ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಲಂಬಾಣಿ ನೃತ್ಯ ಸೇರಿ ವಿವಿಧ ಕಲಾ ಪ್ರಕಾರಗಳು ಮೆರವಣಿಗೆಯ ಕಳೆ ಹೆಚ್ಚಿಸಲಿವೆ

Team Udayavani, Feb 18, 2021, 5:51 PM IST

ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಭಾಲ್ಕಿ: ಪಟ್ಟಣದಲ್ಲಿ ಫೆ.19 ರಂದು ಸಾರ್ವಜನಿಕ ಜಯಂತಿ ಉತ್ಸವ ಸಮಿತಿ ವತಿಯಿಂದ ಶಿವಾಜಿ ಮಹಾರಾಜರ 399ನೇ ಜಯಂತಿ ಮಹೋತ್ಸವ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮರಾಠಾ ಸಮಾಜದ ಹಿರಿಯ ಮುಖಂಡ, ಜಯಂತಿ ಉತ್ಸವ ಸಮಿತಿ ಪ್ರಮುಖರು ಆಗಿರುವ ಜನಾರ್ದನ ಬಿರಾದಾರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಯಂತಿ ಆಚರಣೆಗೆ ಸರಕಾರದ ಅನುಮತಿ ಪಡೆಯಲಾಗಿದೆ. ಶಿವಾಜಿ ಮಹಾರಾಜರು ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅವರ ಚಿಂತನೆ, ಆದರ್ಶಗಳು ಎಲ್ಲರೂ ಪಾಲನೆ ಮಾಡುತ್ತಾರೆ. ಹಾಗಾಗಿ ಎಲ್ಲ ಸಮಾಜದ ಮುಖಂಡರನ್ನು ವಿಶ್ವಾಸಕ್ಕೆ ಪಡೆದು ಜಯಂತಿ ಮಹೋತ್ಸವ ಐತಿಹಾಸಿಕವಾಗಿ ಆಚರಣೆ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಂದು ಬೆಳಗ್ಗೆ 11ಕ್ಕೆ ಭಾಲ್ಕೇಶ್ವರ ಮಂದಿರ ಆವರಣದಿಂದ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆ ಹೊರಟು, ಪ್ರಮುಖ ರಸ್ತೆ, ಬೀದಿ ಮೂಲಕ ಸಂಚರಿಸಿ ಶಿವಾಜಿ ವೃತ್ತದಲ್ಲಿ ಸಮಾವೇಶಗೊಳ್ಳಲಿದೆ. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಲಂಬಾಣಿ ನೃತ್ಯ ಸೇರಿ ವಿವಿಧ ಕಲಾ ಪ್ರಕಾರಗಳು ಮೆರವಣಿಗೆಯ ಕಳೆ ಹೆಚ್ಚಿಸಲಿವೆ ಎಂದರು.

ಬಳಿಕ ಸಂಜೆ 7ಕ್ಕೆ ಶಿವಾಜಿ ವೃತ್ತದ ರಸ್ತೆಯಲ್ಲಿ ಜಯಂತಿ ನಿಮಿತ್ತ ವೇದಿಕೆ ಸಮಾರಂಭ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಜಯಂತಿ ಸಮಾರಂಭ ಉದ್ಘಾಟಿಸಲಿದ್ದಾರೆ. ಸಂಸದ ಭಗವಂತ ಖೂಬಾ, ಶಾಸಕ ಈಶ್ವರ ಖಂಡ್ರೆ, ಎಂಎಲ್ಸಿ ವಿಜಯಸಿಂಗ್‌, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಮಾರುತಿರಾವ ಮೂಳೆ, ಬಿಜೆಪಿ ಮುಖಂಡ ಡಿ.ಕೆ. ಸಿದ್ರಾಮ, ವಿಧಾನ ಪರಿಷತ್‌ನ ಮಾಜಿ ಉಪಸಭಾಪತಿ ಕೇಶವರಾವ ನಿಟ್ಟೂರಕರ್‌, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಎಪಿಎಂಸಿ ಅಧ್ಯಕ್ಷ ಬನಸಿಲಾಲ್‌ ಬೋರಾಳೆ, ಹೀರಾಚಂದ ವಾಘಮಾರೆ, ಅಶೋಕರಾವ ಸೋನಜಿ, ದಯಾನಂದ ಸೂರ್ಯವಂಶಿ, ಬಾಬುರಾವ ಕಾರಬಾರಿ, ತಾಪಂ ಅಧ್ಯಕ್ಷೆ ಮೀರಾಬಾಯಿ ಕಣಜೆ, ಪ್ರವೀಣ ಸಾವರೆ, ಪಂಚಶೀಲ ಕಣಜೆ, ಸಂತೋಷ ತಗರಖೇಡ್‌, ಕಿಶನರಾವ ಪಾಟೀಲ್‌ ಇಂಚೂರಕರ್‌, ಯಶವಂತ ಭೋಸ್ಲೆ, ರಾಮರಾವ ವರವಟ್ಟಿಕರ್‌, ಡಿಗಂಬರರಾವ ಮಾನಕಾರಿ, ಅನೀಲಕುಮಾರ ಶಿಂಧೆ, ನಂದಕುಮಾರ ಸಾಳೊಂ ಕೆ, ಯಾದವರಾವ ಕಣಜೆ, ನಾಮದೇವರಾವ ಪವಾರ್‌, ಡಾ.ರಾಜೇಂದ್ರ ಜಾಧವ, ರಾಹುಸಾಹೇಬ ತಗರಖೇಡೆ, ಶೇಷರಾವ ಕಣಜಿಕರ್‌, ವಿಜಯಕುಮಾರ ಪಾಟೀಲ್‌, ಬಾಬುರಾವ ಹುಣಸನಾಳೆ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಜಯಂತಿ ಮಹೋತ್ಸವ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಜಯಂತಿ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಕಿಶನರಾವ ಪಾಟೀಲ್‌ ಇಂಚೂರಕರ್‌, ಸಮಿತಿ ಉಪಾಧ್ಯಕ್ಷ ದಯಾನಂದ ಸೂರ್ಯವಂಶಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಗೋವಿಂದರಾವ ಬಿರಾದಾರ್‌, ಪಾಂಡುರಂಗ ಕನಸೆ, ಕೇಶವ ಸೂರ್ಯವಂಶಿ, ಶರದ ದುರ್ಗಾಳೆ, ಆಶೀಶ ತಗರಖೇಡೆ, ಯಶವಂತ ಭೋಸ್ಲೆ, ದತ್ತು ಜಾಧವ, ಸಂತೋಷ ತಗರಖೇಡೆ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.