ರೋಗಬಾಧೆ: ಅನ್ನದಾತರಿಗೆ ಮೆಣಸಿನಕಾಯಿ ಘಾಟು!


Team Udayavani, Oct 29, 2021, 11:48 AM IST

13chilly

ಇಂಡಿ: ರೈತರು ಹಲವಾರು ಆಸೆ-ನಿರೀಕ್ಷೆ ಇಟ್ಟುಕೊಂಡು ಮೆಣಸಿನ ಬೆಳೆ ನಾಟಿ ಮಾಡಿದ್ದಾರೆ. ಆದರೆ ಮೆಣಸಿನ ಸಸಿಗಳಿಗೆ ಆವರಿಸಿದ ರೋಗಬಾಧೆಯಿಂದ ರೈತರ ನಿರೀಕ್ಷೆಗಳೆಲ್ಲ ಬುಡಮೇಲಾಗಿದ್ದು, ಅನ್ನದಾತರಿಗೆ ಮೆಣಸಿನಕಾಯಿ ಘಾಟು ಬಡಿದಿದೆ.

ಇತ್ತೀಚೆಗೆ ಭೀಮಾ ತೀರದ ಭಾಗದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದು ಅನೇಕ ರೈತರು ಆರ್ಥಿಕವಾಗಿ ಸಬಲರಾಗಿ ಸ್ಥಿತಿವಂತರಾಗಿದ್ದರು. ಹೀಗಾಗಿ ಪ್ರಸಕ್ತ ವರ್ಷವೂ ಸಾವಿರಾರು ರೈತರು ಹಲವು ಆಸೆಯನ್ನಿಟ್ಟುಕೊಂಡು ಮೆಣಸಿನಕಾಯಿ ಬೆಳೆದಿದ್ದು, ರೋಗಬಾಧೆ ಹೊಡೆತಕ್ಕೆ ನಲುಗಿದ್ದಾರೆ.

ಇಂಡಿ ತಾಲೂಕಿನ ಆಳೂರ, ಪಡನೂರ, ಬರಗುಡಿ, ಅಹಿರಸಂಗ, ಇಂಗಳಗಿ, ಸಾತಪುರ, ಮಾವಿನಹಳ್ಳಿ, ಅಗರಖೇಡ ಸೇರಿದಂತೆ ಸಂಗೋಗಿ, ಶಿರಶ್ಯಾಡ, ಸಾಲೋಟಗಿ, ನಾದ ಮತ್ತಿತರ ಗ್ರಾಮಗಳಲ್ಲಿ ಮೆಣಸಿನ ಸಸಿ ನಾಟಿ ಮಾಡಿದ್ದಾರೆ. ಆದರೆ ಮೆಣಸಿನ ಸಸಿಗಳಿಗೆ ತಾಮ್ರ ಹಾಗೂ ಸಿಡಿ, ಬೆಂಕಿ ರೋಗ ಸೇರಿದಂತೆ ಇತರ ರೋಗಗಳು ಆವರಿಸುತ್ತಿದ್ದು, ಸಸಿಗಳು ಒಣಗುತ್ತಿವೆ. ಸಸಿ ಮೇಲಿನ ಎಲೆಗಳು ತಾಮ್ರದ ಬಣ್ಣಕ್ಕೆ ತಿರುಗಿ ಕಾಂಡಗಳೆಲ್ಲ ನೆಲಕ್ಕುರುಳುತ್ತಿವೆ. ರೈತರು ಸಾಕಷ್ಟು ಔಷಧೋಪಚಾರ ಮಾಡಿದರೂ ರೋಗ ಮಾತ್ರ ಹತೋಟಿಗೆ ಬಾರದಿರುವುದು ಅನ್ನದಾತರನ್ನು ಅಕ್ಷರಶಃ ಚಿಂತೆಗೀಡು ಮಾಡಿದೆ.

ಸಾವಿರಾರು ರೂ. ವ್ಯಯಿಸಿ ಮೆಣಸಿನಕಾಯಿ ಬೆಳೆದ ರೈತರು ರೋಗಬಾಧೆಯಿಂದ ದಿಕ್ಕು ತೋಚದಂತಾಗಿದ್ದು, ಸಂಬಂಧಿಸಿದ ಕೃಷಿ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರ ಜಮೀನಿಗೆ ಭೇಟಿ ನೀಡಿ, ಇಲಾಖೆ ಸೌಲಭ್ಯ-ಸಲಹೆ ನೀಡಿ ರೈತಾಪಿ ವರ್ಗದಲ್ಲಿ ಧೈರ್ಯ ತುಂಬಬೇಕಿದೆ. ಅಲ್ಲದೇ ಕೇಂದ್ರ-ರಾಜ್ಯ ಸರ್ಕಾರಗಳು ಕೃಷಿ ಇಲಾಖೆ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ವಿಶೇಷ ಸಹಾಯಧನದ ಅಡಿಯಲ್ಲಿ ಸಹಾಯ ಮಾಡಬೇಕೆನ್ನುವ ಕೂಗು ರೈತಾಪಿ ವಲಯದಲ್ಲಿ ಕೇಳಿ ಬರುತ್ತಿದೆ.

ಇದನ್ನೂ ಓದಿ: ಹಸಿರು ಪಟಾಕಿಗಳಿಂದಲೂ ಕಣ್ಣಿಗೆ ಹಾನಿ

ನಾನು ಸುಮಾರು2ಎಕರೆಪ್ರದೇಶದಲ್ಲಿ ಮೆಣಸಿನ ಸಸಿ ನಾಟಿ ಮಾಡಿದ್ದೇನೆ.ಬೆಳೆ ಕೈಗೆ ಬರುವ ಮುಂಚೆ ರೋಗಬಿದ್ದಿದೆ. ಲಕ್ಷಾಂತರ ರೂ.ಖರ್ಚು ಮಾಡಿ ಔಷಧೋಪಚಾರ ಮಾಡಿದರೂ ರೋಗದ ಲಕ್ಷಣಗಳು ಕಡಿಮೆಯಾಗುತ್ತಿಲ್ಲ. ಸರ್ಕಾರ ಮೆಣಸಿನಕಾಯಿ ಬೆಳೆಗಾರರ ನೆರವಿಗೆ ಬರಬೇಕು. -ಮಲ್ಲಕಪ್ಪ ಜಕ್ಕಪ್ಪ ಬೇವನೂರ, ಬೆಳೆಗಾರ, ಆಳೂರ ಗ್ರಾಮ

ಮೆಣಸಿನ ‌ಕಾಯಿ ಬೆಳೆ ಸರಿಯಾಗಿ ಬಂದರೆ ಸುಮಾರು ಒಂದು ಎಕರೆಗೆ 6 ರಿಂದ 8 ಕ್ವಿಂಟಲ್‌ ಇಳುವರಿ ಬರುತ್ತದೆ. ಆದರೆ ಈ ರೋಗಗಳಿಂದ ¸ ಸಂಪೂರ್ಣ ನಾಶವಾಗಿದೆ. ಇದರಿಂದ ಪ್ರತಿ ಎಕರೆಗೆ ಬರಬೇಕಿದ್ದ 2 ಲಕ್ಷಕ್ಕಿಂತ ‌ ಅಧಿಕ ‌ ಆದಾಯ ಕೈ ತಪ್ಪಿದೆ. -ಎಸ್‌.ಆರ್‌.ಬಿರಾದಾರ, ರೈತ, ಶಿರಶ್ಯಾಡ ಗ್ರಾಮ

-ಯಲಗೊಂಡ ಬೇವನೂರ

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.