ಗುಟ್ಕಾ-ಪಾನ್ ಪರಾಗ್ ಕಂಪನಿ ಬಂದ್ಗೆ ಆಗ್ರಹ
Team Udayavani, Dec 9, 2020, 2:11 PM IST
ಭಾಲ್ಕಿ: ಕೋವಿಡ್-19 ಹರಡುವಿಕೆ ತಡೆಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುಟ್ಕಾ, ಪಾನ್ ಪರಾಗ್ ಮಾರಾಟ ನಿಷೇಧಿ ಸಿದ್ದರೂ, ಬೀದರನಲ್ಲಿ ಎರಡು ಗುಟ್ಕಾ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳನ್ನು ಬಂದ್ಮಾಡಬೇಕು ಎಂದು ಅಖೀಲ ಭಾರತೀಯ ಭ್ರಷ್ಟಾಚಾರ ವಿರೋಧಿ ಸಮಿತಿಯ ರಾಜ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಗೋಪಾಲ ಪಾಲಂ ಆಗ್ರಹಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ತೆಲಂಗಾಣ, ಮಹಾರಾಷ್ಟ್ರಗಳಲ್ಲಿ ಗುಟ್ಕಾ ನಿಷೇಧವಿದೆ.ಜಿಲ್ಲೆಯ ಗುಟ್ಕಾ ಕಂಪನಿಯವರು ಹೊರರಾಜ್ಯಗಳಲ್ಲಿ ದುಪ್ಪಟ್ಟು ದರಕ್ಕೆ ಮಾರಾಟಮಾಡುತ್ತಿದ್ದಾರೆ. ಇದನ್ನು ತಡೆಯುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದೂರಿದರು.
ಪ್ರತಿ ತಿಂಗಳು ಒಂದು ಕೋಟಿ ರೂ. ಮೌಲ್ಯದ ರೇಷನ್ ಅಕ್ಕಿ ತೆಲಂಗಾಣ,ಮಹಾರಾಷ್ಟ್ರ ರಾಜ್ಯಕ್ಕೆ ಕಳ್ಳ ಸಾಗಾಣಿಕೆಆಗುತ್ತಿದೆ. ರೇಷನ್ ಅಕ್ಕಿಗೆ ಪಾಲಿಸ್ ಮಾಡಿದ ನಂತರ ಬೀದರಜಿಲ್ಲೆಯಲ್ಲಿ ಕೆಜಿಗೆ 40 ರೂ.ಗಳಂತೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಮಳೆಗಾಲದಲ್ಲಾದ ಅತಿವೃಷ್ಟಿಯಿಂದ ಬೆಳೆ, ಮನೆ ಹಾನಿಗೊಳಗಾದ ರೈತರಿಗೆ, ಫಲಾನುಭವಿಗಳಿಗೆ ಇದುವರೆಗೆ ಪರಿಹಾರ ಧನ ನೀಡಿಲ್ಲ. ತಕ್ಷಣವೇ ಸರ್ಕಾರ ಪರಿಹಾರ ಧನ ವಿತರಿಸಬೇಕು ಎಂದುಒತ್ತಾಯಿಸಿದರು. ಸಾರ್ವಜನಿಕರು ಭ್ರಷ್ಟಾಚಾರ, ಕುಂದು-ಕೊರತೆಗಳಿದ್ದಲ್ಲಿ,ನೇರವಾಗಿ ನನ್ನ ಮೊ. 9986183902ಗೆಸಂಪರ್ಕಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಶಿವಾಜಿರಾವ ಪಾಟೀಲ, ಓಂಪ್ರಕಾಶ ರೊಟ್ಟೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ