ಪಡಿತರದಲ್ಲಿ ಜೋಳ-ರಾಗಿ ವಿತರಿಸಿ


Team Udayavani, Oct 10, 2017, 12:21 PM IST

bid1.jpg

ಬೀದರ: ಪಡಿತರ ವ್ಯವಸ್ಥೆಯಡಿ ಪೌಷ್ಟಿಕಾಂಶ ಇಲ್ಲದ ಅಕ್ಕಿ, ಗೋಧಿ ಬದಲು ಆಹಾರ ಸಂಸ್ಕೃತಿಯ ಅಂಗವಾಗಿರುವ ಜೋಳ, ರಾಗಿ ವಿತರಿಸಬೇಕು ಎಂದು ಡೆಕ್ಕನ್‌ ಡೆವಲಪ್‌ ಮೆಂಟ್‌ ಸಂಸ್ಥೆಯ ಮುಖ್ಯಸ್ಥ ಪಿ.ವಿ. ಸತೀಶ ಸಲಹೆ ನೀಡಿದರು.

ನಗರದ ಹೊರವಲಯದ ಪಶು ವಿವಿಯಲ್ಲಿ ಕರ್ನಾಟಕ ಕೃಷಿ ಆಯೋಗವು ಕರ್ನಾಟಕ ಆಹಾರ ಆಯೋಗ ಹಾಗೂ ವಿಶ್ವವಿದ್ಯಾಲಯದ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ಜೋಳ, ತೊಗರಿ ಆಧಾರಿತ ಕೃಷಿ, ಖರೀದಿ ಮತ್ತು ವಿತರಣೆ
ಸದೃಢಗೊಳಿಸುವ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಯಾವುದೋ ರಾಜ್ಯದಲ್ಲಿ ಬೆಳೆದ ಅಕ್ಕಿ-ಗೋಧಿಯನ್ನು ಪಡಿತರ ಮೂಲಕ ಯಾಕೆ ವಿತರಿಸಬೇಕು ಎಂದು ಪ್ರಶ್ನಿಸಿದರು.

ಉತ್ತರ ಕರ್ನಾಟಕದ ಮುಖ್ಯ ಆಹಾರ ಜೋಳ. ದಕ್ಷಿಣ ಕರ್ನಾಟಕದಲ್ಲಿ ರಾಗಿ ಬಳಕೆ ಅಧಿಕ. ಅಕ್ಕಿ ಗೋಧಿ ಯಾವ ಭಾಗದ ಮುಖ್ಯ ಆಹಾರವಾಗಿದೆ ಎಂದ ಅವರು, ಪಾರಂಪರಿಕ ಆಹಾರದ ಬದಲು ಬೇರೆ ಧಾನ್ಯಗಳನ್ನು ಪಡಿತರ ಮೂಲಕ ವಿತರಿಸುವುದು ಸರಿಯಲ್ಲ. ರಾಗಿ, ಜೋಳವನ್ನು ಸ್ಥಳೀಯವಾಗಿ ಖರೀದಿಸಿ ಪಡಿತರ ಮೂಲಕ ವಿತರಿಸಬೇಕು. ಇದರಿಂದ ಸಾಗಾಣಿಕೆ, ದಾಸ್ತಾನು ವೆಚ್ಚವೂ ಉಳಿಯುತ್ತದೆ. ಕೊರತೆ ಎನ್ನಿಸಿದಲ್ಲಿ ಈ ಬೆಳೆ ಬೆಳೆಯುವ ರೈತರಿಗೆ ವಿಶೇಷ ಸಹಾಯಧನ ನೀಡಬೇಕು ಎಂದು ಸಲಹೆ ನೀಡಿದರು.

ಬರೀ ಇಳುವರಿ ಅಧಿಕ ಬಂದರೆ ಸಾಕಾ, ಆಹಾರದಲ್ಲಿ ಪೌಷ್ಟಿಕತೆ ಇರಬಾರದಾ. ದೇಶದಲ್ಲಿ ಅಪೌಷ್ಟಿಕತೆ ಹೆಚ್ಚುತ್ತಿದ್ದು, ಪೌಷ್ಟಿಕತೆ ಇರುವ ಆಹಾರ ಧಾನ್ಯ ಬೆಳೆಯಲು ಸರ್ಕಾರ ಪ್ರೋತ್ಸಾಹಧನ ನೀಡಬೇಕು ಎಂದು ಸಲಹೆ ನೀಡಿದರು.

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ| ಪ್ರಕಾಶ ಕಮ್ಮರಡಿ ಮಾತನಾಡಿ, ಆರಂಭದಲ್ಲಿ ಪ್ರತಿ ಕಾರ್ಡ್‌ಗೆ 5 ಕಿಲೋದಂತೆ ರಾಗಿ ಕೊಟ್ಟು ನಂತರ ನಿಲ್ಲಿಸಲಾಯಿತು. ರಾಗಿ, ಜೋಳದ ಕ್ಷೇತ್ರ ಹೆಚ್ಚಬೇಕಾಗಿದೆ. ತೊಗರಿ ಸಮಸ್ಯೆ ಇಲ್ಲ. ಬೆಳೆದಷ್ಟೂ ರಾಗಿ, ಜೋಳ ಖರೀದಿಗೆ ಸರ್ಕಾರ ಸಿದ್ಧವಿದೆ. ಅಧಿಕ ಇಳುವರಿ ಕೊಡುವ ಹೊಸ ಹೊಸ ತಳಿಗಳನ್ನು ರೈತರು ಬೆಳೆಯಬೇಕು. ಇಳುವರಿ ಹೆಚ್ಚಿದರೆ ಬೆಲೆ ಸಮಸ್ಯೆ ಅಷ್ಟಾಗಿ ಕಾಡದು ಎಂದು ಅಭಿಪ್ರಾಯಪಟ್ಟರು.

ಆಹಾರ ಆಯೋಗದ ಅಧ್ಯಕ್ಷ ಡಾ| ಕೃಷ್ಣಮೂರ್ತಿ ಮಾತನಾಡಿ, ಆಯಾ ಪ್ರದೇಶದ ರೂಢಿಗತ ಆಹಾರ ನೀಡಬೇಕು ಎನ್ನುವುದು ಆಹಾರ ಭದ್ರತಾ ಕಾಯ್ದೆಯ ಆಶಯವಾಗಿದೆ. ಸಿರಿಧಾನ್ಯಗಳನ್ನು ಪಡಿತರ ಮೂಲಕ ವಿತರಿಸುವ ಕುರಿತು ಚರ್ಚೆ ನಡೆಯುತ್ತಲೇ ಇದೆ ಎಂದರು. 

ಸ್ಥಳೀಯವಾಗಿ ಬೆಳೆಯುವ ಆಹಾರಧಾನ್ಯಗಳನ್ನೇ ಪಡಿತರ ಮೂಲಕ ಖರೀದಿಸಿ ವಿತರಿಸಬೇಕೆಂಬ ಪಿ.ವಿ. ಸತೀಶ ಅವರ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿದ ಮಾತನಾಡಿದ ಆಯೋಗದ ಸದಸ್ಯ ವಿ.ಬಿ. ಪಾಟೀಲ, ಪಡಿತರ ಧಾನ್ಯಗಳನ್ನು ಸ್ಥಳೀಯವಾಗಿ ಖರೀದಿಸಿ ವಿತರಿಸುವ ಕಾರ್ಯ ಸಾಧ್ಯವೆ ಎಂದು ಪ್ರಶ್ನಿಸಿದರು. ಆಹಾರ ಧಾನ್ಯ ಕುರಿತ ವ್ಯಾಖ್ಯೆಯನ್ನು ಸರಿಯಾಗಿ ಅರ್ಥೈಸಬೇಕು. ಸಿರಿಧಾನ್ಯ ಸೇರಿಲ್ಲದಿದ್ದಲ್ಲಿ ಈ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಸಲಹೆ ನೀಡಿದರು.

ಉಪ ಕೃಷಿ ನಿರ್ದೇಶಕ ಸೋಮಶೇಖರ ಬಿರಾದಾರ ಸ್ವಾಗತಿಸಿದರು. ಕೆವಿಕೆ ವಿಜ್ಞಾನಿ ಭವಾನಿ ನಿರೂಪಿಸಿದರು. ಕೃಷಿ ಬೆಲೆ ಆಯೋಗ, ಆಹಾರ ಆಯೋಗದ ಸದಸ್ಯರು, ಕೃಷಿ ವಿಜ್ಞಾನಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.