ಅಭಿವೃದ್ಧಿ ಪಥದತ್ತ ಡಿಸಿಸಿ ಬ್ಯಾಂಕ್‌ ದಾಪುಗಾಲು


Team Udayavani, Jun 1, 2021, 9:28 PM IST

vಬಚಷನಮಱಷಚವಬಚಷನಜಚವಹಬ

ಸುರಪುರ: 152 ಕೋಟಿಯಷ್ಟು ನಷ್ಟದಲ್ಲಿದ್ದ ಜಿಲ್ಲಾ ಸಹಕಾರ ಬ್ಯಾಂಕ್‌ ಪ್ರಸಕ್ತ ಸಾಲಿನಲ್ಲಿ 8 ಕೋಟಿಯಷ್ಟು ಲಾಭಗಳಿಸಿ ಅಭಿವೃದ್ಧಿಪಥದತ್ತ ದಾಪುಗಾಲಿಟ್ಟಿದೆ ಎಂದು ಕಲಬುರಗಿ-ಯಾದಗಿರಿ ಸಹಕಾರಿ ಬ್ಯಾಂಕ್‌ ಉಪಾಧ್ಯಕ್ಷ ಡಾ| ಸುರೇಶ ಸಜ್ಜನ್‌ ಹೇಳಿದರು. ನಗರದ ಉಸ್ತಾದ ಪೆಟ್ರೋಲ್‌ ಬಂಕ್‌ ಹತ್ತಿರದಲ್ಲಿ ನೂತನವಾಗಿ ನಿರ್ಮಿಸಿರುವ ಡಿಸಿಸಿ ಬ್ಯಾಂಕ್‌ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ರಾಜುಗೌಡ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಶಾಸಕರು ಸಚಿವರ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಸಿಎಂ 10 ಕೋಟಿ ಶೇರು ಬಂಡವಾಳ ನೀಡಿದ್ದಾರೆ. ಜತೆಗೆ ಕೇಂದ್ರ ಕಚೇರಿ ಕಟ್ಟಡಕ್ಕೂ 10 ಕೋಟಿ ಅನುದಾನ ನೀಡುವುದರೊಂದಿಗೆ ಸಹಕಾರಿ ಕ್ಷೇತ್ರದ ಬಲರ್ವಧನೆಗೆ ನೆರವಾಗಿದ್ದಾರೆ.

ಈ ವೇಳೆ ಸಂಘದ ಪರವಾಗಿ ಸಿಎಂ ಅವರನ್ನು ಅಭಿನಂದಿಸುವುದಾಗಿ ಹೇಳಿದರು. ಬರುವ ದಿನಗಳಲ್ಲಿ ಬೆಳೆ ಸಾಲ ಪ್ರಮಾಣ ಹೆಚ್ಚಿಸಿ ರೈತರ ಬಲವರ್ಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ರೈತರು ಹಣ ಪಡೆಯಲು ಮತ್ತು ತುಂಬಲು ಬ್ಯಾಂಕ್‌ ಗೆ ಬರುವ ತಾಪತ್ರಯ ತಪ್ಪಿಸುವ ಉದ್ದೇಶದಿಂದ ಕೆಲವೇ ದಿನಗಳಲ್ಲಿ ಮೊಬೈಲ್‌ ಬ್ಯಾಂಕ್‌ ಸೇವೆ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದರು. ದೇವಾಪುರ ಜಡಿಶಾಂತಲಿಂಗೇಶ್ವರ ಮಠದ ಶಿವುಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಸಂಘದ ಆಡಳಿತ ಮಂಡಳಿ ರೈತ ಸ್ನೇಹಿಯಾಗಿ ಕೆಲಸ ಮಾಡಬೇಕು.

ಕೋವಿಡ್‌ ಸಂಕಷ್ಟದಲ್ಲಿರುವ ರೈತರ ಕಣ್ಣೀರೊರೆಸುವ ಮೂಲಕ ರೈತರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು. ನಿರ್ದೇಶಕ ಶಿವಾನಂದ ಮಾಣಕರ್‌ ಮಾತನಾಡಿ, ಸಂಘದ ಅಭಿವೃದ್ಧಿಗೆ ನೂತನ ಆಡಳಿತ ಮಂಡಳಿ ಸಾಕಷ್ಟು ಶ್ರಮಿಸುತ್ತಿದೆ. ಜಿಲ್ಲೆಯಲ್ಲಿಯೇ ಇದೊಂದು ಮಾದರಿ ಸಂಘವನ್ನಾಗಿ ಮಾಡಲು ಅಧಿ ಕಾರಿ ಮತ್ತು ಸಿಬ್ಬಂದಿ ವರ್ಗ ಶ್ರಮಿಸಬೇಕು ಎಂದರು. ಸಂಘದ ತಾಲೂಕು ಅಧ್ಯಕ್ಷ ಬಾಪುಗೌಡ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು.

ಬ್ಯಾಂಕಿನ ಜನರಲ್‌ ಮ್ಯಾನೇಜರ್‌ ಚಿದಾನಂದ ನಿಂಬಾಳಕರ್‌, ಸಹಕಾರಿ ಅಭಿವೃದ್ಧಿ ಅಧಿ ಕಾರಿ ಮಲ್ಲಿಕಾರ್ಜುನ, ನಿರ್ದೇಶಕರಾದ ಶರಣಬಸಪ್ಪ ಅಷ್ಠಗಿ, ಬಸವರಾಜ ಪಾಟೀಲ, ನಿಂಗಣ್ಣ ಜೇವರ್ಗಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ರಾಮನಗೌಡ ಸುಬೇದಾರ, ಕೃಷ್ಣ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಜಾ ಮುಕುಂದ ನಾಯಕ, ಕಿಶೋರಚಂದ್‌ ಜೈನ್‌, ಬಸವೇಶ್ವರ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಜಯಲಲಿತಾ ಪಾಟೀಲ, ಮಂಜುನಾಥ ಗುಳಗಿ ಇದ್ದರು. ಬ್ಯಾಂಕ್‌ ವ್ಯವಸ್ಥಾಪಕ ಬಸವರಾಜ ಸ್ವಾಗತಿಸಿದರು. ಶಿವರುದ್ರ ಉಳ್ಳಿ ನಿರೂಪಿಸಿ, ವಂದಿಸಿದರು.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.