ಹದಗೆಟ್ಟ ರಸ್ತೆಗೆ ಪ್ರಯಾಣಿಕರು ಹೈರಾಣ
Team Udayavani, Dec 29, 2020, 5:09 PM IST
ಕಮಲನಗರ: ತಾಲೂಕು ಕೇಂದ್ರ ಕಮಲ ನಗರದಿಂದ ಮದನೂರ ಗ್ರಾಮಕ್ಕೆ ಹೋಗುವಮುಖ್ಯರಸ್ತೆ ತೀರಾ ಹದಗೆಟ್ಟಿದ್ದು, ನಿತ್ಯ ಸಂಚರಿಸುವ ಪ್ರಯಾಣಿಕರು, ವಾಹನ ಸವಾರರು ರೋಸಿ ಹೋಗಿದ್ದಾರೆ.
ರಸ್ತೆಯ ಮೇಲೆ ಮೋಣಕಾಲುದ್ದ ತಗ್ಗು ಗುಂಡಿಗಳು ನಿರ್ಮಾಣಗೊಂಡಿವೆ. ಡಾಂಬರುಕಿತ್ತು ಹೋಗಿ ವರ್ಷಗಳೇ ಕಳೆದಿವೆ. ಆದರಈ ರಸ್ತೆ ಸುಧಾರಣೆಯತ್ತ ಮಾತ್ರ ಏಕೆ ಗಮನ ಹರಿಸುತ್ತಿಲ್ಲ ಎಂಬುವುದು ವಾಹನ ಸವಾರರ ಪ್ರಶ್ನೆಯಾಗಿದೆ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಮೇಲೆ ಪ್ರಯಾಣಿಕರುಹಿಡಿಶಾಪ ಹಾಕುತ್ತಲೇ ಸಂಚರಿಸಬೇಕಾದಅನಿವಾರ್ಯತೆ ಉಂಟಾಗಿದೆ. ಹದಗೆಟ್ಟ ಇಂಥ ರಸ್ತೆಯಿಂದ ಆಸ್ಪತ್ರೆಗೆ ಹೋಗುವ ರೋಗಿಗಳ ಕಷ್ಟಒಂದೆಡೆಯಾದರೆ ಇನ್ನೊಂದೆಡೆ ಗರ್ಭಿಣಿಯರು, ಪ್ರಯಾಣಿಕರ ಪಾಡು ಹೇಳತಿರದು.
ರಸ್ತೆಯ ಮೇಲೆ ದೊಡ್ಡ ಪ್ರಮಾಣದ ತಗ್ಗು ಗುಂಡಿಗಳು ಬಿದ್ದ ಕಾರಣ ವಾಹನ ಸವಾರರು ನರಕಯಾತನೆ ಪಡುವಂಥಾಸ್ಥಿತಿ ನಿರ್ಮಾಣವಾಗಿದೆ ಎಂದು ಮದನೂರಗ್ರಾಮದ ಸಮಾಜ ಸೇವಕರಾದ ಜಯಪ್ರಕಾಶಬಿರಾದಾರ, ಆನಂದ, ಸಂದೀಪ ವ್ಯವಸ್ಥೆಗೆಹಿಡಿಶಾಪ ಹಾಕಿದ್ದಾರೆ. ಕೂಡಲೇ ಸಂಬಂಧಿತ ಅಧಿಕಾರಿಗಳು ಎಚ್ಚೆತ್ತು ರಸ್ತೆ ದುರಸ್ತಿಗೆ ಮುಂದಾಗಬೇಕು ಎನ್ನುವುದು ಸಾರ್ವಜನಿಕರ ಒತ್ತಾಸೆಯಾಗಿದೆ.
ಕಮಲನಗರದಿಂದ ಮದನೂರ ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯರಸ್ತೆತೀರಾ ಹದಗೇಟ್ಟಿದ್ದು, ರಸ್ತೆಯೂದ್ದಕ್ಕೂತಗ್ಗು ಗುಂಡಿಗಳು ಬಿದ್ದಿರುವ ಕಾರಣಚಾಲಕರು ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುವ ಸ್ಥಿತಿ ಇದೆ. ಸಂಬಂಧಿತ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ದುರುಸ್ತಿ ಕಾಮಗಾರಿ ಮಾಡಿಸಲು ಮುಂದಾಗಬೇಕು. – ಗುಂಡಪ್ಪಾ ಬೇಲ್ಲೆ, ಸಾಮಾಜಿಕ ಕಾರ್ಯಕರ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ