ಅವ್ಯವಸ್ಥೆ ಆಗರವಾದ ವಸತಿ ನಿಲಯ


Team Udayavani, Nov 16, 2018, 3:37 PM IST

bid-2.jpg

ಬಸವಕಲ್ಯಾಣ: ಕಿಟ್ಟಾ ಗ್ರಾಮದ ಹೊರವಲಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ಪೂರ್ವ ಬಾಲಕರ ಡಿ.ದೇವರಾಜ್‌ ಅರಸು ವಸತಿ ನಿಲಯ ಹೊರಗಿನ ಆವರಣ ಹಸಿರು ತೋರಣಗಳಿಂದ ಕಂಗೊಳಿಸುತ್ತಿದ್ದರೆ, ಒಳಗಡೆ ಮಾತ್ರ ಅಸ್ವತ್ಛತೆ ಹಾಗೂ ಹಲವು ಸಮಸ್ಯೆಗಳ ಮೂಲವಾಗಿದೆ. ಈ ವಸತಿ ನಿಲಯದಲ್ಲಿ ಸುಮಾರು 50 ಜನ ಪ್ರವೇಶ ಪಡೆದುಕೊಂಡಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗಿದೆ.

ಆದರೆ ಅಧಿ ಕಾರಿಗಳ ನಿರ್ಲಕ್ಷ್ಯವೋ ಅಥವಾ ಸಿಬ್ಬಂದಿಗಳು ನಿರ್ಲಕ್ಷ್ಯವೋ, ವಿದ್ಯಾರ್ಥಿಗಳು ಮಾತ್ರ ಸೌಕರ್ಯಗಳಿಂದ ಚಿತರಾಗಿದ್ದಾರೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಹಿಡಿಶಾಪ ಹಾಕುತ್ತಿದ್ದಾರೆ. ಅಸ್ವತ್ಛತೆಯಿಂದ ಎನ್‌1ಎಚ್‌1 ಸೋಂಕು ತಗುಲಿ ಈಚೆಗೆ ಗ್ರಾಮದಲ್ಲಿ ವ್ಯಕ್ತಿ ಮೃತ್ತಪಟ್ಟಿರುವ ಘಟನೆ ನಡೆದಿದೆ. ಆದರೂ ಸಂಬಂಧಪಟ್ಟವರು ಸರ್ಕಾರದಿಂದ ಮಂಜೂರಾದ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಆರೋಗ್ಯಯುತ ವಾತವರಣ ನಿರ್ಮಾಣ ಮಾಡುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ವಸತಿ ನಿಲಯದ ಆವರಣವನ್ನು ಮಾತ್ರ ಹಸಿರು ಕಾಣುವಂತೆ ಮಾಡಲಾಗಿದೆ ವಿನಃ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಬೇಕಾಗುವ
ಸೌಕರ್ಯಗಳ ಬಗ್ಗೆ ಮಾತ್ರ ಗಮನ ಹರಿಸಿಲ್ಲ. ಅಡುಗೆ ಕೋಣೆ ಅನೈರ್ಮಲ್ಯದ ತಾಣವಾಗಿದೆ. ನೀರಿನ ಟ್ಯಾಂಕ್‌ ಮೇಲೆ
ಯಾವುದೇ ಮುಚ್ಚಳ ಅಳವಡಿಸಲಿಲ್ಲ. ಹೀಗಾಗಿ ನೀರಿನಲ್ಲಿ ಕಸಕಡ್ಡಿ ಬಿದ್ದು ಯಾವುದಕ್ಕೂ ಉಪಯೋಗಕ್ಕೆ ಬಾರದಂತಾದರೂ ಅದನ್ನೇ ನಿತ್ಯ ಬಳಕೆ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.

ವಾಟರ್‌ ಹೀಟರ್‌ ಹಾಳು: ವಸತಿ ನಿಲಯದ ಮೇಲೆ ಲಕ್ಷಾಂತರ ರೂ. ಖರ್ಚು ಮಾಡಿ ಅಳವಡಿಸಲಾಗಿದ್ದ, ವಾಟರ್‌ ಹೀಟರ್‌ ಯಂತ್ರ ಉಪಯೋಗಕ್ಕೆ ಬಾರದಂತಾಗಿದೆ. ಆದರೂ ಈವರೆಗೆ ಅದನ್ನು  ದುರಸ್ಥಿ ಮಾಡುವುದು ಅಥವಾ ಬೇರೆ ವ್ಯವಸ್ಥೆ ಮಾಡಲು ಮುಂದಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ಚಳಿಗಾಲದಲ್ಲೂ ತಣ್ಣೀರು ಸ್ನಾನ ಮಾಡಿ ಶಾಲೆ ಹೋಗುವ ಸ್ಥಿತಿ ಇದೆ. ಮಕ್ಕಳಿಗೆ ಶುದ್ಧ ಕುಡಿಯುವ ನೀರು ದೊರೆಯಲಿ ಎಂಬ ಉದ್ದೇಶದಿಂದ ವಸತಿ ನಿಲಯದಲ್ಲಿ ವಾಟರ್‌ μಲ್ಟರ್‌ ಯಂತ್ರ ನೀಡಲಾಗಿದೆ. ಇದು ಮಕ್ಕಳಿಗೆ ಉಪಯೋಗಕ್ಕೆ ಬಾರದೇ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗಿದೆ. ಆದರೂ ಸಂಬಂಧ ಪಟ್ಟವರು ದುರಸ್ಥಿ ಮಾಡಲು ಮುಂದಾಗಿಲ್ಲ.
ಹೀಗಾಗಿ ಇಟ್ಟ ಸ್ಥಳದಲ್ಲೆ ಧೂಳು ತಿನ್ನುತ್ತಿದೆ. 

ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯದಲ್ಲಿ ಅನುಕೂಲವಾಗಲಿ ಎಂಬ ಉದ್ದೇಶದಿಂದ ವಸತಿ ನಿಲಯದಲ್ಲಿ ಅಳವಡಿಸಲಾದ ವಿದ್ಯುತ್‌ ಬ್ಯಾಟರಿ ಹಾಗೂ ಸೋಲಾರ್‌ ಆಧಾರದಲ್ಲಿ ಆವರಣದಲ್ಲಿ ಅಳವಡಿಸಲಾಗಿದ್ದ ದೀಪಕೂಡ ಹಾಳಾಗಿದ್ದರೂ ದುರಸ್ಥಿ ಮಾಡುವ ಕೆಲಸ ನಡೆದಿಲ್ಲ. ಹೀಗಾಗಿ ರಾತ್ರಿ ವಿದ್ಯುತ್‌ ಕೈ ಕೊಟ್ಟರೆ ದೇವರ ಬಲ್ಲ ಎಂಬಂತಾಗಿದೆ ಇಲ್ಲಿ ಸ್ಥಿತಿ.

ಅಡುಗೆ ಕೋಣೆ ಅವ್ಯವಸ್ಥೆ ತಾಣ: ಅಡುಗೆ ಮಾಡುವ ಕೋಣೆ ಅವ್ಯವಸ್ಥೆಯ ತಾಣವಾಗಿದೆ. ಒಳಗಡೆ ಹೋದರೆ ಸಾಕು ಪಾತ್ರೆಗಳು ಹಾಗೂ ಊಟ ಮಾಡುವ ತಟ್ಟೆ ಅಲ್ಲಲ್ಲಿ ಬಿದ್ದಿವೆ. ನೀರಿನ ಟ್ಯಾಂಕ್‌ ಮೇಲೆ ಯಾವುದೇ ಮುಚ್ಚಳ ಅಳವಡಿಸದೇ ಎಲ್ಲಾ ಕೆಲಸಕ್ಕೂ ಇಲ್ಲಿನ ನೀರನ್ನೇ ಬಳಸಲಾಗುತ್ತ¨

„ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.