೇಕಾದ ಕಷ್ಟದ ಸ್ಥಿತಿ ಎದುರಾಗಿದೆ.

ಕೋವಿಡ್‌ ಸೋಂಕು ಅಪ್ಪಳಿಸಿದಾಗಿನಿಂದ ಸಾರಿಗೆ ಸಂಸ್ಥೆ ನೌಕರರ ವೇತನ ಸಂಕಟ ಬೆಂಬಿಡದಂತೆ ಕಾಡುತ್ತಲೇ ಇದೆ. ಲಾಕ್‌ ಡೌನ್‌ ಮತ್ತು ನಂತರ ಪ್ರಯಾಣಿಕರ ಕೊರತೆಯಿಂದ ರಸ್ತೆ ಸಾರಿಗೆ ನಿಗಮಗಳು ಆದಾಯ ಇಲ್ಲದೇ ಆರ್ಥಿಕ ಕುಸಿತಕ್ಕೆ ಒಳಗಾಗುತ್ತ ಬಂದಿವೆ. ತಿಂಗಳ ವೇತನಕ್ಕಾಗಿ ಸರ್ಕಾರದತ್ತ ಕೈಚಾಚಬೇಕಾದ ಸ್ಥಿತಿ ಮಾತ್ರ ತಪ್ಪುತ್ತಿಲ್ಲ.

ಕೊರೊನಾ ಎರಡನೇ ಅಲೆ ಬಹುತೇಕ ನಿಯಂತ್ರಣದಲ್ಲಿದ್ದು, ಸೋಂಕಿತರ ಪ್ರಮಾಣವೂ ಕುಸಿದಿದೆ. ಹಾಗಾಗಿ ಹಂತ-ಹಂತವಾಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರಿಗೆ ನಿಗಮಗಳು ಸಹ ಹಳಿಗೆ ಮರಳುತ್ತಿವೆ. ಆದರೂ ನೌಕರರಿಗೆ ಸಮಯಕ್ಕೆ ಸಂಬಳ ಮಾತ್ರ ಕೈಸೇರುತ್ತಿಲ್ಲ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವ್ಯಾಪ್ತಿಯ ಬೀದರ ವಿಭಾಗದಲ್ಲಿ ಬಸ್‌ ಚಾಲಕ, ನಿರ್ವಾಹಕರು, ಮೆಕ್ಯಾನಿಕ್‌ ಮತ್ತು ಕಚೇರಿ ಸಿಬ್ಬಂದಿ ಸೇರಿ ಒಟ್ಟು 2520 ನೌಕರರಿದ್ದಾರೆ. ಆಗಸ್ಟ್‌ ತಿಂಗಳ ವೇತನವನ್ನು ಸೆ.27ಕ್ಕೆ ಮತ್ತು ಸೆಪ್ಟೆಂಬರ್‌ ತಿಂಗಳ ಸಂಬಳವನ್ನು ಅ.9ಕ್ಕೆ ಕೇವಲ ಅರ್ಧದಷ್ಟು ಮಾತ್ರ ಪಾವತಿಸಲಾಗಿದೆ. ಕಡಿಮೆ ವೇತನದಲ್ಲಿ ದುಡಿಯುವ ಸಾರಿಗೆ ಸಿಬ್ಬಂದಿಗಳಿಗೆ ಸಾಲ ಮತ್ತು ಇತರ ಸೌಲಭ್ಯಗಳ ಹಣ ಕಡಿತವಾಗಿ ಕೈಸೇರುವುದೇ ಕಮ್ಮಿ. ಈಗ ಅರ್ಧದಷ್ಟು ಮಾತ್ರ ವೇತನ ನೀಡಿ ಕೈಚೆಲ್ಲಿ ಕುಳಿತಿರುವುದು ನೌಕರರು ಕುಟುಂಬ ನಿರ್ವಹಣೆಗೆ ಪರದಾಡುವ ಸ್ಥಿತಿ ಬಂದಿದೆ.

ಇದನ್ನೂ ಓದಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 18,987 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಹೆಚ್ಚಳ

ಇನ್ನೂ ಎರಡು ದಿನದಲ್ಲಿ ದಸರಾ, ನಂತರ ದೀಪಾವಳಿ ಹಬ್ಬಗಳಿದ್ದು, ಅದರ ಸಂಭ್ರಮ ಮಾತ್ರ ಇವರಿಗೆ ಇಲ್ಲದಂತಾಗಿದೆ. ಬಸ್‌ ಕಾರ್ಯಾಚರಣೆಯಿಂದ ಸದ್ಯ ಆದಾಯ ಸಂಗ್ರಹವಾಗುತ್ತಿದ್ದರೂ ಅದು ಕೇವಲ ಡೀಸೆಲ್‌ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಭರಿಸಲು ಅಷ್ಟೇ ಸಾಕಾಗುತ್ತಿದೆ. ಸಾರಿಗೆ ನಿಗಮಗಳಿಗೆ ಸರ್ಕಾರ ಬಸ್‌ ಪಾಸ್‌ನ ಅನುದಾನ ಬಿಡುಗಡೆ ಮಾಡಿದರೆ ನೌಕರರ ವೇತನ ಸಮಸ್ಯೆ ಎದುರಾಗುವುದಿಲ್ಲ ಮತ್ತು ಸರ್ಕಾರಕ್ಕೆ ಹೆಚ್ಚುವರಿ ಅನುದಾನಕ್ಕೆ ಕೈಚಾಚುವುದೂ ಬೇಕಾಗುವುದಿಲ್ಲ ಎಂಬುದು ಸಾರಿಗೆ ಅಧಿಕಾರಿಯೊಬ್ಬರ ಅಭಿಪ್ರಾಯ. ಆದರೆ, ಈ ವಿಷಯದಲ್ಲಿ ಸರ್ಕಾರ ಮಾತ್ರ ಮೌನ ವಹಿಸಿದೆ.

ನೌಕರರ ವೇತನ ಕುರಿತಾಗಿನ ಪ್ರಸ್ತಾವನೆಯಂತೆ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಿ ಆರ್ಥಿಕ ಸಂಕಷ್ಟದಲ್ಲಿರುವ ನೌಕರರು ಮತ್ತು ಅವರ ಕುಟುಂಬಗಳಿಗೆ ನೆರವಾಗಬೇಕಿದೆ. ಇನ್ನೂ ನಿಗಮಕ್ಕೆ ಸೇರಬೇಕಾದ ಬಸ್‌ ಪಾಸ್‌ನ ಅನುದಾನವೂ ಸಮಯಕ್ಕೆ ಪಾವತಿಸಿ ಬರುವ ದಿನಗಳಲ್ಲಿ ವೇತನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ.

ಸಾರಿಗೆ ನೌಕರರಾದ ನಾವು ಹಗಲು- ರಾತ್ರಿ ಎನ್ನದೇ ಬಸ್‌ ಕಾರ್ಯಾಚರಣೆ ಮಾಡುತ್ತೇವೆ. ಆದರೆ, ಸಮಯಕ್ಕೆ ವೇತನ ಮಾತ್ರ ಸಿಗುತ್ತಿಲ್ಲ. ಈ ಹಿಂದೆ ಪ್ರತಿ ತಿಂಗಳು 10ರೊಳಗೆ ವೇತನ ಖಾತೆಗೆ ಜಮಾ ಆಗುತ್ತಿತ್ತು. ಕಳೆದೆರಡು ತಿಂಗಳಿಂದ ಕೇವಲ ಅರ್ಧದಷ್ಟು ಸಂಬಳ ಕೊಟ್ಟಿದ್ದು, ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಇದೀಗ ದಸರಾ, ದೀಪಾವಳಿ ಹಬ್ಬ ಆಚರಣೆಗೆ ಬಿಡಿಗಾಸು ಇಲ್ಲದಾಗಿದೆ. -ಹೆಸರು ಹೇಳಲಿಚ್ಛಿಸದ ಸಾರಿಗೆ ನೌಕರ

ರಸ್ತೆ ಸಾರಿಗೆ ನೌಕರ ವೇತನ ಬಾಕಿ ಇರುವುದು ನಿಜ. ಸದ್ಯ ಆಗಸ್ಟ್‌ ಮತ್ತು ಸೆಪ್ಟೆಂಬರ್‌ ತಿಂಗಳ ಅರ್ಧದಷ್ಟು ವೇತನ ಪಾವತಿ ಮಾಡಲಾಗಿದೆ. ಇನ್ನುಳಿದ ಸಂಬಳ ಕುರಿತಂತೆ ಸಾರಿಗೆ ಇಲಾಖೆ ಮತ್ತು ರಾಜ್ಯ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಶೀಘ್ರವೇ ನೌಕರರ ವೇತನ ಸಮಸ್ಯೆಗೆ ಪರಿಹಾರ ಸಿಗುವ ವಿಶ್ವಾಸ ಇದೆ.  -ನಾರಾಯಣ ಗೌಡಗೇರಿ, ವಿಭಾಗೀಯ ನಿಯಂತ್ರಣಾಧಿಕಾರಿ ಕೆಕೆಆರ್‌ಟಿಸಿ, ಬೀದರ

– ­ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewq

Bidar; ರಾಜಿ ಸಂಧಾನದಲ್ಲಿ ಒಂದಾದ ಮೂರು ದಂಪತಿಗಳು

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.