ಶಾಲೆ-ಅಂಗನವಾಡಿ ಸ್ಥಿತಿ ಕಂಡು ಬೇಸರಗೊಂಡ ನ್ಯಾ| ಸಂಜೀವಕುಮಾರ


Team Udayavani, Feb 11, 2019, 8:42 AM IST

bell-3.jpg

ಬೀದರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಸದಸ್ಯ ಕಾರ್ಯದರ್ಶಿ ನ್ಯಾ|ಹಂಚಾಟೆ ಸಂಜೀವಕುಮಾರ ಅವರು ರವಿವಾರ ತಾಲೂಕಿನ ಖಾಶೆಂಪೂರ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಸ್ಥಿತಿ ಪರಿಶೀಲಿಸಿದರು.

ಬಾಗಿಲು ಮತ್ತು ಕಿಟಕಿಗಳಿಲ್ಲದೆ, ಅನೈತಿಕ ಚಟುವಟಿಕೆಗಳ ತಾಣದಂತಾಗಿದ್ದ ಶಾಲೆಯ ಕೆಲವು ಕೋಣೆಗಳು, ಅವುಗಳ ದುರಾವಸ್ಥೆ, ಅಡುಗೆ ಕೋಣೆಯಲ್ಲಿ ಕಸ ಹಾಕಿರುವುದು, ಅದರ ಹಿಂಭಾಗದಲ್ಲಿಯೇ ಮೂತ್ರ ಮಾಡುತ್ತಿರುವುದನ್ನು ಕಂಡು ನ್ಯಾಯಾಧೀಶರು ತೀವ್ರ ಬೇಸರ ವ್ಯಕ್ತಪಡಿಸಿದರು.

ಸ್ಥಳಕ್ಕೆ ಶಿಕ್ಷಣಾಧಿಕಾರಿಗಳು ಆಗಮಿಸಿದಾಗ, ಈ ಶಾಲೆ ಸುಧಾರಿಸಲು ತಾವೇನು ಪ್ರಯತ್ನ ಮಾಡಿದ್ದೀರಿ? ಯಾರಿಗಾದರೂ ಮನವಿ ಕೊಟ್ಟಿದ್ದೀರಾ? ಜಿಲ್ಲಾಧಿಕಾರಿಗಳು ಇಲ್ಲವೇ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರ ಗಮನಕ್ಕೆ ತಂದಿದ್ದೀರಾ? ಇದರ ಬಗ್ಗೆ ತಾವೇನು ಕ್ರಮ ಕೈಗೊಂಡಿದ್ದೀರಿ? ನಿಮ್ಮಲ್ಲಿ ಸೂಕ್ಷ್ಮತೆ ಇಲ್ಲವೆ? ಸಂವೇಧನಾಶೀಲತೆ ಇಲ್ಲವೇ? ಎಂದು ಶಿಕ್ಷಣ ಅಧಿಕಾರಿಗಳಿಗೆ ಪ್ರಶ್ನಿಸಿದ ನ್ಯಾಯಾಧೀಶರು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಧೋರಣೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಶಾಲಾ ಕೋಣೆಗಳಲ್ಲಿ ತರಗತಿಗಳು ನಡೆಯುವುದಿಲ್ಲ. ಇವು ಶಿಥಿಲಾವಸ್ಥೆಯಲ್ಲಿರುವ ಕಾರಣ ಕಿಟಕಿ, ಬಾಗಿಲುಗಳು ಮುರಿದಿವೆ. ಈ ಕೋಣೆಗಳನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಿಕ್ಷಣಾಧಿಕಾರಿಗಳು ಪ್ರತಿಕ್ರಿಯಿಸಿದರು.

ಈ ವೇಳೆ, ನ್ಯಾಯಾಧೀಶರು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಷಯ ತಿಳಿಸಿದರು. ಇಂತಹ ದುಸ್ಥಿತಿ ಬಹುತೇಕ ಎಲ್ಲ ಹಳ್ಳಿಗಳಲ್ಲೂ ಇದೆ. ಎಲ್ಲ ಶಿಕ್ಷಕರನ್ನು ಒಂದೆಡೆ ಸೇರಿಸಿ ಅವರಿಗೆ ಎಚ್ಚರಿಕೆ ನೀಡಿರಿ. ನಿಮ್ಮಲ್ಲಿ ಪ್ರಾಧಿಕಾರದ ವಿನಂತಿ ಇದೆ ಎಂದು ಸಿಇಒ ಅವರಿಗೆ ಹೇಳಿದರು.

ಹಾಳು ಹೊಡೆಯುವಂತಿದ್ದ ಶಾಲಾ ಕೋಣೆಗಳು, ಆಟದ ಮೈದಾನ ಸರಿಯಾಗಿಲ್ಲದಿರುವುದು, ಸಸಿ ನೆಡದೇ ಇರುವುದನ್ನು ಗಮನಿಸಿದ ನ್ಯಾಯಾಧೀಶರು, ಇಂತಹ ಪರಿಸರದಲ್ಲಿ ಮಕ್ಕಳಿಗೆ ಕಲಿಸುವುದು ತುಂಬಾ ಕಷ್ಟ. ಇದು ನಾಗರಿಕ ಸಮಾಜ ಅನ್ನಿಸಿಕೊಳ್ಳುವುದಿಲ್ಲ. ಇದು ಸ್ಪಷ್ಟವಾಗಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಇಂತಹ ಪರಿಸರದಲ್ಲಿ ಮಕ್ಕಳು ಕಲಿಯಲು ಹೇಗೆ ಸಾಧ್ಯ? ನಿಮ್ಮ ಧೋರಣೆ ಸರಿಯಲ್ಲ. ಇದು ಬಡತನವನ್ನು ಅಣಕಿಸಿದಂತಿದೆ. ಶಿಕ್ಷಣ ಇಲಾಖೆಯು ಇತ್ತ ಕಡೆ ಗಮನ ಕೊಡಬೇಕು ಎಂದು ತಿಳಿಸಿದರು.

ಶಿಕ್ಷಕಿಯರ ವಿರುದ್ಧ ದೂರು: ನಮ್ಮೂರಿಗೆ ಶಿಕ್ಷಕಿಯರು ಬಂದ ಮೇಲೆಯೇ ಈ ದುಸ್ಥಿತಿ ಬಂದಿದೆ. ಅವರಿಂದ ಊರಿಗೆ ಕೆಟ್ಟ ಹೆಸರು ಬರುತ್ತಿದೆ. ಅವರಲ್ಲಿ ಹೊಂದಾಣಿಕೆ ಇಲ್ಲ. ಸರಿಯಾಗಿ ಪಾಠ ಮಾಡುವುದಿಲ್ಲ. ನೊಟೀಸ್‌ ನೀಡಿದರೆ ಹರಿದು ಹಾಕುತ್ತಾರೆ. ಬೇರೆಡೆ ವರ್ಗಾವಣೆ ಮಾಡಿದರೆ ಸಂಘಗಳಿಂದ ಒತ್ತಡ ಹೇರಿ ಮತ್ತೆ ಇಲ್ಲಿಗೆ ಬರುತ್ತಾರೆ. ಮುಖ್ಯ ಶಿಕ್ಷಕರಾದ ಹೂಗಾರ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು ಅವರ ಮಾತುಗಳನ್ನು ಯಾರೂ ಕೂಡ ಕೇಳುವುದಿಲ್ಲ. ಎಂಟನೇ ತರಗತಿ ಓದುವ ಮಕ್ಕಳಿಗೆ ಎಬಿಸಿಡಿ ಬರುವುದಿಲ್ಲ. ಮಕ್ಕಳು ಹೊರಗಡೆ ಆಟವಾಡುತ್ತಿದ್ದರೆ ತಮಗೇನೂ ಸಂಬಂಧವಿಲ್ಲ ಎನ್ನುವಂತೆ ಶಿಕ್ಷಕಿಯರು ಒಳಗಿರುತ್ತಾರೆ ಎಂದು ಸ್ಥಳದಲ್ಲಿದ್ದ ಎಲ್ಲರೂ ಶಾಲಾ ಶಿಕ್ಷಕಿಯರ ವಿರುದ್ಧ ದೂರಿದರು. ಈ ಬಗ್ಗೆ ಕೂಡಲೇ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ವರದಿ ಮಾಡಿರಿ ಎಂದು, ನ್ಯಾಯಾಧೀಶರು ಬಿಆರ್‌ಸಿ ಅವರಿಗೆ ನಿರ್ದೇಶನ ನೀಡಿದರು.

ಏಕತೆಯಿಂದ ಬದಲಾವಣೆ: ಬೇರೆ ಬೇರೆ ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆ ಇದ್ದಾಗ ಇಂತಹ ದುಸ್ಥಿತಿ ಎದುರಾಗುತ್ತದೆ. ಎಲ್ಲರೂ ಒಟ್ಟು ಗೂಡಿ ಕೆಲಸ ಮಾಡಿದಾಗ ಬದಲಾವಣೆ ತರಲು ಸಾಧ್ಯವಾಗುತ್ತದೆ. ತಾವು ಕೂಡ ಶಿಕ್ಷಕರಿಗೆ ಅರಿವು ಮೂಡಿಸಿರಿ. ಕಾನೂನಿನ ಬಗ್ಗೆ ತಿಳಿವಳಿಕೆ ಮೂಡಿಸಿರಿ ಎಂದು ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರಾದ ಮನಗೂಳಿ ಪ್ರೇಮಾವತಿ, ಹಿರಿಯ ಸಿವಿಲ್‌ ನ್ಯಾಯಾಧಿಧೀಶರಾದ ಆರ್‌.ರಾಘವೇಂದ್ರ ಹಾಗೂ ಇನ್ನಿತರ ನ್ಯಾಯಾಧೀಶರಿಗೆ ಸಲಹೆ ನೀಡಿದರು.

ಗ್ರಾಮಸಭೆಗಳಲ್ಲಿ ಮಾತನಾಡಿ: ಗ್ರಾಮಸಭೆ ಎಂದರೆ ಅದು ಗ್ರಾಮದ ಸಂಸತ್ತು ಇದ್ದ ಹಾಗೆ. ತಾವು ನಡೆಸುವ ಗ್ರಾಮಸಭೆಗಳಲ್ಲಿ ಶಾಲೆಯ ಸ್ಥಿತಿಗತಿ ಬಗ್ಗೆ ಚರ್ಚಿಸಿಲ್ಲವೇ ಎಂದು ನ್ಯಾಯಾಧೀಶರು, ಗ್ರಾಪಂ ಸದಸ್ಯರಿಗೆ ಕೇಳಿದರು. ಗ್ರಾಮಸಭೆಗಳಲ್ಲಿ ಶಾಲೆಯ ಬಗ್ಗೆ ಒಬ್ಬರೂ ಮಾತನಾಡುವುದಿಲ್ಲ ಎಂದು ಕೆಲವರು ಹೇಳಿದರು. ದಯವಿಟ್ಟು ತಾವು ಇನ್ನುಮುಂದೆ ಗ್ರಾಮಸಭೆಗಳಲ್ಲಿ ಶಾಲೆಯ ಸ್ಥಿತಿಗತಿಯ ಬಗ್ಗೆ ಚರ್ಚಿಸಿರಿ. ನಿಮ್ಮ ಅಭಿವೃದ್ಧಿ ನಿಮ್ಮ ಕೈಯಲ್ಲಿಯೇ ಇದೆ ಎಂದು ನ್ಯಾಯಾಧೀಶರು ಗ್ರಾಮಸ್ಥರಿಗೆ ಸಲಹೆ ನೀಡಿದರು. ಇನ್ನುಮುಂದೆ ಸ್ವಚ್ಛತೆಗೆ ಒತ್ತು ಕೊಡುತ್ತೇವೆ ಎಂದು ನಿಮ್ಮ ಮುಂದೆ ಶಪಥ ಮಾಡುತ್ತೇವೆ. ಆದರೆ, ಇಲ್ಲಿನ ಎಲ್ಲ ಶಿಕ್ಷಕಿಯರನ್ನು ಬೇರೆ ಕಡೆ ವರ್ಗಾವಣೆ ಮಾಡಿ, ಗ್ರಾಮದ ಅಭಿವೃದ್ಧಿಗೆ ಸಹಕರಿಸಿರಿ ಎಂದು ಗ್ರಾಮಸ್ಥರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.

ಅಂಗನವಾಡಿಗಳಿಗೆ ಭೇಟಿ: ಗ್ರಾಮದ 2ನೇ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ನ್ಯಾಯಾಧೀಶರು, ಇಲ್ಲಿ ತಾವು ಅಡುಗೆಗೆ ಬಳಸುವ ಎಣ್ಣೆ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದನ್ನು ಪರೀಕ್ಷಿಸಿ, ಬಳಸಿರಿ ಎಂದು ಅಂಗನವಾಡಿ ಸಹಾಯಕಿಯರಿಗೆ ಸೂಚಿಸಿದರು. ಅಂಗನವಾಡಿ ಕೇಂದ್ರ-1ರಲ್ಲಿ ಕಿಟಕಿಗಳು ಇಲ್ಲದಿರುವುದನ್ನು ನೋಡಿದರು. ವಿದ್ಯುತ್‌ ಬಿಲ್‌ ಕಟ್ಟದೇ ಇರುವುದಕ್ಕೆ ಸಂಪರ್ಕ ಕಡಿತಗೊಳಿಸಿದ್ದಾರೆ ಎಂದು ಅಂಗನವಾಡಿ ಸಹಾಯಕಿಯರು ತಿಳಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಶ್ರೇಯಾಂಶ ದೊಡ್ಡಮನಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.