ರೈತರಿಗೆ ವರವಾದ “ಡ್ರ್ಯಾಗನ್‌ ಫ್ರೂಟ್‌’


Team Udayavani, Mar 28, 2022, 5:34 PM IST

13dragon

ಮುದಗಲ್ಲ: ಡ್ರ್ಯಾಗನ್‌ ಫ್ರೂಟ್‌ ಅನ್ನು ಇದೀಗ ಬಿಸಿಲು ನಾಡಲ್ಲೂ ಬೆಳೆಯಲಾಗುತ್ತಿದೆ. ಈ ಹಣ್ಣಿನ ಬೆಳೆ ಇಲ್ಲಿನ ರೈತರಿಗೆ ವರವಾಗಿ ಪರಿಣಮಿಸಿದೆ.

ನೀರು ಕಡಿಮೆ ಪ್ರಮಾಣವಿದ್ದರೂ ಬೆಳೆಯುತ್ತದೆ ಎಂಬ ಕಾರಣಕ್ಕೆ ಇಲ್ಲಿನ ಕನ್ನಾಳ, ದೇಸಾಯಿ ಭೋಗಾಪೂರ, ರಾಮಪ್ಪನ ತಾಂಡಾ, ಹಡಗಲಿ, ಮೆದಕಿನಾಳ ಹಾಗೂ ಮಟ್ಟೂರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಡ್ರಾÂಗನ್‌ ಫ್ರೂಟ್‌ ಬೆಳೆದು ಯಶಸ್ವಿಯಾಗಿದ್ದಾರೆ. ಅದಲ್ಲದೇ ಈ ಹಣ್ಣಿನ ಬೆಳೆಗೆ ಕಡಿಮೆ ನೀರು ಸಾಕು.

ಜಾಗತಿಕವಾಗಿ ಬೇಡಿಕೆ ಹೆಚ್ಚಿರುವುದರಿಂದ ಮಾರುಕಟ್ಟೆಯೂ ಸುಲಭ. ಸಾಂಪ್ರದಾಯಿಕ ಬೆಳೆ ಬೆಳೆದು ಕೈ ಸುಟ್ಟುಕೊಂಡಿರುವ ರೈತರು ಇದ್ದ ಅಲ್ಪ ಸ್ವಲ್ಪ ಬೋರಿನ ನೀರು ಬಳಸಿ ಡ್ರ್ಯಾಗನ್‌ ಫ್ರೂಟ್‌ ಬೆಳೆಯಲು ಮುಂದಾಗಿದ್ದಾರೆ.

ಕನ್ನಾಳ ಗ್ರಾಮದ ಮೃತ್ಯುಂಜಯ ಎಂಬ ರೈತ ತನ್ನ ನಾಲ್ಕೈದು ಎಕರೆ ಭೂಮಿ ಯಲ್ಲಿ 2 ಎಕರೆಯಲ್ಲಿ ಎರಡೂವರೆ ಸಾವಿರ ಗಿಡಗಳನ್ನು ನಾಟಿ ಮಾಡಿದ್ದಾರೆ. ಗಿಡಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿದ್ದಾರೆ. 8-10ದಿನಗಳಿಗೊಮ್ಮೆ ನೀರುಣಿಸಿದರೆ ಸಾಕು. ತಿಪ್ಪೆ ಗೊಬ್ಬರ ಹಾಗೂ ಜೀವಾಮೃತ ನೀಡುತ್ತಿದ್ದಾರೆ. ರಾಸಾಯನಿಕ ಗೊಬ್ಬರ ಬಳಕೆಯೂ ಕಡಿಮೆ. ಗಿಡಗಳು ಹಚ್ಚ ಹಸಿರಾಗಿ ಬೆಳೆಯುತ್ತಿವೆ. ಆರಂಭದಲ್ಲಿಯೇ ಉತ್ತಮ ಫಸಲು ಬಂದಿದೆ. ಸುಮಾರು 5 ಟನ್‌ ಹಣ್ಣು ದೊರೆಯುತ್ತದೆ.

ಈಗ ಕೆ.ಜಿ ಹಣ್ಣಿಗೆ 120 ರಿಂದ 250 ಬೆಲೆ ಇದೆ ಡ್ರ್ಯಾಗನ್‌ ಫ್ರೂಟ್‌ ಗೆ ರಾಯಚೂರು, ಲಿಂಗಸಗೂರು, ಸಿಂಧನೂರು, ಮುದಗಲ್ಲ ಪಟ್ಟಣದಲ್ಲೂ ಮಾರುಕಟ್ಟೆಯಿದ್ದು, ಸ್ಥಳೀಯ ಮಾರುಕಟ್ಟೆ ಅಷ್ಟೇ ಅಲ್ಲ ಬೆಂಗಳೂರು, ಮುಂಬೈ, ಪುಣೆ, ಗೋವಾ, ಮಂಗಳೂರು, ಚೆನ್ನೈ ನಗರಗಳಿಗೆ ಹಣ್ಣುಗಳನ್ನು ರವಾನಿಸಲಾಗುತ್ತಿದೆ.

ಡ್ರ್ಯಾಗನ್‌ ಫ್ರೂಟ್‌ ಕಳ್ಳಿ ಜಾತಿಗೆ ಸೇರಿದ ಸಸ್ಯ ಹೆಚ್ಚು ನೀರು ಬೇಡವಾದ, ರೋಗಬಾಧೆ ಕಾಡದ ಬೆಳೆ ಆಗಿದೆ. ಹಣ್ಣುಗಳು ಹುಳಿ ಮತ್ತು ಸಿಹಿ ಮಿಶ್ರಿತವಾಗಿರುತ್ತದೆ. ಈ ಹಣ್ಣು ಬಳಸುವುದರಿಂದ ಅಧಿಕ ಪೋಷಕಾಂಶಗಳು ಸಿಗುತ್ತವೆ. ಇದನ್ನು ಹೆಚ್ಚಾಗಿ ಔಷಧ ತಯಾರಿಕೆಗೆ ಬಳಸಲಾಗುತ್ತದೆ ಎಂದು ರೈತ ಮೃತ್ಯುಂಜಯ್ಯ ಪತ್ರಿಕೆಗೆ ತಿಳಿಸಿದರು.

ಹೊಲದಲ್ಲಿ ಕಲ್ಲು ಅಥವಾ ಸಿಮೆಂಟ್‌ ಕಂಬಗಳನ್ನು ಹಾಕಿ ಕಳ್ಳಿ ಜಾತಿಯ ಈ ಸಸ್ಯ ಅಂಟಿಸುತ್ತಾರೆ. ಕಂಬದ ಜತೆಗೆ ಬೆಳೆದು ನಿಲ್ಲುವ ಸಸ್ಯ ಕೆಲ ದಿನಗಳ ನಂತರ ದ್ವಿಚಕ್ರವಾಹನಗಳ ಟಾಯರ್‌ ಗಳನ್ನು ಹಾಕಿ ಇಳುವರಿ ಹೆಚ್ಚು ಬರುವಂತೆ ಮಾಡುತ್ತಾರೆ ಎನ್ನುತ್ತಾರೆ ಡ್ರ್ಯಾಗನ್‌ ಫ್ರೂಟ್‌ ಬೆಳೆಗಾರರು.

ಈ ಬೆಳೆ ಬೆಳೆಯುವ ರೈತರಿಗೆ ಇಲಾಖೆ ಅಥವಾ ನರೇಗಾ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ. ಕಡಿಮೆ ಕೂಲಿಕಾರರು ಮತ್ತು ಕಡಿಮೆ ನೀರು ಬಳಸಿ ಬೆಳೆಯುವ ಬೆಳೆಯಾಗಿದ್ದರಿಂದ ಸಣ್ಣ ರೈತರು ಈ ಬೆಳೆಯನ್ನು ಬೆಳೆಯಬಹುದಾಗಿದೆ. -ಜಗದೀಶ, ತೋಟಗಾರಿಕೆ ಇಲಾಖೆ ಅಧಿಕಾರಿ ಲಿಂಗಸುಗೂರು

-ದೇವಪ್ಪ ರಾಠೊಡ

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.