ಅಧಿಕಾರಿ ಬೆವರಿಳಿಸಿದ ಡಿಸಿಎಂ ಗೋವಿಂದ ಕಾರಜೋಳ

ನನ್ನ ಕ್ಷೇತ್ರಕ್ಕೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಬೇರೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ

Team Udayavani, Jan 25, 2021, 4:22 PM IST

ಅಧಿಕಾರಿ ಬೆವರಿಳಿಸಿದ ಡಿಸಿಎಂ ಗೋವಿಂದ ಕಾರಜೋಳ

ಹುಮನಾಬಾದ: ಪಟ್ಟಣದ ತಾಪಂ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೀದರ ಲೋಕೋಪಯೋಗಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಬೆವರಿಳಿಸಿದ ಪ್ರಸಂಗ ನಡೆಯಿತು.

ಸಭೆಯಲ್ಲಿ ಮಳೆ ಹಾನಿ ಹಾಗೂ ಪ್ರಕೃತಿ ವಿಕೋಪ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಮಾಹಿತಿ ಕೇಳಿದ ಸಚಿವರಿಗೆ ಸಮಯಕ್ಕೆ ಉತ್ತರಿಸದೆ ಪ್ರಗತಿ ಪುಸ್ತಕದಲ್ಲಿ ಅಂಕಿ ಸಂಖ್ಯೆ ಹುಡುಕುತ್ತಿರುವುದು ಕಂಡ ಉಪ ಮುಖ್ಯಮಂತ್ರಿಗಳು ಅಧಿ ಕಾರಿಗೆ ಛೀಮಾರಿ ಹಾಕಿದರು. ನಿಮ್ಮ ಜಿಲ್ಲೆಯಲ್ಲಿ ಮಳೆ ಹಾನಿ ಹಾಗೂ ಪ್ರಕೃತಿ ವಿಕೋಪದಿಂದ ಎಷ್ಟು ಹಾನಿಯಾಗಿದೆ ಎಂಬ ಮಾಹಿತಿ ಪುಸ್ತಕದಲ್ಲಿ ಹುಡುಕಬೇಕಾ ಎಂದು ಪ್ರಶ್ನಿಸಿದರು. ಹಾನಿ ಸಂಭವಿಸಿದ ಸಂದರ್ಭದಲ್ಲಿ ಅ ಧಿಕಾರಿ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ.

ಅಲ್ಲದೆ, ತಾಲೂಕುವಾರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯುವ ಕೆಲಸ ಮಾಡಿಲ್ಲ ಎಂಬುವುದು ಈ ಮೂಲಕ ಸಾಬೀತಾಗುತ್ತಿದೆ. ರಾಜ್ಯದಲ್ಲಿಯೇ ಬೀದರ ಜಿಲ್ಲೆ ಅಭಿವೃದ್ಧಿ ಕಾರ್ಯದಲ್ಲಿ ಹಿಂದುಳಿದುಕೊಂಡಿದೆ. ಇದಕ್ಕೆ ಅ ಧಿಕಾರಿಗಳ ಕಾರ್ಯವೈಖರಿಯೇ ಮುಖ್ಯ ಕಾರಣ ಎಂಬುವುದು ಗೊತ್ತಾಗುತ್ತಿದ್ದು, ಮುಂದಿನ ದಿನಗಳಲ್ಲಿ ತಕ್ಕ ಪ್ರತಿಫಲ ಪಡೆಯಬೇಕಾಗುತ್ತದೆ ಎಂದು ಅಧಿಕಾರಿಗೆ ಎಚ್ಚರಿಸಿದರು.

ಹುಮನಾಬಾದ ತಾಲೂಕಿನಲ್ಲಿ ಮಳೆ ಹಾನಿ ಹಾಗೂ ಪ್ರಕೃತಿ ವಿಕೋಪದ ಕುರಿತು ಯಾವುದೇ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಬೇಸರಗೊಂದು ಕಾರಜೋಳ, ಯಾಕೆ ಹುಮನಾಬಾದ ತಾಲೂಕಿನಲ್ಲಿ ಹಾನಿ ಸಂಭವಿಸಿಲ್ಲವೇ ಅಥವಾ ಈ ತಾಲೂಕಿನಲ್ಲಿ ಭಾರಿ ಮಳೆ ಸುರಿದಿಲ್ವಾ ಎಂದು ಪ್ರಶ್ನಿಸಿದರು. ಈ ಮಧ್ಯೆ ಮಾತನಾಡಿದ ಶಾಸಕ ಪಾಟೀಲ ಅಧಿಕಾರಿಗಳು ಸಭೆಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು. ತಾಲೂಕಿನ ವಿವಿಧೆಡೆ ಮಳೆ ಹಾನಿ ಸಂಭವಿಸಿದೆ. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವಿವರಿಸಿದರು. ಅಧಿಕಾರಿಗಳ ಕಾರ್ಯಕ್ಕೆ ಕಾರಜೋಳ ಬೇಸರ ವ್ಯಕ್ತಪಡಿಸಿದರು.

ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ನನ್ನ ಕ್ಷೇತ್ರಕ್ಕೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಬೇರೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುತ್ತಿದ್ದು, ನನ್ನ ಕ್ಷೇತ್ರದಲ್ಲಿ ಮಾತ್ರ ಅಭಿವೃದ್ಧಿ ಕಾರ್ಯಗಳಿಗೆ ಮಹತ್ವ ನೀಡಲಾಗುತ್ತಿಲ್ಲ. ನಾನು ಕಾಂಗ್ರೆಸ್‌ ಪಕ್ಷದ ಶಾಸಕ ಎಂದು ಪರಿಗಣಿಸಿ ತಾರತಮ್ಯ ಮಾಡಲಾಗುತ್ತಿದೆಯೇ? ನಾನು ರಾಜೀನಾಮೆ ನೀಡಬೇಕಾ? ಈ ಕ್ಷೇತ್ರದಲ್ಲಿ 40 ಸಾವಿರಕ್ಕೂ ಅ ಧಿಕ ಜನರು ಬಿಜೆಪಿಗೆ ಮತ ಹಾಕಿದ್ದಾರೆ ಎಂಬುವುದು ಕೂಡ ತಿಳಿದುಕೊಳ್ಳಿ ಎಂದು ನೇರವಾಗಿ ಉಪ ಮುಖ್ಯಮಂತ್ರಿಗಳಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕಾರಜೋಳ ಯಾರಿಗೂ ತಾರತಮ್ಯ ನೀತಿ ಅನುಸರಿಸುತ್ತಿಲ್ಲ. ಯಾವ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬುವುದು ಮನವಿ ಸಲ್ಲಿಸಿ ಕೂಡಲೇ ಸ್ಪಂದಿಸುವ ಕಾರ್ಯ ಮಾಡುತ್ತೇನೆ ಎಂದರು.

ಗುಣಮಟ್ಟಕ್ಕೆ ಮಹತ್ವ ನೀಡಿ: ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳಿಗೆ ಗುತ್ತಿಗೆದಾರರು ಕಡಿಮೆ ಮೊತ್ತದಲ್ಲಿ ಟೆಂಡರ್‌ ಪಡೆದುಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಗುಣಮಟ್ಟ ಕಾಮಗಾರಿ ಸೂಕ್ತವಾಗಿ ಪರಿಶೀಲನೆ ನಡೆಸದ ಹಿನ್ನೆಲೆಯಲ್ಲಿ ಗುತ್ತೆದಾರರು ಕಳಪೆ ಕಾಮಗಾರಿ ನಡೆಸುತ್ತಿದ್ದಾರೆ. ಕಡಿಮೆ ಹಣದಲ್ಲಿ ಗುಣಮಟ್ಟದ ಕಾಮಗಾರಿ ಹೇಗೆ ಮಾಡಲು ಸಾಧ್ಯ? ಈವರೆಗೆ ಒಬ್ಬ ಗುತ್ತೆದಾರರಿಗೂ ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಅಧಿಕಾರಿಗಳು ಮಾಡಿಲ್ಲ ಎಂದು ಶಾಸಕ ರಾಜಶೇಖರ ಪಾಟೀಲ ಸಚಿವರಿಗೆ ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಕಾರಜೋಳ, ನಿಯಮ ಉಲ್ಲಂಘಿಸುವ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಂಸದ ಭಗವಂತ ಖೂಬಾ, ವಿಧಾನ ಪರಿಷತ್‌ ಸದಸ್ಯರಾದ ಡಾ| ಚಂದ್ರಶೇಖರ ಪಾಟೀಲ, ರಘುನಾಥರಾವ ಮಲ್ಕಾಪುರೆ, ಅರವಿಂದ ಅರಳಿ, ಜಿಲ್ಲಾಧಿಕಾರಿ ರಾಮಚಂದ್ರನ್‌, ಜಿಪಂ ಸಿಇಒ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

‌ಕಡಿಮೆ ಹಣದಲ್ಲಿ ಗುತ್ತಿಗೆ ಪಡೆದುಕೊಂಡ ಕಾಮಗಾರಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಕಡಿಮೆ ಅನುದಾನದಲ್ಲಿ ಸರ್ಕಾರದ ನಿಯಮಗಳ ಪ್ರಕಾರ ಕಾಮಗಾರಿ ನಡೆಯುತ್ತಿದೆಯೇ ಎಂದು ಖಾತರಿ ಪಡಿಸಿಕೊಳ್ಳಬೇಕು. ನಿಯಮ ಉಲ್ಲಂಘಿಸುವ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕಪ್ಪುಪಟ್ಟಿಗೆ ಸೇರಿಸಬೇಕು.

ಗೋವಿಂದ ಕಾರಜೋಳ,
ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.