ಹೆ.ಕ.ಕ್ಕೆ ಧರ್ಮಸಿಂಗ್‌ ಕೊಡುಗೆ ಸ್ಮರಣೀಯ: ಖಂಡ್ರೆ


Team Udayavani, Dec 6, 2017, 12:11 PM IST

bid-4.jpg

ಬೀದರ: ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಈ ಭಾಗಕ್ಕೆ ನೀಡಿದ ಕೊಡುಗೆಯನ್ನು ಮರೆಯಲಾಗದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಮನ್ನಳ್ಳಿ ಗ್ರಾಮದಲ್ಲಿ ದಿ| ಎನ್‌. ಧರ್ಮಸಿಂಗ್‌ ಅವರ 81ನೇ ಜನ್ಮದಿನದ ಅಂಗವಾಗಿ ಯುವ ಮುಖಂಡ ಚಂದ್ರಸಿಂಗ್‌ ನೇತೃತ್ವದಲ್ಲಿ ಆಯೋಜಿಸಿರುವ ಡಾ| ಎನ್‌. ಧರ್ಮಸಿಂಗ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಅವರು, ಧರ್ಮಸಿಂಗ್‌ ಅವರು ಮುಖ್ಯಮಂತ್ರಿ, ಸಚಿವ ಹಾಗೂ ಸಂಸದರಾಗಿ ರಾಜ್ಯದ, ಅದರಲ್ಲೂ ವಿಶೇಷವಾಗಿ ಹೈ.ಕ. ಭಾಗದ ಅಭಿವೃದ್ಧಿಗೆ ಶ್ರಮಿಸಿದ್ದರು. ಸಂವಿಧಾನದ 371(ಜೆ) ಕಲಂಗೆ ತಿದ್ದುಪಡಿ ತಂದು ಈ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ ಶ್ರೇಯ ಧರ್ಮಸಿಂಗ್‌ ಹಾಗೂ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲುತ್ತದೆ ಎಂದರು.

ಧರ್ಮಸಿಂಗ್‌ ಅವರ ಜನ್ಮದಿನದ ಪ್ರಯುಕ್ತ ಕ್ರಿಕೆಟ್‌ ಟೂರ್ನಿ ಸಂಘಟಿಸಿರುವುದು ಸಂತಸದ ಸಂಗತಿಯಾಗಿದೆ. ಕ್ರಿಕೆಟ್‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಕ್ರೀಡೆಯಾಗಿದೆ ಎಂದ ಅವರು, ಜಿಲ್ಲೆಯಲ್ಲಿ ಅನೇಕ ಪ್ರತಿಭಾವಂತ ಕ್ರಿಕೆಟ್‌
ಆಟಗಾರರಿದ್ದಾರೆ. ಟೂರ್ನಿಯಲ್ಲಿ ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 90 ತಂಡಗಳು ಪಾಲ್ಗೊಂಡಿರುವುದು ಕ್ರೀಡಾ ಸ್ಪೂರ್ತಿಯ ಸಂಕೇತವಾಗಿದೆ. ಚಂದ್ರಸಿಂಗ್‌ ಅವರು ಕ್ರೀಡೆಗೆ ಉತ್ತೇಜನ ನೀಡುತ್ತಿರುವುದು ಶ್ಲಾಘನೀಯ ಎಂದರು. ಕಳೆದ ವರ್ಷ ಟೂರ್ನಿ ನಡೆಸಿದ್ದ ಸಂದರ್ಭದಲ್ಲಿ ಎನ್‌. ಧರ್ಮಸಿಂಗ್‌ ಇದ್ದರು. ಈಗ ಅವರು ನಮ್ಮ ಮಧ್ಯೆ ಇಲ್ಲ. ಆದರೆ, ಅವರ ಆದರ್ಶಗಳು ನಮ್ಮೊಂದಿಗೆ ಇವೆ ಎಂದು ಹೇಳಿದರು. 

ಯುವ ಮುಖಂಡ ಚಂದ್ರಸಿಂಗ್‌ ಮಾತನಾಡಿ, ಕಳೆದ ವರ್ಷದಿಂದ ಧರ್ಮಸಿಂಗ್‌ ಟ್ರೋಫಿ ಕ್ರಿಕೆಟ್‌ ಟೂರ್ನಿ ಆಯೋಜಿಸುತ್ತ ಬರಲಾಗಿದೆ. ಕಳೆದ ವರ್ಷ 80 ತಂಡಗಳು ಭಾಗವಹಿಸಿದ್ದರೆ, ಈ ವರ್ಷ 90 ತಂಡಗಳು ಪಾಲ್ಗೊಂಡಿವೆ. ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ದೊರೆತಿದೆ. ಡಿ. 21ರ ವರೆಗೆ ಟೂರ್ನಿ ನಡೆಯಲಿದೆ ಎಂದು ಹೇಳಿದರು. 

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಮ್‌ ಖಾನ್‌, ಎಂಎಲ್‌ಸಿ ವಿಜಯಸಿಂಗ್‌, ಶಾಸಕ ಅಜಯಸಿಂಗ್‌, ಕೆಪಿಸಿಸಿ ಕಾರ್ಯದರ್ಶಿ ಬಿ. ನಾರಾಯಣರಾವ್‌ ಮಾತನಾಡಿದರು. ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಉಪಾಧ್ಯಕ್ಷ
ಪ್ರಕಾಶ ಪಾಟೀಲ, ಅಭಿಷೇಕ ಪಾಟೀಲ ಮಾಜಿ ಎಂಎಲ್‌ಸಿ ಕಾಜಿ ಅರಶದ್‌ ಅಲಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬಿಡಿಎ ಅಧ್ಯಕ್ಷ ಸಂಜಯ ಜಾಗಿರದಾರ, ತಾಪಂ ಅಧ್ಯಕ್ಷ ವಿಜಯಕುಮಾರ ಬರೂರು, ಜಿಪಂ ಸದಸ್ಯರಾದ
ಅಫ್ರೋಜ್‌ಖಾನ್‌, ಫಿರೋಜ್‌ಖಾನ್‌, ಮಂಜುಳಾ ಸ್ವಾಮಿ, ಜಯಶ್ರೀ ರಾಠೊಡ್‌, ಮುಖಂಡರಾದ ಮುರಳಿಧರ ಎಕಲಾರಕರ್‌, ಪಂಡಿತ ಚಿದ್ರಿ, ಅಬ್ದುಲ್‌ ಮನ್ನಾನ್‌ ಸೇಠ್ಠ್, ಫಹೀಮ್‌ ಪಟೇಲ, ಗೌಸೊದ್ದಿನ್‌ ಕಮಠಾಣ, ರುಕ್ಮಾರೆಡ್ಡಿ ಪಾಟೀಲ ಮತ್ತಿತರರು ಇದ್ದರು. ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ ನಿರೂಪಿಸಿದರು. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.