ಕನ್ನಡ ಅನ್ನ -ಉದ್ಯೋಗ ನೀಡುವ ಭಾಷೆಯಾಗಲಿ


Team Udayavani, Feb 29, 2020, 6:37 PM IST

29-February-37

ದಾವಣಗೆರೆ: ಇಂದಿನ ಆಧುನಿಕ ತಂತ್ರಜ್ಞಾನ, ಪೈಪೋಟಿ ಯುಗದಲ್ಲಿ ಕನ್ನಡವನ್ನು ಅನ್ನ ಮತ್ತು ಉದ್ಯೋಗದ ಭಾಷೆಯನ್ನಾಗಿಸುವ ಮೂಲಕ ಸದೃಢಗೊಳಿಸಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾ| ಸ.ಚಿ. ರಮೇಶ್‌ ತಿಳಿಸಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡದ ಬೆಳವಣಿಗೆ: ಸವಾಲುಗಳು ಮತ್ತು ಸಾಧ್ಯತೆಗಳು… ವಿಷಯ ಕುರಿತ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಇಂಜಿನಿಯರಿಂಗ್‌, ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗವಕಾಶ ಎಂಬ ಆದೇಶ ಸರ್ಕಾರ ಮಾಡಬೇಕು. ಕನ್ನಡ ಅನ್ನ, ಉದ್ಯೋಗದ ಭಾಷೆ ಆಗಬೇಕು ಎಂದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಕಲಿಕೆ ಅನಿವಾರ್ಯ. ಆದರೆ, ಕನ್ನಡ ನಮ್ಮ ಮೊದಲ ಆದ್ಯತೆ ಆಗಬೇಕು. ಆಗ ಕನ್ನಡ ರಾಜಭಾಷೆ, ಅಭಿಮಾನದ ಭಾಷೆಯಾಗಿ ಹೊರ ಹೊಮ್ಮುತ್ತದೆ. ಬೆಂಗಳೂರಿನಲ್ಲಿ ಓಡಾಡಿದೆರೆ ನಾವು ಬೇರೆ ದೇಶದಲ್ಲಿವೆ ಎಂದೆನಿಸುತ್ತದೆ. ಕನ್ನಡದಲ್ಲಿ ಮಾತನಾಡಿದರೆ ಅಪಮಾನ ಎನ್ನುವ ವಾತಾವರಣ ಇರುವುದು ಅತ್ಯಂತ ನೋವು, ವಿಷಾದದ ಸಂಗತಿ. ಆ ಮನೋಭಾವ, ವಾತಾವರಣ ಬದಲಾಗಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬರು ಕನ್ನಡ ನಾಡು, ನುಡಿ ಪ್ರೀತಿಸುವ ಕಡೆಗೆ ಅತೀ ಹೆಚ್ಚಿನ ಒಲವು ಹರಿಸಬೇಕು. ಕನ್ನಡದ ಒಳಗೆ ಪ್ರವೇಶ ಮಾಡಿದರೆ ಕನ್ನಡ ಏಕೆ ನಮ್ಮಿಂದ ದೂರವಾಗುತ್ತಿದೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳ ಬೇಕು. ಎಂದೆಂದಿಗೂ ಆತ್ಮಸಾಕ್ಷಿಗೆ ವಿರುದ್ಧವಾಗಿ ಬದುಕು ಕಟ್ಟಿಕೊಳ್ಳಬಾರದು. ನಮ್ಮ ಸಾಕ್ಷಿಪ್ರಜ್ಞೆಯಾಗಿರುವ ಕನ್ನಡದ ಮೂಲಕವೇ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ಭಾಷೆ ಎನ್ನುವುದು ಜೀವನ ಚೈತನ್ಯ. ಭಾಷೆಯ ಬಗೆಗಿನ ಶಕ್ತಿಯನ್ನ ಅರಿತು ಕನ್ನಡವನ್ನು ಉಳಿಸಬೇಕು. ಒಂದು ಜನಾಂಗವನ್ನು ಒಂದುಗೂಡಿಸುವ, ಕೂಡಿ ಬಾಳುವಂತಹ ಶಕ್ತಿ ಜಾತಿ, ಧರ್ಮಕ್ಕೆ ಇಲ್ಲವೇ ಇಲ್ಲ. ಒಂದು ಭಾಷೆಗೆ ಅಂತಹ ಶಕ್ತಿ ಇದೆ. ಕನ್ನಡ ಭಾಷೆ ನಮ್ಮ ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಹೊಂದಿದೆ. ಭಾಷೆಯ ಮೂಲಕ ಒಂದಾಗಿ ಸಮಾಜ ವನ್ನ ಸದೃಢಗೊಳಿಸುವ ಜೊತೆಗೆ ಜಾತಿಯ ವಿನಾಶ ಮಾಡಬೇಕು. ಕನ್ನಡವೆಂಬ ಒಂದೇ ಆಚಾರದ ಮೂಲಕ ವಿಶ್ವ ಮಾನವರಾಗುವತ್ತ ಮುನ್ನಡೆಯಬೇಕು ಎಂದು ಆಶಿಸಿದರು.

ಪ್ರಾಚೀನ ಕಾಲದಿಂದಲೂ ಕನ್ನಡವನ್ನ ಉಳಿಸಿ, ಬೆಳೆಸಲು ಕವಿಗಳು, ಸಂತರು, ಶರಣರು, ಕನ್ನಡ ಪರ ಸಂಘಟನೆಯವರು, ಸರ್ಕಾರ ಎಲ್ಲರೂ ಶ್ರಮಿಸಿದ್ದಾರೆ. ಅನೇಕರು ಜೀವನವನ್ನೇ ಮುಡಿಪಾಗಿಟ್ಟಿರುವುದನ್ನ ಅಲ್ಲಗೆಳೆಯುವಂತೆಯೇ ಇಲ್ಲ. ಜಾನಪದ, ಆಧುನಿಕ ಕವಿಗಳು, ಸಿನಿಮಾ, ಮಾಧ್ಯಮ ಕ್ಷೇತ್ರ ಕನ್ನಡವನ್ನ ಕಟ್ಟುವ ಕೆಲಸ ಮಾಡಿವೆ. ಕನ್ನಡದ ಬಗೆಗೆ ಅಪಾರ ಅಭಿಮಾನ, ಪ್ರೀತಿ, ಕಾಳಜಿಯಿಂದ ಕನ್ನಡವನ್ನ ಎಲ್ಲಾ ಕಡೆ ಬೆಳೆಸಬೇಕು. ಯುವ ಜನಾಂಗ, ವಿದ್ಯಾರ್ಥಿ ಸಮೂಹ ಆ ಕಾರ್ಯದಲ್ಲಿ ಮುಂಚೂಣಿಯಲ್ಲಿರಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳಾಡಿದ ಹಂಪಿ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗ ಮುಖ್ಯಸ್ಥ ಡಾ| ಡಿ. ಪಾಂಡು ರಂಗಬಾಬು, ಕನ್ನಡಿಗರಲ್ಲಿನ ನಿರಭಿಮಾನ, ರಾಜಕಾರಣದ ಇಚ್ಛಾಶಕ್ತಿ ಕೊರತೆ, ಇಂಗ್ಲಿಷ್‌ ಮೋಹ… ಕನ್ನಡ ಬೆಳಯದೇ ಇರುವುದಕ್ಕೆ ಕಾರಣ ಎಂದು ಹೇಳುತ್ತೇವೆ. ಆದರೆ, ಕನ್ನಡದ ಬೆಳವಣಿಗೆ ಆಗದೇ ಇರುವ ಮೂಲ ಸಮಸ್ಯೆಯತ್ತ ಗಮನ ಹರಿಸುವುದಿಲ್ಲ. ಕನ್ನಡದ ಬೆಳವಣಿಗೆಯ ನಿಟ್ಟಿನಲ್ಲಿ ಬೌದ್ಧಿಕ ವಲಯ, ಹೋರಾಟಗಾರರು, ರಾಜಕೀಯವನ್ನು ಒಂದೇ ವೇದಿಕೆಯಡಿ ತಂದು ಚರ್ಚೆ ಮಾಡಿದಾಗ ಸಮಗ್ರ ಬದಲಾವಣೆ ಸಾಧ್ಯ ಎಂದು ಪ್ರತಿಪಾದಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಪ್ರೊ| ತೂ.ಕ.ಶಂಕರಯ್ಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಎಚ್‌. ಗಿರಿಸ್ವಾಮಿ, ಡಾ| ಅಶೋಕ್‌ಕುಮಾರ್‌ ರಂಜೇರೆ ಇದ್ದರು. ಚೇತನ್‌ ಪ್ರಾರ್ಥಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.