ಮಳೆರಾಯನ ಆರ್ಭಟಕ್ಕೆ ಧರಿನಾಡು ತತ್ತರ


Team Udayavani, Sep 28, 2021, 6:30 PM IST

ಮಳೆರಾಯನ ಆರ್ಭಟಕ್ಕೆ ಧರಿನಾಡು ತತ್ತರ

ಬೀದರ: ಸತತ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಧರಿನಾಡು ಬೀದರ ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಗೆ ಜಿಲ್ಲೆಯ ಬಹುತೇಕ ತಾಲೂಕುಗಳು ನಲುಗಿ ಹೋಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಸಾವಿರಾರು ಹೆಕ್ಟೇರ್‌ ಪ್ರದೇಶದ ಬೆಳೆಗಳು ನೀರು ಪಾಲಾಗಿದ್ದರೆ, ವಿವಿಧ ಸೇತುವೆಗಳ ಮೇಲಿಂದ ನೀರು ಹರಿಯುತ್ತಿವೆ.

ಇನ್ನೊಂದೆಡೆ ಗಡಿ ರಾಜ್ಯ ಮಹಾರಾಷ್ಟ್ರದಲ್ಲಿ ಮಳೆ ಆರ್ಭಟ ಹಿನ್ನೆಲೆ ಧನೇಗಾಂವ್‌ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಹರಿ ಬಿಡುತ್ತಿರುವುದರಿಂದ ನಾರಂಜಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹೀಗಾಗಿ ಭಾಲ್ಕಿ ತಾಲೂಕಿನ ಸಾಯಿಗಾಂವ್‌ ಸಮೀಪದ ಬಳಿ ನಿರ್ಮಿಸಿರುವ ಹೊಸ ಸೇತುವೆ ಮೇಲಿಂದ ಏಳೆಂಟು ಫೀಟ್‌ ಎತ್ತರದಲ್ಲಿ ನೀರು ಹರಿದು ಹೋಗುತ್ತಿದ್ದು, ಸಾಯಿಗಾಂವ್‌ ವ್ಯಾಪ್ತಿಯ ಹಲ್ಸಿ ತೂಗಾಂವ್‌, ಕೊಂಗಳಿ, ಜೀರಗ್ಯಾಳ್‌, ಭಾಟಸಾಂಗವಿ, ಲಖನಗಾಂವ್‌ ಸೇರಿ ಇನ್ನಿತರ ಗ್ರಾಮಗಳಲ್ಲಿ ರೈತರು ಬೆಳೆದ ಸಾವಿರಾರು ಎಕರೆ ಬೆಳೆ ಸಂಪೂರ್ಣ ಜಲಾವೃತಗೊಂಡಿದೆ. ಜತೆಗೆ ಈ ಪ್ರದೇಶದಲ್ಲಿ ಸಂಪರ್ಕ ಕಡಿತಗೊಂಡಿದೆ.

ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8ಗಂಟೆಯಿಂದ ಹಿಂದಿನ 24ಗಂಟೆಯ ಅವ ಧಿಯಲ್ಲಿ 7.1 ಮಿ.ಮೀ. (ವಾಡಿಗೆ ಮಳೆ 5.9 ಮಿ.ಮೀ.) ಮಳೆ ಬಿದ್ದಿದೆ. ಬೀದರ ತಾಲೂಕಿನಲ್ಲಿ ಅತಿ ಹೆಚ್ಚು 14.8 ಮಿ.ಮೀ. ಮಳೆ ಬಿದ್ದಿದರೆ ಬಸವಕಲ್ಯಾಣ ತಾಲೂಕಿನ ಅತಿ ಕಡಿಮೆ 1.6 ಮಿ.ಮೀ. ಮಳೆ ಆಗಿದೆ. ಇನ್ನುಳಿದಂತೆ ಔರಾದ 8.3 ಮಿ.ಮೀ., ಭಾಲ್ಕಿ 4.7 ಮಿ.ಮೀ., ಹುಮನಾಬಾದ್‌ 6.3 ಮಿ.ಮೀ., ಚಿಟಗುಪ್ಪ 12.8 ಮಿ.ಮೀ., ಕಮಲನಗ 4.8 ಮಿ.ಮೀ. ಮತ್ತು ಹುಲಸೂರು ತಾಲೂಕಿನಲ್ಲಿ 3 ಮಿ.ಮೀ. ಮಳೆ ಆಗಿರುವುದು ವರದಿಯಾಗಿದೆ.

ಈವರೆಗೆ 28,183 ಹೆಕ್ಟೇರ್‌ ಬೆಳೆಹಾನಿ ಅಂದಾಜಿಸಲಾಗಿದೆ. ಭಾಲ್ಕಿ ಔರಾದ, ಹುಮನಾಬಾದ್‌ ಮತ್ತು ಬೀದರ ತಾಲೂಕಿನಲ್ಲಿ ಹಾನಿ ಪ್ರಮಾಣ ಹೆಚ್ಚಾಗಿದೆ. ಜತೆಗೆ ವಾಣಿಜ್ಯ ಬೆಳೆ ಕಬ್ಬು ಸಹ ನೆಲಸಮಗೊಂಡಿದ್ದು, ರೈತರನ್ನು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಮಳೆಯ ರುದ್ರ ನರ್ತನಕ್ಕೆ ಜಿಲ್ಲೆಯ ವಿವಿಧೆಡೆ ಸೇತುವೆಗಳು ಮುಳುಗಡೆಯಾಗಿದ್ದರೆ, ಕೆಲವೆಡೆ ಕುಸಿದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದಲ್ಲದೇ ಕೆಲ ಗಂಟೆಗಳ ಕಾಲ ಹಲವು ಗ್ರಾಮಗಳ ಸಂಪರ್ಕ
ಕಡಿತಗೊಳ್ಳುವಂತೆ ಮಾಡಿತು. ಮಳೆ ಅಬ್ಬರದಿಂದ ಬೀದರ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಸೋಮವಾರ ರಾತ್ರಿವಿಡೀ ಭಾರಿ ಮಳೆಯಿಂದ ತಗ್ಗು ಪ್ರದೇಶದ ಅಂಗಡಿ ಮುಂಗಟ್ಟು, ಮನೆಗಳಿಗೆ ನೀರು ನುಗ್ಗಿ ಅನಾಹುತ ಸೃಷ್ಟಿಸಿತ್ತು. ಸೋಮವಾರ ಮಧ್ಯಾಹ್ನದಿಂದ ಮಳೆ ಆಗಿದ್ದು, ಮೋಡ ಕವಿದ ವಾತಾವರಣ ಇದೆ.

ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಭಾಲ್ಕಿ ತಾಲೂಕಿನ ಕಾರಂಜಾ ಜಲಾಶಯದ ಒಡಲು ಭರ್ತಿಯಾಗಿದ್ದು, ಕಳೆದ ಮೂರು ದಿನಗಳಿಂದ 4 ಗೇಟ್‌ಗಳ ಮೂಲಕ ಹೆಚ್ಚುವರಿ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ. 7.691 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 7.686 ಟಿಎಂಸಿ ಅಡಿ ನೀರು ಸಂಗ್ರಹ ಇದೆ. ಜಲಾಶಯದ ಒಳ ಹರಿವು 3110 ಕ್ಯೂಸೆಕ್‌ ಮತ್ತು ಹೊರ ಹರಿವು 3910 ಕ್ಯೂಸೆಕ್‌ ದಾಖಲಾಗಿದೆ. ಅಧಿ ಕ ಪ್ರಮಾಣದಲ್ಲಿ ನದಿಗೆ ನೀರು ಬಿಡುತ್ತಿರುವುದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ನೀರು ನುಗ್ಗುವ ಆತಂಕ ಹೆಚ್ಚಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.