ಕೆರೆ ಹೂಳೆತ್ತುವ ಕಾರ್ಯ ಪರಿಶೀಲಿಸಿದ ಡಿಸಿ
Team Udayavani, Jan 9, 2019, 10:58 AM IST
ಬೀದರ: ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಸೋಮವಾರ ತಾಲೂಕಿನ ಚಿಮಕೋಡ ಹಾಗೂ ಮಮದಾಪುರ ಕೆರೆಗಳಿಗೆ ಭೇಟಿ ನೀಡಿ, ಕೆರೆ ಹೂಳೆತ್ತುವ ಕಾರ್ಯ ಪರಿಶೀಲಿಸಿದರು.
ಕೆರೆಯ ಮಣ್ಣನ್ನು ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ. ರೈತರು ಯಾವುದೇ ಕಾರಣಕ್ಕೂ ಹಣ ಕೊಡಬಾರದು. ಕೆರೆಯ ಮಣ್ಣನ್ನು ಮಾರಾಟ ಮಾಡಲಾಗುತ್ತಿದೆ ಎನ್ನುವ ದೂರುಗಳು ಕೇಳಿ ಬಂದಿದ್ದು, ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಹಶೀಲ್ದಾರ್ ಹಾಗೂ ಇನ್ನಿತರ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
ಜೆಸಿಬಿಗಳು ಬೆಳಗ್ಗೆ 8 ಗಂಟೆಗೆ ತಪ್ಪದೇ ಕೆರೆಯಲ್ಲಿರಬೇಕು. ಮತ್ತು 8 ಗಂಟೆ ಕೆಲಸ ನಿರ್ವಹಿಸಬೇಕು. ಮಣ್ಣು ಕೇಳಿಕೊಂಡು ಬರುವ ರೈತರಿಗೆ ಉಚಿತವಾಗಿ ಕೊಡಬೇಕು. ಮನಸಿಗೆ ತೋಚಿದಂತೆ ಮಣ್ಣನ್ನು ತೆಗೆಯದೇ ಎಂಜಿನಿಯರ್ಗಳ ಮಾರ್ಗದರ್ಶನದಂತೆ ಕೆಲಸ ಮುಂದುವರೆಸಿ ಎಂದು ಸೂಚಿಸಿದರು. ಸಮಯಕ್ಕೆ ಬರದೇ ಇರುವ ಜೆಸಿಬಿಗಳನ್ನು ಕೆಲಸದಿಂದ ಕೈ ಬಿಡಿ ಎಂದು ನಿರ್ದೇಶನ ನೀಡಿದರು.
ನಾಡ ತಹಶೀಲ್ದಾರರು, ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿ ದಿನ ಕೆರೆಗಳಿಗೆ ಭೇಟಿ ನೀಡಿ ಕೆಲಸ ಪರಿಶೀಲಿಸಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕೆಲಸ ನಿರ್ವಹಿಸಿ ಎಂದು ಸೂಚಿಸಿದರು. ಬೀದರ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಲಭೀಮ ಕಾಂಬಳೆ, ತಹಶೀಲ್ದಾರ್ ಕೀರ್ತಿ ಚಾಲಕ್, ನಿರ್ಮಿತಿ ಕೇಂದ್ರದ ಅಧಿಕಾರಿ ಜಾಫರ್ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ