ಬೀದರ ಅಭಿವೃದ್ಧಿಗೆ ಡಿಸಿ ಜತೆ ಚರ್ಚೆ
Team Udayavani, Jun 28, 2020, 8:50 AM IST
ಬೀದರ: ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಳೆದ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕಾಮಗಾರಿ ಕೈಗೊಳ್ಳಲು ಮತ್ತು ಜಿಲ್ಲೆಯನ್ನು ಪ್ರಗತಿ ಪಥದತ್ತ ಕೊಂಡೊಯ್ಯುವ ಕುರಿತು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಜತೆ ಚರ್ಚಿಸಿದ್ದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು ತುರ್ತಾಗಿ ಕೈಗೊಳ್ಳಬೇಕಾದ ಕಾಮಗಾರಿ ಕೈಗೆತ್ತಿ ಕೊಳ್ಳಲು ಸೂಚನೆ ನೀಡಲಾಗಿದೆ. ಎಲ್ಲ ತಾಲೂಕಿನಲ್ಲಿ ಟ್ರೀ ಪಾರ್ಕ್, ಜಿಲ್ಲೆಯಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲು ರೈತರೊಂದಿಗೆ ಚರ್ಚಿಸಲಾಗುವುದು. ಎಲ್ಲ ತಾಲೂಕುಗಳಲ್ಲಿ ರಸ್ತೆ, ಕುಡಿವ ನೀರು, ಚರಂಡಿ, ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿರುವಂತೆ ಅಧಿಕಾರಿ ಗಳಿಗೆ ಸೂಚಿಸಲಾಗಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿ ತ್ವರಿತವಾಗಿ ಮುಗಿಸಲು, ಬ್ರಿಮ್ಸ್ ಕಾಲೇಜು ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಬೀದರನಲ್ಲಿ ನಡೆಯುತ್ತಿರುವ ಒಳಚರಂಡಿ ಮತ್ತು ನೀರು ಸರಬರಾಜು ಕಾಮಗಾರಿ ತ್ವರಿತ ಮುಗಿಸಲು, ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಲು ತಿಳಿಸಲಾಗಿದೆ.
ನಗರದಲ್ಲಿ ಮಿನಿ ವಿಧಾನಸೌಧ, ಡಿಸಿ ಕಚೇರಿ, ಜಿಪಂ ಕಚೇರಿ ಕಾಮಗಾರಿ ಕೈಗೆತ್ತಿಕೊಳ್ಳಲು, ನಗರದಲ್ಲಿ ಕನ್ನಡ ಭವನ, ಪತ್ರಿಕಾ ಭವನ ಕಾಮಗಾರಿ ಆರಂಭಿಸುವುದು, ಪಾಪನಾಶ ಕೆರೆ ಜೀರ್ಣೋದ್ಧಾರ, ನಾಂದೇಡ-ಬೀದರ ರೈಲು ಮಾರ್ಗ ಶೀಘ್ರ ಪ್ರಾರಂಭಿಸಲು ಕ್ರಮ ತೆಗೆದುಕೊಳ್ಳುವುದು, ಬಸವಕಲ್ಯಾಣದಲ್ಲಿ ಅನುಭವ ಮಂಟಪ ಕಾಮಗಾರಿಗೆ ಚಾಲನೆ ನೀಡುವುದು ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಿದ್ದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ