ಔಷಧಿ ಸಸಿ ನೆಡಲು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಕಾಯಕಲ್ಪ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ಆಗುತ್ತಿರುವ ಅನಾನುಕೂಲತೆಗಳ ಬಗ್ಗೆ ಚರ್ಚಿಸಲಾಯಿತು.

Team Udayavani, Jul 7, 2021, 7:27 PM IST

Bidar

ಬೀದರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಗುಣಮಟ್ಟ ಖಾತ್ರಿ ಸಮಿತಿಯ ತ್ತೈಮಾಸಿಕ ಸಭೆ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕಾಯಕಲ್ಪ, ಎನ್‌ ಕ್ಯೂಎಎಸ್‌ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ತೋಟಗಾರಿಕೆ ಇಲಾಖೆಗೆ ಅನುಕೂಲವಾಗುವ ಹಾಗೂ ನೀರಿನ ವ್ಯವಸ್ಥೆ ಇರುವ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ವನಸ್ಪತಿ ಉದ್ಯಾನದ ಸಲುವಾಗಿ ಬೇಕಾಗಿರುವ ಔಷಧೀಯ ಸಸಿಗಳನ್ನು ನೆಡಲು ಕ್ರಮ ವಹಿಸಬೇಕು ಎಂದು ತೋಟಗಾರಿಕಾ ಉಪ ನಿರ್ದೇಶಕರಿಗೆ ಸೂಚಿಸಿದರು.

ಹಳೆಯ ಕಟ್ಟಡ ಹೊಂದಿದ ಆಸ್ಪತ್ರೆಗಳಿದ್ದಲ್ಲಿ ಅವುಗಳ ಪಟ್ಟಿ ಮಾಡಿ ಲೋಕೋಪಯೋಗಿ ಅಭಿಯಂತರರಿಗೆ ಸಲ್ಲಿಸಬೇಕು. ಈ ಬಗ್ಗೆ ಆಯಾ ತಹಶೀಲ್ದಾರರೊಂದಿಗೆ ಚರ್ಚಿಸಿ ಮುಂದಿನ ಕ್ರಮ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಆರೋಗ್ಯ ಸಂಸ್ಥೆಗಳ ಜಾಗದಲ್ಲಿ ಖಾಸಗಿ ಕಟ್ಟಡಗಳು ಅಥವಾ ರಸ್ತೆ ನಿರ್ಮಾಣ ಇನ್ನಾವುದೇ ರೀತಿಯ ಅತಿಕ್ರಮಣ ಆಗಿದ್ದ ವಿವರವಾದ ವರದಿಯನ್ನು ಸಂಸ್ಥೆವಾರು ಸಲ್ಲಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ನೀರುಪಯುಕ್ತ ವಸ್ತುಗಳನ್ನು ಒಂದು ತಿಂಗಳಲ್ಲಿ ಎಲ್ಲ ಆರೋಗ್ಯ ಸಂಸ್ಥೆಗಳಿಂದ ಟೆಂಡರ್‌ ಮೂಲಕ ವಿಲೇವಾರಿ ಮಾಡಿಸಲು ತಿಳಿಸಿದರು.

ತುರ್ತಾಗಿ ಪರಿಹಾರ ಧನ ನೀಡಿ:
ಕುಟುಂಬ ಕಲ್ಯಾಣ ಸಂತಾನಹರಣ ಶಸ್ತ್ರ ಚಿಕಿತ್ಸೆ ವಿಫಲವಾದ ಪ್ರಕರಣಗಳಿಗೆ ತುರ್ತಾಗಿ ಪರಿಹಾರ ಧನವನ್ನು ಆದ್ಯತೆ ಮೆರೆಗೆ ನೀಡಲು ಕ್ರಮ ವಹಿಸಬೇಕು ಎಂದು ಡಿಸಿ ಈ ವೇಳೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆ ಸುತ್ತಲಿನ ಪ್ರದೇಶವನ್ನು
ಪಂಚಾಯತ್‌ನಿಂದ ಕಾಲಕಾಲಕ್ಕೆ ಶುಚಿಗೊಳಿಸಲು ಎಲ್ಲ ಗ್ರಾ.ಪಂಗಳಿಗೆ ನಿರ್ದೇಶನ ನೀಡಿ ತಿಳಿಸಲು ಜಿ.ಪಂ ಸಿಇಒಗೆ ವಿನಂತಿಸುವುದಾಗಿ ಡಿಎಚ್‌ಒ ಡಾ| ವಿ.ಜಿ. ರೆಡ್ಡಿ ತಿಳಿಸಿದರು.

ಬೀದರ್‌ ಮೊದಲನೇ ಸ್ಥಾನ: ಕಾಯಕಲ್ಪ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ಆಗುತ್ತಿರುವ ಅನಾನುಕೂಲತೆಗಳ ಬಗ್ಗೆ ಚರ್ಚಿಸಲಾಯಿತು. ಅಂತರ ಮತ್ತು ಛಾಯಾ ಗುರಿ ಸಾಧನೆಯಲ್ಲಿ ರಾಜ್ಯದಲ್ಲಿ ಬೀದರ್‌ ಜಿಲ್ಲೆಯು ಮೊದಲನೇ ಸ್ಥಾನದಲ್ಲಿದೆ. ಕಾಯಕಲ್ಪ ಕಾರ್ಯಕ್ರಮದ ಕಳೆದ ವರ್ಷದ ಸಾಧನೆಗಳ ಬಗ್ಗೆ ಹಾಗೂ ಸದರಿ ವರ್ಷದ ಗುರಿಗಳ ಬಗ್ಗೆ ವೈದ್ಯಾಧಿಕಾರಿ ಡಾ| ಶಿವಶಂಕರ ಸಭೆಗೆ ವಿವರಿಸಿದರು.

ಆಸ್ಪತ್ರೆಗಳಿಗೆ ಅನುಮತಿ: ಟ್ಯೂಬೆಕ್ಟಮಿ ಎಂಪಾನಲಮೆಂಟ್‌ಗಾಗಿ ಮನವಿ ಸಲ್ಲಿಸಿದ್ದ ಐದು ಖಾಸಗಿ ಆಸ್ಪತ್ರೆಗಳಿಗೆ ಸಭೆಯಲ್ಲಿ ಅನುಮತಿ ನೀಡಲಾಯಿತು. ಸಿ.ಎ.ಸಿ ಸುರಕ್ಷಿತ ಗರ್ಭಪಾತಗಳನ್ನು ಮಾಡಲು ಮನವಿ ಸಲ್ಲಿಸಿದ ವೈದ್ಯರಿಗೆ ಕೂಡ ಇದೆ ವೇಳೆ
ಅನುಮತಿ ನೀಡಲಾಯಿತು. ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ವೈದ್ಯಾಧಿಕಾರಿ ಡಾ| ಮಹೇಶ ಬಿರಾದಾರ ಹಾಗೂ ಇನ್ನೀತರರು ಇದ್ದರು.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.