ದೆಹಲಿ ರೈತರ ಹೋರಾಟ ಬೆಂಬಲಿಸಿ ನಿರಶನ
Team Udayavani, Feb 7, 2021, 3:06 PM IST
ಬೀದರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರೋ ಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲಿಸಿ ಶನಿವಾರ ಅಖೀಲ ಭಾರತ ಕಿಸಾನ್ ಸಭಾ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೆಹಲಿ ಹೋರಾಟಕ್ಕೆ ಬೆಂಬಲಿಸಿ ರೈತ ಸಂಘಟನೆಗಳ ಒಕ್ಕೂಟದಿಂದ ರಾಜ್ಯ-ರಾಷ್ಟ್ರೀಯ ಹೆದ್ದಾರಿ ಬಂದ್ ರಾಷ್ಟ್ರವ್ಯಾಪ್ತಿ ಚಳವಳಿಗೆ ಕರೆ ನೀಡಲಾಗಿತ್ತು. ಆದರೆ, ಬೀದರನಲ್ಲಿ ಕೇವಲ ಪ್ರತಿಭಟನಾ ರ್ಯಾಲಿಗೆ ಮಾತ್ರ ಸೀಮಿತವಾಗಿತ್ತು. ಕಿಸಾನ್ ಸಭಾ ರಾಜ್ಯ ಉಪಾಧ್ಯಕ್ಷ ಬಾಬುರಾವ ಹೊನ್ನಾ ನೇತೃತ್ವದಲ್ಲಿ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತದ ಅಧಿ ಕಾರಿಗೆ ಸಲ್ಲಿಸಲಾಯಿತು.
ಇದನ್ನೂ ಓದಿ:ಮೀರಾ ವಿರುದ್ಧ ದಲಿತ ಸಂಘಟನೆಗಳ ಕಿಡಿ
ಪ್ರತಿಭಟನೆಯಲ್ಲಿ ಪ್ರಮುಖರಾದ ಎಂಡಿ ಖಮರ ಪಟೇಲ್, ನಜೀರ್ ಅಹ್ಮದ್, ಬಸವರಾಜ ಪಾಟೀಲ, ಗುರುಪಾದಯ್ಯ ಸವಾಮಿ, ಮಚ್ಛೇಂದ್ರ, ಪ್ರಭು ತಗಣಿಕರ, ಖದೀರ ಸಾಬ್, ಶಫಾಯತ್ ಅಲಿ, ಅಹ್ಮದ್ ಜಂಬಗಿ, ಸುನೀಲ ವಮಾ, ಪಪ್ಪುರಾಜ ಮೇತ್ರೆ, ಇಮ್ಯಾನವೆಲ್ ಗಾದಗಿ, ರಾಮಣ್ಣ ಅಲಮಸಪೂರ, ಚಂದ್ರಬಾಹನ, ಬಸವರಾಜ ಹೊನ್ನಿಕೇರಿ, ಶಿವರಾಜ ಹೊನ್ನಿಕೇರಿ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ