ತಡೆರಹಿತ ರೈಲು ನಿಲುಗಡೆಗೆ ಆಗ್ರಹ
Team Udayavani, Jun 2, 2018, 11:53 AM IST
ಕಮಲನಗರ: ನೂತನ ಕಮಲನಗರ ತಾಲೂಕು ಕೇಂದ್ರಲ್ಲಿ ಎಲ್ಲ ತಡೆರಹಿತ ರೈಲು ನಿಲುಗಡೆ ಮಾಡುವಂತೆ ಆಗ್ರಹಿಸಿ
ಸಿಕಂದ್ರಾಬಾದ ಎಡಿಆರ್ಎಂಗೆ ಘೋಷಿತ 43 ಹೊಸ ತಾಲೂಕುಗಳ ಹೋರಾಟ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಉದಗೀರ ಪಟ್ಟಣದ ರೈಲು ನಿಲ್ದಾಣದಲ್ಲಿ ಶುಕ್ರವಾರ ಮನವಿ ಸಲ್ಲಿಸಿದ ಸಮಿತಿ ರಾಜ್ಯಾಧ್ಯಕ್ಷ ಬಸವರಾಜ ಪಾಟೀಲ
ಹಾಗೂ ನಾಗರಿಕರು, ಕಮಲನಗರ ರೈಲು ನಿಲ್ದಾಣದಲ್ಲಿ ಎಲ್ಲ ತಡೆರಹಿತ ರೈಲು ನಿಲ್ಲಿಸಿದರೆ ಔರಾದ, ಲಖನಗಾಂವ
ಹಾಗೂ ಮಹಾರಾಷ್ಟ್ರದ ದೇವಣಿ ಗ್ರಾಮದ ವ್ಯಾಪಾರಿಗಳಿಗೆ, ನಾಗರಿಕರಿಗೆ ತುಂಬಾ ಅನುಕೂಲವಾಗುತ್ತದೆ.
ಕಮಲನಗರ ರೈಲು ನಿಲ್ದಾಣದಲ್ಲಿ ಎಲ್ಲ ತಡೆರಹಿತ ರೈಲುಗಳು ನಿಲ್ಲದ ಕಾರಣ ಪ್ರಯಾಣಿಕರು ಮಹಾರಾಷ್ಟ್ರದ ಉದಗೀರ, ಭಾಲ್ಕಿ ಪಟ್ಟಣಕ್ಕೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೈದ್ರಾಬಾದನಿಂದ ಬೀದರವರೆಗೆ ಬರುವ ಇಂಟರ್ಸಿಟಿ ರೈಲನ್ನು ಲಾತೂರವರೆಗೆ ವಿಸ್ತರಿಸಿದರೆ ಈ ಭಾಗದ ಜನರಿಗೆ ಬೀದರ ಹಾಗೂ ಲಾತೂರ ಪಟ್ಟಣಕ್ಕೆ ಹೋಗಲು ಅನುಕೂಲವಾಗುತ್ತದೆ ಎಂದು ಒತ್ತಾಯಿಸಿದ್ದಾರೆ.
ಮನವಿ ಸ್ವೀಕರಿಸಿದ ಎಡಿಆರ್ ಎಂ ಮಾತನಾಡಿ, ಶೀಘ್ರದಲ್ಲಿ ಯಶವಂತಪುರ-ಲಾತೂರ, ಶಿರಡಿ ಎಕ್ಸಪ್ರೇಸ್ ರೈಲುಗಳ ನಿಲುಗಡೆ ಮಾಡುವುದಾಗಿ ಭರವಸೆ ನೀಡಿದರು. ತಾಪಂ ಮಾಜಿ ಅಧ್ಯಕ್ಷ ಶ್ರೀರಂಗ ಪರಿಹಾರ, ಶರಣು ಕುಶನೂರೆ, ಬಾಲಾಜಿ ತೇಲಂಗೆ, ಸಂತೋಷ ಸೋಲ್ಲಾಪುರೆ ಹಾಗೂ ಅನೇಕ ನಾಗರಿಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ