ಜಿಲ್ಲಾ ರೋಡ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ ನಾಳೆ


Team Udayavani, Oct 30, 2021, 10:34 AM IST

6cyicling

ಬೀದರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಅಮೆಚುರ್‌ ಸೈಕ್ಲಿಂಗ್‌ ಸಂಸ್ಥೆ ಮತ್ತು ಡಿಟ್ರ್ಯಾಕ್‌ ಸೈಕಲ್‌ ಸ್ಟೋರ್‌ನ ಆಶ್ರಯದಲ್ಲಿ 66ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ನಗರದಲ್ಲಿ ಅ.31ರಂದು ಜಿಲ್ಲಾ ರೋಡ್‌ ಸೈಕ್ಲಿಂಗ್‌ ಡಿಟ್ರ್ಯಾಕ್‌ ಚಾಂಪಿಯನ್‌ಶಿಪ್‌-21 ಆಯೋಜಿಸಲಾಗಿದೆ.

ಸಂಸ್ಥೆಯ ಗೌರವಾಧ್ಯಕ್ಷ ಶಿವರಾಜ ಢಣಕೆ, ಡಿಟ್ರ್ಯಾಕ್‌ ಮಾಲೀಕ ಧನೀಲ್‌ ಶಾಂತಪುರೆ ಮತ್ತು ಸೈಕ್ಲಿಂಗ್‌ ತರಬೇತಿದಾರ ಮೌಲಪ್ಪ ಮಾಳಗೆ ನಗರದಲ್ಲಿ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೋವಿಡ್‌ ಮತ್ತು ಲಾಕ್‌ಡೌನ್‌ ನಿಂದಾಗಿ ಮಕ್ಕಳ ಮಾನಸಿಕ ಸ್ಥಿತಿಯಲ್ಲಿ ಬದಲಾವಣೆ ಆಗಿದೆ. ಹಾಗಾಗಿ ಅವರಲ್ಲಿ ಸ್ಫೂರ್ತಿ ತುಂಬಿ, ಸದೃಢ ಆರೋಗ್ಯ ಕಾಪಾಡಲು ಉದ್ದೇಶದಿಂದ ಈ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಸ್ಪರ್ಧೆಯನ್ನು ಒಟ್ಟು 5 ವಿಭಾಗದಲ್ಲಿ ಸ್ಪರ್ಧೆ ನಡೆಸಲಾಗುತ್ತಿದೆ. ಯುವಕ- ಯುವತಿಯರಿಗಾಗಿ 20 ಕಿ.ಮೀ. (ಗೀಯರ್‌), 15 ಕಿ.ಮೀ. (ಗೀಯರ್‌ ಇಲ್ಲದ), 15 ವರ್ಷದೊಳಗಿನ ಬಾಲಕರಿಗೆ 12 ಕಿ.ಮೀ., ಬಾಲಕಿಯರಿಗೆ 5 ಕಿ.ಮೀ. ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಪ್ರಥಮ ಮತ್ತು ದ್ವಿತೀಯ ಪಟುಗಳಿಗೆ ಒಟ್ಟಾರೆ 1.08 ಲಕ್ಷ ರೂ. ಮೊತ್ತದ ಡಿಟ್ರ್ಯಾಕ್‌ ಸೈಕಲ್‌ಗ‌ಳನ್ನು ಬಹುಮಾನ ರೂಪದಲ್ಲಿ ನೀಡಲಾಗುವುದು. ಸ್ಪರ್ಧೆಗಾಗಿ ಅ.31ರವರೆಗೆ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.

ಇದನ್ನೂ ಓದಿ: ವಿಶ್ವಕಪ್ ಪಂದ್ಯದ ವೇಳೆ ಪಾಕ್-ಅಫ್ಘಾನ್ ಅಭಿಮಾನಿಗಳ ಹೊಡೆದಾಟ: ಟಿಕೆಟ್ ಇಲ್ಲದೆ ನುಗ್ಗಲು ಯತ್ನ

ನಗರದ ಆರ್‌ಟಿಒ ಕಚೇರಿ ಬಳಿ ಅಂದು ಬೆ. 6.45ಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಸ್ಪರ್ಧೆಗೆ ಚಾಲನೆ ನೀಡುವರು. ಸಿಇಒ ಜಹೀರಾ ನಸೀಮ್‌ ಅಧ್ಯಕ್ಷತೆ ವಹಿಸುವರು. ಎಸ್‌ಪಿ ನಾಗೇಶ ಡಿ.ಎಲ್‌, ಪೌರಾಯುಕ್ತ ರವೀಂದ್ರ ಅಂಗಡಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್‌.ಜಿ ನಾಡಗೀರ್‌, ಡಿಎಚ್‌ಒ ಡಾ| ವ್ಹಿ.ಜಿ ರೆಡ್ಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ರತಿಕಾಂತ ಸ್ವಾಮಿ, ಸಂಸ್ಥೆಯ ಜಿಲ್ಲಾಧ್ಯಕ್ಷ ಮುರಳೀಧರ ಎಕಲಾರಕರ್‌, ಸಂಸ್ಥೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಎ ಗಫರ್‌, ಜಿಲ್ಲಾ ಗೌರವಾಧ್ಯಕ್ಷ ಶಿವರಾಜ ಢಣಕೆ ಆಗಮಿಸುವರು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಿನೋದ ಸಿನ್ಹಾ, ಫೈರ್‌ಪ್ಯಾಕ್‌ ಸ್ಟೋಡಿಯೋ ನಿರ್ದೇಶಕಿ ರಚಿತಾ ಶಾಂತಪುರೆ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.