ದತ್ತು ಶಾಲೆಗಳಿಗೆ ಕಾಯಕಲ್ಪ ಭಾಗ್ಯ

ಶಾಸಕ ಖಂಡ್ರೆಯಿಂದ 3 ಸರ್ಕಾರಿ ಶಾಲೆ ದತ್ತು,ಒಟ್ಟಾರೆ 74 ಲಕ್ಷ ರೂ. ಪ್ರಸ್ತಾವನೆ,ಮಾದರಿ ಶಾಲೆ ಅಭಿವೃದ್ಧಿಗೆ ಯೋಜನೆ

Team Udayavani, Dec 19, 2020, 5:14 PM IST

ದತ್ತು ಶಾಲೆಗಳಿಗೆ ಕಾಯಕಲ್ಪ ಭಾಗ್ಯ

ಬೀದರ: ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಒದಗಿಸಿ ಹೈಟೆಕ್‌ ಶಾಲೆಗಳಾಗಿ ರೂಪಿಸುವ ಉದ್ದೇಶದಿಂದ ಶಾಸಕ ಈಶ್ವರ ಖಂಡ್ರೆ ಅವರು ತಮ್ಮ ಭಾಲ್ಕಿ ಕ್ಷೇತ್ರದಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆ.

ಲಕ್ಷಾಂತರ ರೂ. ವೆಚ್ಚದಲ್ಲಿ ಮಾದರಿ ಶಾಲೆಗಳನ್ನಾಗಿಅಭಿವೃದ್ಧಿಪಡಿಸಲು ಮುಂದಾಗಿದ್ದಾರೆ. ಭಾಲ್ಕಿ ಕ್ಷೇತ್ರದ ಬೀರಿ(ಬಿ) ಗ್ರಾಮದ ಸರ್ಕಾರಿ ಪ್ರೌಢ ಶಾಲೆ, ಹಲಬರ್ಗಾ ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಹಾಗೂ ಮೇಹಕರ್‌ ಗ್ರಾಮದಸರ್ಕಾರಿ ಹಿರಿಯ ಪ್ರಾಥಮಿಕಶಾಲೆಗಳು ಶಾಸಕರ ದತ್ತುಶಾಲೆಗಳ ಪಟ್ಟಿಯಲ್ಲಿ ಸೇರಿವೆ. 2020-21ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಸದರಿ ಶಾಲೆಗಳಿಗೆ ಒಟ್ಟಾರೆ 74 ಲಕ್ಷ ರೂ. ಒದಗಿಸಿದ್ದು, ಬರುವ ದಿನಗಳಲ್ಲಿ ಕಟ್ಟಡಗಳಿಗೆ ಹೊಸ ರೂಪ ಸಿಗಲಿದೆ.

ಖಾಸಗಿ ಶಾಲೆಗಳ ಅಬ್ಬರದ ನಡುವೆ ಮರೆಯಾಗುತ್ತಿದ್ದ ನಗರ ಮತ್ತು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಸಹ ಈಗ ಖಾಸಗಿ ಶಾಲೆಗಳನ್ನು ಮೀರಿಸುವ ರೀತಿಯಲ್ಲಿ ಇತ್ತಿಚೆಗೆ ಅಭಿವೃದ್ಧಿ ಹೊಂದುತ್ತಿವೆ. ಜತೆಗೆ ಸರ್ಕಾರ ಅಗತ್ಯ ಸೌಲತ್ತುಗಳು ಮತ್ತು ಶೈಕ್ಷಣಿಕವಾಗಿಯೂ ಸಾಧನೆ ಮಾಡುತ್ತಿವೆ.ಹಾಗಾಗಿ ವಿದ್ಯಾರ್ಥಿ ಪಾಲಕರ ಆಸಕ್ತಿ ಈಗ ಸರ್ಕಾರಿ ಶಾಲೆಗಳತ್ತ ಹೆಚ್ಚುತ್ತಿದ್ದು, ದಾಖಲಾತಿ ಪ್ರಮಾಣವೂ ಏರಿಕೆ ಆಗಿದೆ. ಈ ಬೆಳವಣಿಗೆ ನಡುವೆ ಶಾಸಕರಿಂದ ಶಾಲೆಗಳನ್ನು ಅಭಿವೃದ್ಧಿಪಡಿಸಲು “ದತ್ತು ಯೋಜನೆ’ ಮತ್ತಷ್ಟು ಪರಿಣಾಮ ಬೀರಲಿದೆ.

ಶಾಸಕರು ದತ್ತು ಪಡೆದಿರುವ ಹಲಬರ್ಗಾ ಕರ್ನಾಟಕ ಪಬ್ಲಿಕ್‌ ಶಾಲೆ ಪ್ರಾಥಮಿಕ, ಪ್ರೌಢ ಮತ್ತುಪಿಯು ಕಾಲೇಜು ಶಿಕ್ಷಣ ಒಳ ಗೊಂಡಿದ್ದು, 150ಕ್ಕೂಹೆಚ್ಚು ಮಕ್ಕಳ ದಾಖಲಾತಿ ಇದೆ. ಸದರಿ ಶಾಲೆಯಲ್ಲಿಕುಡಿಯುವ ನೀರಿನ ಸಮಸ್ಯೆ ಇಲ್ಲವಾದರೂ ಪ್ರತ್ಯೇಕ ವ್ಯವಸ್ಥೆಯ ಕೊರತೆ ಇದೆ. ಇರುವ ಮೂರುಶೌಚಾಲಯಗಳು ಹಾಳಾಗಿದ್ದು, ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಸಮಸ್ಯೆ ಆಗುತ್ತಿದೆ. ವಿಜ್ಞಾನ ಪ್ರಯೋಗಾಲಯ ಹೊರತುಪಡಿಸಿದರೆ ಇನ್ನಿತರ ವಿಷಯಗಳ ಪ್ರಯೋಗಾಲಯಗಳ ಮತ್ತು ಸುಸಜ್ಜಿತ ಲೈಬ್ರರಿ ಕೊರತೆ ಇಲ್ಲಿದೆ.

ಇನ್ನೂ ಬೀರಿ(ಬಿ) ಸರ್ಕಾರಿ ಪ್ರೌಢ ಶಾಲೆಯಲ್ಲಿ 62ಮಕ್ಕಳು ಓದುತ್ತಿದ್ದಾರೆ. ಆದರೆ, ಅಗತ್ಯ ಕೋಣೆಗಳವ್ಯವಸ್ಥೆ ಇಲ್ಲ. ಇಲ್ಲಿ ನೀರಿನ ವ್ಯವಸ್ಥೆ ಸರಿಯಾಗಿದ್ದರೂಶೌಚಾಲಯದ್ದೇ ಪ್ರಮುಖ ಸಮಸ್ಯೆ. ವಿದ್ಯಾರ್ಥಿಗಳಶಿಕ್ಷಣಕ್ಕೆ ಅನುಕೂಲವಾಗುವಂತೆ ಗ್ರಂಥಾಲಯ, ಕಂಪ್ಯೂಟರ್‌ಗಳ ಕಲಿಕೆಗೆ ಬೋಧಕರ ನಿಯೋಜನೆಆಗಬೇಕು. ಜತೆಗೆ ಶಾಲೆ ಮತ್ತು ಮಕ್ಕಳ ಸುರಕ್ಷತೆಗಾಗಿ ಸುತ್ತುಗೋಡೆಯನ್ನು ನಿರ್ಮಾಮಾಡಿಲ್ಲ. ಕಟ್ಟಡಕ್ಕೆ ಸುಣ್ಣ- ಬಣ್ಣ ಹೊಡೆದು ಬಹಳ ವರ್ಷಗಳೇ ಆಗಿವೆ.

ಮತ್ತೂಂದೆ ಮೇಹಕರ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲೂ ಮೂಲಭೂತಸೌಕರ್ಯಗಳ ಕೊರತೆ ಪ್ರಮುಖ ಸಮಸ್ಯೆ. ಸದರಿ ಶಾಲೆಯ ಕಟ್ಟಡ ಶಿಥಲವಾಗಿರುವುದರಿಂದ ಕನ್ನಡಮತ್ತು ಮರಾಠಿ ಮಾಧ್ಯಮಗಳನ್ನು ಪ್ರೌಢ ಶಾಲೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಇಲ್ಲಿಯೂ ನೀರು,ಶೌಚಾಲಯದ ಸಮಸ್ಯೆ ಇದ್ದು, ವಾಚನಾಲಯದ ವ್ಯವಸ್ಥೆಯೇ ಇಲ್ಲ.

ಕೋವಿಡ್‌-19 ಹರಡುವಿಕೆ ಹಿನ್ನೆಲೆಯಲ್ಲಿ ಸದ್ಯ ತರಗತಿ ನಡೆಯುತ್ತಿಲ್ಲ. ಸರ್ಕಾರ ಶಾಸಕರ ದತ್ತುಯೋಜನೆಯಡಿ ಶೀಘ್ರ ಅನುದಾನ ಬಿಡುಗಡೆ ಮಾಡುವ ಮೂಲಕ ಶಾಲೆಗಳ ಅಭಿವೃದ್ಧಿಮುಂದಾದಲ್ಲಿ ಶಾಲೆಗಳು ಆರಂಭಗೊಳ್ಳುವುದರ ಒಳಗೆ ಕಟ್ಟಡಗಳನ್ನು ಸುಸ್ಥಿತಿಗೆ ತರಬಹುದು.

ಭಾಲ್ಕಿ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಮೂರು ಶಾಲೆಗಳನ್ನುದತ್ತು ಪಡೆದಿದ್ದು, ಕಟ್ಟಡ ಸುಭದ್ರಗೊಳಿಸುವುದರ ಜತೆಗೆ ಕುಡಿಯುವ ನೀರು, ಶೌಚಾಲಯ ಸೇರಿ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಮಾದರಿ ಶಾಲೆಗಳನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ. ಜತೆಗೆ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಕಾಳಜಿ ವಹಿಸುವ ದಿಸೆಯಲ್ಲಿ ಕ್ರಮ ವಹಿಸಲಾಗುವುದು. ಈಶ್ವರ ಖಂಡ್ರೆ, ಶಾಸಕರು, ಭಾಲ್ಕಿ

 

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.